<p>ಹೊಸಪೇಟೆ: ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದಲ್ಲಿ ಹೊಸಪೇಟೆ ಬಳ್ಳಾರಿ ಭಾಗದ ರೈಲ್ವೆ ಬೇಡಿಕೆಗಳನ್ನು ಪರಿಹರಿಸು ವಂತೆ ರೈಲ್ವೆ ಸಲಹಾ ಸಮಿತಿ ಸದಸ್ಯರು ವಿಭಾಗೀಯ ರೈಲ್ವೆ ವ್ಯವ ಸ್ಥಾಪಕ ಪ್ರವೀಣಕುಮಾರ್ ಮಿಶ್ರಾಗೆ ಮನವಿ ಪತ್ರ ಸಲ್ಲಿಸಿದರು. <br /> <br /> ಹುಬ್ಬಳಿಯಲ್ಲಿ ಶನಿವಾರ ನಡೆದ ವಿಭಾಗೀಯ ರೈಲ್ವೆ ಸಲಹಾ ಸಮಿತಿ ಸದಸ್ಯರ ಸಭೆಯಲ್ಲಿ ಹೊಸಪೇಟೆ, ಬಳ್ಳಾರಿ ಭಾಗದ ರೈಲ್ವೆ ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಈ ಭಾಗದ ಬೇಡಿಕೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಆಗ್ರಹಿಸಿದರು. <br /> <br /> ಬೇಡಿಕೆಗಳು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹೊಸಪೇಟೆ- ಕೊಟ್ಟೂರು-ಹರಿಹರ ರೈಲು ಮಾರ್ಗ ವನ್ನು ಸಂಚಾರಕ್ಕೆ ಮುಕ್ತಗೊಳಿಸ ಬೇಕು. ವಾರಕ್ಕೊಮ್ಮೆ ಸಂಚರಿಸುವ ಮೈಸೂರು- ಶಿರಡಿ ರೈಲಿಗೆ ಪ್ರಯಾಣಿಕ ರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.<br /> <br /> ಆದರೆ ಅದೇ ಗಾಡಿ ಮೂಲಕ ವಾಪಸ್ಸಾಗಲು ಪ್ರಯಾಣಿಕ ರಿಗೆ ಆಗುತ್ತಿರುವ ತೊಂದರೆ ನಿವಾರಿ ಸಲು ನಿರ್ಗಮನದ ವೇಳೆಯನ್ನು ರಾತ್ರಿ 10 ಗಂಟೆಗೆ ಅಥವಾ ಮರುದಿನ ಮುಂಜಾನೆ ನಿರ್ಗಮಿಸುವಂತೆ ವ್ಯವಸ್ಥೆ ಮಾಡಬೇಕು, ಬಳ್ಳಾರಿ, ಹೊಸಪೇಟೆ ಮಾರ್ಗವಾಗಿ ಚನ್ನೈ-ಮುಂಬೈ ನಡುವೆ ನೂತನ ರೈಲು ಆರಂಭ, ಹೈದ್ರಾಬಾದ್-ಕೊಲ್ಹಾಪುರ ವಿಶೇಷ ಗಾಡಿ 5 ದಿನಗಳವರೆಗೆ ವಿಸ್ತರಣೆ ಮಾಡುವಂತೆ ಆಗ್ರಹಿಸಲಾಯಿತು. <br /> <br /> ವಿಶ್ವ ಪರಂಪರೆ ತಾಣ ಹಂಪಿಗೆ ಸಮೀಪದಲ್ಲಿರುವ ಹೊಸಪೇಟೆ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲ ಸೌಲಭ್ಯಗಳನ್ನು ಒದಗಿಸಿ, 2010-2011ನೇ ರೈಲ್ವೆ ಬಜೆಟ್ಟಿನಲ್ಲಿ ಪ್ರಕಟಿಸಿರುವಂತೆ ಮಾದರಿ ರೈಲು ನಿಲ್ದಾಣವನ್ನಾಗಿ ಅಭಿವೃದ್ಧಿ ಗೊಳಿಸುವಂತೆ ಒತ್ತಾಯಿಸಲಾಯಿತು.