<p><strong>ಬೆಳಗಾವಿ:</strong> `ರೈಲ್ವೆ ಬಜೆಟ್ನಿಂದ ಬಹಳಷ್ಟು ನಿರೀಕ್ಷಿಸಿದ್ದ ಬೆಳಗಾವಿ ಜಿಲ್ಲೆಗೆ ನಿರಾಸೆಯಾಗಿದೆ. ಹೊಸ ಮಾರ್ಗ ಹಾಗೂ ಹೊಸ ರೈಲುಗಳ ಓಡಾಟದ ಬೇಡಿಕೆಗಳಿಗೆ ಸ್ಪಂದನೆ ಸಿಕ್ಕಿಲ್ಲ. ಬಹು ನಿರೀಕ್ಷಿತ ಬೆಳಗಾವಿ-ಧಾರವಾಡ (ಕಿತ್ತೂರು ಮಾರ್ಗ) ಯೋಜನೆಗೆ ಅನುಮೋದನೆ ನೀಡದೇ ಯೋಜನಾ ಆಯೋಗಕ್ಕೆ ಒಪ್ಪಿಸಿರುವುದು ನಿರಾಸೆ ಮೂಡಿಸಿದೆ~ ಎಂದು ಸಂಸದರಾದ ಸುರೇಶ ಅಂಗಡಿ ಹಾಗೂ ರಮೇಶ ಕತ್ತಿ ತಿಳಿಸಿದ್ದಾರೆ.<br /> <br /> `ಈಗಾಗಲೇ ಬೆಲೆ ಏರಿಕೆಯಿಂದ ತೀವ್ರ ತೊಂದರೆ ಎದುರಿಸುತ್ತಿರುವ ಜನ ಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗುವಂತೆ ರೈಲು ಪ್ರಯಾಣ ದರ ಏರಿಸಿರುವುದೇ ಸಚಿವರ ಸಾಧನೆಯಾಗಿದೆ~ ಎಂದು ಅವರು ವ್ಯಂಗ್ಯವಾಡಿದ್ದಾರೆ.<br /> <br /> `ರೈಲ್ವೆ ಇಲಾಖೆಯು ಹಣಕಾಸಿನ ತೊಂದರೆ ಎದುರಿಸುತ್ತಿದೆ ಎಂದಿರುವುದು ಸರ್ಕಾರದ ದಿವಾಳಿತನವನ್ನು ತೋರಿಸುತ್ತದೆ. ಕೇಂದ್ರ ಸರ್ಕಾರದಿಂದ ಯಾವುದೇ ಹೊಸ ಯೋಜನೆ ನಿರೀಕ್ಷಿಸಲು ಸಾಧ್ಯವಿಲ್ಲದಂತಾಗಿದೆ~ ಎಂದು ಟೀಕಿಸಿದ್ದಾರೆ.<br /> <br /> ಬೆಳಗಾವಿ-ಮುಂಬೈ, ಬೆಳಗಾವಿ-ಬೆಂಗಳೂರು ಇಂಟರಸಿಟಿ ಸೇರಿದಂತೆ ಹೊಸ ರೈಲುಗಳಿಗಾಗಿ ರೈಲ್ವೆ ಟ್ರ್ಯಾಕ್ ನಿರ್ಮಾಣಕ್ಕೆ ಮಾಡಿದ್ದ ಮನವಿಗೆ ಸ್ಪಂದಿಸಿಲ್ಲ ಎಂದು ದೂರಿದ್ದಾರೆ.<br /> <br /> `ಕುಡಚಿ-ಬಾಗಲಕೋಟೆ ಹೊಸ ರೈಲ್ವೆ ಲೈನ್ ನಿರ್ಮಿಸಲು ಭೂಸ್ವಾಧೀನಕ್ಕೆ ಬೇಕಾದ ಅನುದಾನ ನೀಡಿಲ್ಲ. ಹೀಗಾಗಿ ಭೂಸ್ವಾಧೀನ ಸಾಧ್ಯವಾಗಿಲ್ಲ. ಕರಾಡ- ಬೆಳಗಾವಿ ಯೋಜನೆ ಸರ್ವೆಗೆ ಈ ಹಿಂದೆ ಆದೇಶ ನೀಡಲಾಗಿತ್ತು. ಆದರೆ ಈ ಬಾರಿ ಅದರ ಪ್ರಸ್ತಾಪವೇ ಇಲ್ಲ~ ಎಂದು ಟೀಕಿಸಿದ್ದಾರೆ.