<p><strong>ಬೆಂಗಳೂರು: </strong>ಹೊಲಿಗೆ ಯಂತ್ರದ ಅಂಗಡಿ ಮಾಲೀಕರೊಬ್ಬರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿ ಐದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಹೊತ್ತ ಅಮೃತಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ರತ್ನಾಕರ ಶೆಟ್ಟಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ಕೋರ್ಟ್ ಸೋಮವಾರ ನಿರಾಕರಿಸಿದೆ.<br /> <br /> ಇವರ ಮೇಲೆ ಗಂಭೀರವಾದ ಆರೋಪ ಇದ್ದುದರಿಂದ ಜಾಮೀನು ನೀಡಲಾಗದು ಎಂದು ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ತಿಳಿಸಿದ್ದಾರೆ.<br /> <br /> ಶಿವಾಜಿನಗರದಲ್ಲಿರುವ ನೂರ್ ಅಹ್ಮದ್ ಎಂಬುವರ ಹೊಲಿಗೆ ಯಂತ್ರದ ಅಂಗಡಿಗೆ ಸೆಪ್ಟೆಂಬರ್ 2ರಂದು ಬಂದಿದ್ದ ರತ್ನಾಕರ ಶೆಟ್ಟಿ, ಕಳವು ಮಾಲು ಖರೀದಿ ಸಿದ್ದ ಆರೋಪದ ಮೇಲೆ ತಪಾಸಣೆ ನಡೆಸಿದ್ದರು. ಬಳಿಕ ಅಂಗಡಿ ಮಾಲೀಕರನ್ನು ಠಾಣೆಗೆ ಕರೆದೊಯ್ದು ಹಿಂಸಿಸಿದ್ದರು.<br /> <br /> ಅಂಗಡಿಯಲ್ಲಿದ್ದ 45 ಹೊಲಿಗೆ ಯಂತ್ರಗಳನ್ನೂ ಠಾಣೆಗೆ ತೆಗೆದುಕೊಂಡು ಹೋಗಿದ್ದರು. ಮೂರು ದಿನಗಳ ಕಾಲ ಅಂಗಡಿ ಮಾಲೀಕನನ್ನು ಠಾಣೆಯಲ್ಲಿ ಇರಿಸಿಕೊಂಡಿದ್ದ ಅವರು, ಐದು ಲಕ್ಷ ರೂಪಾಯಿ ನೀಡದಿದ್ದರೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಅಹ್ಮದ್ ಅವರಿಗೆ ಬೆದರಿಕೆ ಒಡ್ಡಿದ್ದರು ಎನ್ನುವುದು ಆರೋಪ.<br /> <br /> 50 ಸಾವಿರ ರೂಪಾಯಿ ನೀಡುವು ದಾಗಿ ಹೇಳಿ ಠಾಣೆಯಿಂದ ಹೊರ ಬಂದಿದ್ದ ಅಹ್ಮದ್ ಲೋಕಾ ಯುಕ್ತರಲ್ಲಿ ದೂರು ದಾಖಲಿಸಿದ್ದರು. ಲೋಕಾಯುಕ್ತ ಪೊಲೀಸರು ನೀಡಿದ್ದ ರೆಕಾರ್ಡರ್ನಲ್ಲಿ ಲಂಚದ ಕುರಿತು ಸಾಕ್ಷ್ಯ ಕಲೆ ಹಾಕಿದ್ದರು. <br /> <br /> ಇದರ ಆಧಾರದ ಮೇಲೆ ಲೋಕಾ ಯುಕ್ತ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿ ಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮನ್ನು ಬಂಧಿಸುವ ಭಯದಿಂದ ಅವರು ನಿರೀಕ್ಷಣಾ ಜಾಮೀನು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹೊಲಿಗೆ ಯಂತ್ರದ ಅಂಗಡಿ ಮಾಲೀಕರೊಬ್ಬರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿ ಐದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಹೊತ್ತ ಅಮೃತಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ರತ್ನಾಕರ ಶೆಟ್ಟಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ಕೋರ್ಟ್ ಸೋಮವಾರ ನಿರಾಕರಿಸಿದೆ.<br /> <br /> ಇವರ ಮೇಲೆ ಗಂಭೀರವಾದ ಆರೋಪ ಇದ್ದುದರಿಂದ ಜಾಮೀನು ನೀಡಲಾಗದು ಎಂದು ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ತಿಳಿಸಿದ್ದಾರೆ.<br /> <br /> ಶಿವಾಜಿನಗರದಲ್ಲಿರುವ ನೂರ್ ಅಹ್ಮದ್ ಎಂಬುವರ ಹೊಲಿಗೆ ಯಂತ್ರದ ಅಂಗಡಿಗೆ ಸೆಪ್ಟೆಂಬರ್ 2ರಂದು ಬಂದಿದ್ದ ರತ್ನಾಕರ ಶೆಟ್ಟಿ, ಕಳವು ಮಾಲು ಖರೀದಿ ಸಿದ್ದ ಆರೋಪದ ಮೇಲೆ ತಪಾಸಣೆ ನಡೆಸಿದ್ದರು. ಬಳಿಕ ಅಂಗಡಿ ಮಾಲೀಕರನ್ನು ಠಾಣೆಗೆ ಕರೆದೊಯ್ದು ಹಿಂಸಿಸಿದ್ದರು.<br /> <br /> ಅಂಗಡಿಯಲ್ಲಿದ್ದ 45 ಹೊಲಿಗೆ ಯಂತ್ರಗಳನ್ನೂ ಠಾಣೆಗೆ ತೆಗೆದುಕೊಂಡು ಹೋಗಿದ್ದರು. ಮೂರು ದಿನಗಳ ಕಾಲ ಅಂಗಡಿ ಮಾಲೀಕನನ್ನು ಠಾಣೆಯಲ್ಲಿ ಇರಿಸಿಕೊಂಡಿದ್ದ ಅವರು, ಐದು ಲಕ್ಷ ರೂಪಾಯಿ ನೀಡದಿದ್ದರೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಅಹ್ಮದ್ ಅವರಿಗೆ ಬೆದರಿಕೆ ಒಡ್ಡಿದ್ದರು ಎನ್ನುವುದು ಆರೋಪ.<br /> <br /> 50 ಸಾವಿರ ರೂಪಾಯಿ ನೀಡುವು ದಾಗಿ ಹೇಳಿ ಠಾಣೆಯಿಂದ ಹೊರ ಬಂದಿದ್ದ ಅಹ್ಮದ್ ಲೋಕಾ ಯುಕ್ತರಲ್ಲಿ ದೂರು ದಾಖಲಿಸಿದ್ದರು. ಲೋಕಾಯುಕ್ತ ಪೊಲೀಸರು ನೀಡಿದ್ದ ರೆಕಾರ್ಡರ್ನಲ್ಲಿ ಲಂಚದ ಕುರಿತು ಸಾಕ್ಷ್ಯ ಕಲೆ ಹಾಕಿದ್ದರು. <br /> <br /> ಇದರ ಆಧಾರದ ಮೇಲೆ ಲೋಕಾ ಯುಕ್ತ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿ ಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮನ್ನು ಬಂಧಿಸುವ ಭಯದಿಂದ ಅವರು ನಿರೀಕ್ಷಣಾ ಜಾಮೀನು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>