<br /> <br /> ವಿಭಾಗೀಯ ರೈಲ್ವೆ ಸಲಹಾ ಸಮಿತಿಯ ಸದಸ್ಯ ಅಶೋಕ ಜೀರೆ, ಹೊಸಪೇಟೆ ರೈಲ್ವೆ ಸಮಿತಿಯ ವೈ. ಯಮುನೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ: ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದಲ್ಲಿ ಹೊಸಪೇಟೆ ಬಳ್ಳಾರಿ ಭಾಗದ ರೈಲ್ವೆ ಬೇಡಿಕೆಗಳನ್ನು ಪರಿಹರಿಸು ವಂತೆ ರೈಲ್ವೆ ಸಲಹಾ ಸಮಿತಿ ಸದಸ್ಯರು ವಿಭಾಗೀಯ ರೈಲ್ವೆ ವ್ಯವ ಸ್ಥಾಪಕ ಪ್ರವೀಣಕುಮಾರ್ ಮಿಶ್ರಾಗೆ ಮನವಿ ಪತ್ರ ಸಲ್ಲಿಸಿದರು. <br /> <br /> ಹುಬ್ಬಳಿಯಲ್ಲಿ ಶನಿವಾರ ನಡೆದ ವಿಭಾಗೀಯ ರೈಲ್ವೆ ಸಲಹಾ ಸಮಿತಿ ಸದಸ್ಯರ ಸಭೆಯಲ್ಲಿ ಹೊಸಪೇಟೆ, ಬಳ್ಳಾರಿ ಭಾಗದ ರೈಲ್ವೆ ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಈ ಭಾಗದ ಬೇಡಿಕೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಆಗ್ರಹಿಸಿದರು. <br /> <br /> ಬೇಡಿಕೆಗಳು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹೊಸಪೇಟೆ- ಕೊಟ್ಟೂರು-ಹರಿಹರ ರೈಲು ಮಾರ್ಗ ವನ್ನು ಸಂಚಾರಕ್ಕೆ ಮುಕ್ತಗೊಳಿಸ ಬೇಕು. ವಾರಕ್ಕೊಮ್ಮೆ ಸಂಚರಿಸುವ ಮೈಸೂರು- ಶಿರಡಿ ರೈಲಿಗೆ ಪ್ರಯಾಣಿಕ ರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.<br /> <br /> ಆದರೆ ಅದೇ ಗಾಡಿ ಮೂಲಕ ವಾಪಸ್ಸಾಗಲು ಪ್ರಯಾಣಿಕ ರಿಗೆ ಆಗುತ್ತಿರುವ ತೊಂದರೆ ನಿವಾರಿ ಸಲು ನಿರ್ಗಮನದ ವೇಳೆಯನ್ನು ರಾತ್ರಿ 10 ಗಂಟೆಗೆ ಅಥವಾ ಮರುದಿನ ಮುಂಜಾನೆ ನಿರ್ಗಮಿಸುವಂತೆ ವ್ಯವಸ್ಥೆ ಮಾಡಬೇಕು, ಬಳ್ಳಾರಿ, ಹೊಸಪೇಟೆ ಮಾರ್ಗವಾಗಿ ಚನ್ನೈ-ಮುಂಬೈ ನಡುವೆ ನೂತನ ರೈಲು ಆರಂಭ, ಹೈದ್ರಾಬಾದ್-ಕೊಲ್ಹಾಪುರ ವಿಶೇಷ ಗಾಡಿ 5 ದಿನಗಳವರೆಗೆ ವಿಸ್ತರಣೆ ಮಾಡುವಂತೆ ಆಗ್ರಹಿಸಲಾಯಿತು. <br /> <br /> ವಿಶ್ವ ಪರಂಪರೆ ತಾಣ ಹಂಪಿಗೆ ಸಮೀಪದಲ್ಲಿರುವ ಹೊಸಪೇಟೆ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲ ಸೌಲಭ್ಯಗಳನ್ನು ಒದಗಿಸಿ, 2010-2011ನೇ ರೈಲ್ವೆ ಬಜೆಟ್ಟಿನಲ್ಲಿ ಪ್ರಕಟಿಸಿರುವಂತೆ ಮಾದರಿ ರೈಲು ನಿಲ್ದಾಣವನ್ನಾಗಿ ಅಭಿವೃದ್ಧಿ ಗೊಳಿಸುವಂತೆ ಒತ್ತಾಯಿಸಲಾಯಿತು.<br /> <br /> ವಿಭಾಗೀಯ ರೈಲ್ವೆ ಸಲಹಾ ಸಮಿತಿಯ ಸದಸ್ಯ ಅಶೋಕ ಜೀರೆ, ಹೊಸಪೇಟೆ ರೈಲ್ವೆ ಸಮಿತಿಯ ವೈ. ಯಮುನೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>