<br /> <br /> ಮೀರಜ್-ಬೆಳಗಾವಿ, ಮೀರಜ್-ಲೊಂಡಾ ಮಾರ್ಗದ ರೈಲುಗಳ ಬೋಗಿ ಹೆಚ್ಚಳಕ್ಕೂ ಸ್ಪಂದಿಸಿಲ್ಲ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಆಗ್ರಹಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> `ರೈಲ್ವೆ ಬಜೆಟ್ನಿಂದ ಬಹಳಷ್ಟು ನಿರೀಕ್ಷಿಸಿದ್ದ ಬೆಳಗಾವಿ ಜಿಲ್ಲೆಗೆ ನಿರಾಸೆಯಾಗಿದೆ. ಹೊಸ ಮಾರ್ಗ ಹಾಗೂ ಹೊಸ ರೈಲುಗಳ ಓಡಾಟದ ಬೇಡಿಕೆಗಳಿಗೆ ಸ್ಪಂದನೆ ಸಿಕ್ಕಿಲ್ಲ. ಬಹು ನಿರೀಕ್ಷಿತ ಬೆಳಗಾವಿ-ಧಾರವಾಡ (ಕಿತ್ತೂರು ಮಾರ್ಗ) ಯೋಜನೆಗೆ ಅನುಮೋದನೆ ನೀಡದೇ ಯೋಜನಾ ಆಯೋಗಕ್ಕೆ ಒಪ್ಪಿಸಿರುವುದು ನಿರಾಸೆ ಮೂಡಿಸಿದೆ~ ಎಂದು ಸಂಸದರಾದ ಸುರೇಶ ಅಂಗಡಿ ಹಾಗೂ ರಮೇಶ ಕತ್ತಿ ತಿಳಿಸಿದ್ದಾರೆ.<br /> <br /> `ಈಗಾಗಲೇ ಬೆಲೆ ಏರಿಕೆಯಿಂದ ತೀವ್ರ ತೊಂದರೆ ಎದುರಿಸುತ್ತಿರುವ ಜನ ಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗುವಂತೆ ರೈಲು ಪ್ರಯಾಣ ದರ ಏರಿಸಿರುವುದೇ ಸಚಿವರ ಸಾಧನೆಯಾಗಿದೆ~ ಎಂದು ಅವರು ವ್ಯಂಗ್ಯವಾಡಿದ್ದಾರೆ.<br /> <br /> `ರೈಲ್ವೆ ಇಲಾಖೆಯು ಹಣಕಾಸಿನ ತೊಂದರೆ ಎದುರಿಸುತ್ತಿದೆ ಎಂದಿರುವುದು ಸರ್ಕಾರದ ದಿವಾಳಿತನವನ್ನು ತೋರಿಸುತ್ತದೆ. ಕೇಂದ್ರ ಸರ್ಕಾರದಿಂದ ಯಾವುದೇ ಹೊಸ ಯೋಜನೆ ನಿರೀಕ್ಷಿಸಲು ಸಾಧ್ಯವಿಲ್ಲದಂತಾಗಿದೆ~ ಎಂದು ಟೀಕಿಸಿದ್ದಾರೆ.<br /> <br /> ಬೆಳಗಾವಿ-ಮುಂಬೈ, ಬೆಳಗಾವಿ-ಬೆಂಗಳೂರು ಇಂಟರಸಿಟಿ ಸೇರಿದಂತೆ ಹೊಸ ರೈಲುಗಳಿಗಾಗಿ ರೈಲ್ವೆ ಟ್ರ್ಯಾಕ್ ನಿರ್ಮಾಣಕ್ಕೆ ಮಾಡಿದ್ದ ಮನವಿಗೆ ಸ್ಪಂದಿಸಿಲ್ಲ ಎಂದು ದೂರಿದ್ದಾರೆ.<br /> <br /> `ಕುಡಚಿ-ಬಾಗಲಕೋಟೆ ಹೊಸ ರೈಲ್ವೆ ಲೈನ್ ನಿರ್ಮಿಸಲು ಭೂಸ್ವಾಧೀನಕ್ಕೆ ಬೇಕಾದ ಅನುದಾನ ನೀಡಿಲ್ಲ. ಹೀಗಾಗಿ ಭೂಸ್ವಾಧೀನ ಸಾಧ್ಯವಾಗಿಲ್ಲ. ಕರಾಡ- ಬೆಳಗಾವಿ ಯೋಜನೆ ಸರ್ವೆಗೆ ಈ ಹಿಂದೆ ಆದೇಶ ನೀಡಲಾಗಿತ್ತು. ಆದರೆ ಈ ಬಾರಿ ಅದರ ಪ್ರಸ್ತಾಪವೇ ಇಲ್ಲ~ ಎಂದು ಟೀಕಿಸಿದ್ದಾರೆ.<br /> <br /> ಮೀರಜ್-ಬೆಳಗಾವಿ, ಮೀರಜ್-ಲೊಂಡಾ ಮಾರ್ಗದ ರೈಲುಗಳ ಬೋಗಿ ಹೆಚ್ಚಳಕ್ಕೂ ಸ್ಪಂದಿಸಿಲ್ಲ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಆಗ್ರಹಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>