<p><strong>ಹುಬ್ಬಳ್ಳಿ: </strong>ರೈಲ್ವೆ ಅಭಿವೃದ್ಧಿ ಕುರಿತು ಇದೇ ತಿಂಗಳ 20ರಂದು ನಡೆಯುವ ಸಮಾಲೋಚನ ಸಭೆಯು ನೈರುತ್ಯ ರೈಲ್ವೆಯ ಕೇಂದ್ರ ಸ್ಥಾನವಾದ ಹುಬ್ಬಳ್ಳಿಯಲ್ಲಿ ನಡೆಯುವುದು ಸೂಕ್ತ ಎಂದು ಪತ್ರಕರ್ತ ಡಾ. ಪಾಟೀಲ ಪುಟ್ಟಪ್ಪ ಗುರುವಾರ ಇಲ್ಲಿ ಹೇಳಿದರು.<br /> <br /> ತಮ್ಮನ್ನು ಭೇಟಿ ಮಾಡಿದ ಕರ್ನಾಟಕ ಅಭಿವೃದ್ಧಿ ವೇದಿಕೆ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಇದೊಂದು ಮಹತ್ವದ ಸಭೆಯಾಗಿದ್ದು ರೈಲ್ವೆ ಅಭಿವೃದ್ಧಿ ಕುರಿತು ಚರ್ಚಿಸಲಿರುವುದು ಸಮಯೋಚಿತವಾಗಿದೆ ಎಂದರು.<br /> <br /> ಚಪ್ಪೆ ಮೂಳೆ ಮುರಿತ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಪಾಟೀಲ ಪುಟ್ಟಪ್ಪ ಅವರು ಬೇಗ ಗುಣಮುಖರಾಗಲೆಂದು ವೇದಿಕೆಯ ಪದಾಧಿಕಾರಿಗಳು ಇದೇ ಸಂದರ್ಭದಲ್ಲಿ ಹಾರೈಸಿದರು. ಆರ್.ಆರ್.ಹೊಂಬಳ, ಮಹೇಂದ್ರ ಸಿಂಘಿ. ಅಂದಾನಪ್ಪ ಸಜ್ಜನರ, ಬಾಬಾಜಾನ್ ಮುಧೋಳ, ಬಿ.ಎ.ಮುಧೋಳ, ರಾಜಶೇಖರ ಮೆಣಸಿನಕಾಯಿ, ನಿಜಗುಣಿ, ಕೆಲಗೇರಿ, ನಂದಕುಮಾರ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ರೈಲ್ವೆ ಅಭಿವೃದ್ಧಿ ಕುರಿತು ಇದೇ ತಿಂಗಳ 20ರಂದು ನಡೆಯುವ ಸಮಾಲೋಚನ ಸಭೆಯು ನೈರುತ್ಯ ರೈಲ್ವೆಯ ಕೇಂದ್ರ ಸ್ಥಾನವಾದ ಹುಬ್ಬಳ್ಳಿಯಲ್ಲಿ ನಡೆಯುವುದು ಸೂಕ್ತ ಎಂದು ಪತ್ರಕರ್ತ ಡಾ. ಪಾಟೀಲ ಪುಟ್ಟಪ್ಪ ಗುರುವಾರ ಇಲ್ಲಿ ಹೇಳಿದರು.<br /> <br /> ತಮ್ಮನ್ನು ಭೇಟಿ ಮಾಡಿದ ಕರ್ನಾಟಕ ಅಭಿವೃದ್ಧಿ ವೇದಿಕೆ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಇದೊಂದು ಮಹತ್ವದ ಸಭೆಯಾಗಿದ್ದು ರೈಲ್ವೆ ಅಭಿವೃದ್ಧಿ ಕುರಿತು ಚರ್ಚಿಸಲಿರುವುದು ಸಮಯೋಚಿತವಾಗಿದೆ ಎಂದರು.<br /> <br /> ಚಪ್ಪೆ ಮೂಳೆ ಮುರಿತ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಪಾಟೀಲ ಪುಟ್ಟಪ್ಪ ಅವರು ಬೇಗ ಗುಣಮುಖರಾಗಲೆಂದು ವೇದಿಕೆಯ ಪದಾಧಿಕಾರಿಗಳು ಇದೇ ಸಂದರ್ಭದಲ್ಲಿ ಹಾರೈಸಿದರು. ಆರ್.ಆರ್.ಹೊಂಬಳ, ಮಹೇಂದ್ರ ಸಿಂಘಿ. ಅಂದಾನಪ್ಪ ಸಜ್ಜನರ, ಬಾಬಾಜಾನ್ ಮುಧೋಳ, ಬಿ.ಎ.ಮುಧೋಳ, ರಾಜಶೇಖರ ಮೆಣಸಿನಕಾಯಿ, ನಿಜಗುಣಿ, ಕೆಲಗೇರಿ, ನಂದಕುಮಾರ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>