<p><strong>ಬೆಂಗಳೂರು: </strong>ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಇಬ್ಬರು ನೌಕರರ ವಿರುದ್ಧದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಹಿಂದಿನ ಆಯುಕ್ತ (ಈಗ ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ) ಭರತ್ಲಾಲ್ ಮೀನಾ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಸೋಮವಾರ ಪ್ರತಿಕೂಲ ಸಾಕ್ಷ್ಯ ನುಡಿದಿದ್ದಾರೆ.<br /> <br /> ಜಾಹೀರಾತು ಫಲಕ ಅಳವಡಿಕೆಗೆ ಅನುಮತಿ ನೀಡಲು ಎಂ.ರವೀಂದ್ರ ಎಂಬುವರಿಂದ 8,000 ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಪಾಲಿಕೆಯ ತೆರಿಗೆ ಮೌಲ್ಯಮಾಪಕ ಯತಿರಾಜ್ ಮತ್ತು ದ್ವಿತೀಯ ದರ್ಜೆ ಸಹಾಯಕ ಅಂಥೋಣಿ ರಾಜ್ ಎಂಬುವರನ್ನು ಲೋಕಾಯುಕ್ತ ಪೊಲೀಸರು 2009ರಲ್ಲಿ ಬಂಧಿಸಿದ್ದರು.<br /> <br /> ಆಗ ಪಾಲಿಕೆ ಆಯುಕ್ತರಾಗಿದ್ದ ಮೀನಾ ಅವರು ಆರೋಪಿಗಳ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಕಲಂ 19ರ ಅಡಿ ಲೋಕಾಯುಕ್ತ ಪೊಲೀಸರಿಗೆ ಅನುಮತಿ ನೀಡಿದ್ದರು.<br /> <br /> ಈ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಸೋಮವಾರ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನುಡಿಯುವಂತೆ ಮೀನಾ ಅವರಿಗೆ ಸೂಚಿಸಲಾಗಿತ್ತು. <br /> <br /> ನ್ಯಾಯಾಲಯಕ್ಕೆ ಹಾಜರಾದ ಅವರು, `ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ ಮತ್ತು `ಭ್ರಷ್ಟಾಚಾರದ ವಿರುದ್ಧ ಕಾಯ್ದೆ~ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡಿದ್ದೆ~ ಎಂದು ತಿಳಿಸಿದರು (ಇಂತಹ ಕಾಯ್ದೆಗಳೇ ಇಲ್ಲ).<br /> <br /> `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಕಲಂ 7 ಮತ್ತು ಕಲಂ 13 (1)(ಇ) ಕುರಿತು ನಿಮಗೇನು ಗೊತ್ತು~ ಎಂದು ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಅವರು ಪ್ರಶ್ನಿಸಿದರು. `ಈ ಕಲಮುಗಳ ಅಡಿಯಲ್ಲೇ ನಾನು ಲೋಕಾಯುಕ್ತ ಪೊಲೀಸರಿಗೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡಿದ್ದೇನೆ~ ಎಂದು ಮೀನಾ ಉತ್ತರಿಸಿದರು.<br /> <br /> ನಂತರ ಅಧಿಕಾರಿಯನ್ನು ಪಾಟಿಸವಾಲಿಗೆ ಒಳಪಡಿಸಲು ಲೋಕಾಯುಕ್ತ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಅವರಿಗೆ ನ್ಯಾಯಾಲಯ ಅವಕಾಶ ನೀಡಿತು. `ನೀವು ಉಲ್ಲೇಖಿಸಿರುವ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಕಲಮುಗಳು ಶಿಕ್ಷೆಗೆ ಸಂಬಂಧಿಸಿದವು~ ಎಂದು ಎಸ್ಪಿಪಿ ಹೇಳಿದರು. ತಮ್ಮ ನಿಲುವಿಗೆ ಅಂಟಿಕೊಂಡ ಮೀನಾ, ಅವು ದಂಡನೆಯ ಪ್ರಮಾಣವನ್ನೂ ವಿವರಿಸುತ್ತವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಇಬ್ಬರು ನೌಕರರ ವಿರುದ್ಧದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಹಿಂದಿನ ಆಯುಕ್ತ (ಈಗ ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ) ಭರತ್ಲಾಲ್ ಮೀನಾ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಸೋಮವಾರ ಪ್ರತಿಕೂಲ ಸಾಕ್ಷ್ಯ ನುಡಿದಿದ್ದಾರೆ.<br /> <br /> ಜಾಹೀರಾತು ಫಲಕ ಅಳವಡಿಕೆಗೆ ಅನುಮತಿ ನೀಡಲು ಎಂ.ರವೀಂದ್ರ ಎಂಬುವರಿಂದ 8,000 ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಪಾಲಿಕೆಯ ತೆರಿಗೆ ಮೌಲ್ಯಮಾಪಕ ಯತಿರಾಜ್ ಮತ್ತು ದ್ವಿತೀಯ ದರ್ಜೆ ಸಹಾಯಕ ಅಂಥೋಣಿ ರಾಜ್ ಎಂಬುವರನ್ನು ಲೋಕಾಯುಕ್ತ ಪೊಲೀಸರು 2009ರಲ್ಲಿ ಬಂಧಿಸಿದ್ದರು.<br /> <br /> ಆಗ ಪಾಲಿಕೆ ಆಯುಕ್ತರಾಗಿದ್ದ ಮೀನಾ ಅವರು ಆರೋಪಿಗಳ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಕಲಂ 19ರ ಅಡಿ ಲೋಕಾಯುಕ್ತ ಪೊಲೀಸರಿಗೆ ಅನುಮತಿ ನೀಡಿದ್ದರು.<br /> <br /> ಈ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಸೋಮವಾರ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನುಡಿಯುವಂತೆ ಮೀನಾ ಅವರಿಗೆ ಸೂಚಿಸಲಾಗಿತ್ತು. <br /> <br /> ನ್ಯಾಯಾಲಯಕ್ಕೆ ಹಾಜರಾದ ಅವರು, `ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ ಮತ್ತು `ಭ್ರಷ್ಟಾಚಾರದ ವಿರುದ್ಧ ಕಾಯ್ದೆ~ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡಿದ್ದೆ~ ಎಂದು ತಿಳಿಸಿದರು (ಇಂತಹ ಕಾಯ್ದೆಗಳೇ ಇಲ್ಲ).<br /> <br /> `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಕಲಂ 7 ಮತ್ತು ಕಲಂ 13 (1)(ಇ) ಕುರಿತು ನಿಮಗೇನು ಗೊತ್ತು~ ಎಂದು ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಅವರು ಪ್ರಶ್ನಿಸಿದರು. `ಈ ಕಲಮುಗಳ ಅಡಿಯಲ್ಲೇ ನಾನು ಲೋಕಾಯುಕ್ತ ಪೊಲೀಸರಿಗೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡಿದ್ದೇನೆ~ ಎಂದು ಮೀನಾ ಉತ್ತರಿಸಿದರು.<br /> <br /> ನಂತರ ಅಧಿಕಾರಿಯನ್ನು ಪಾಟಿಸವಾಲಿಗೆ ಒಳಪಡಿಸಲು ಲೋಕಾಯುಕ್ತ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಅವರಿಗೆ ನ್ಯಾಯಾಲಯ ಅವಕಾಶ ನೀಡಿತು. `ನೀವು ಉಲ್ಲೇಖಿಸಿರುವ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಕಲಮುಗಳು ಶಿಕ್ಷೆಗೆ ಸಂಬಂಧಿಸಿದವು~ ಎಂದು ಎಸ್ಪಿಪಿ ಹೇಳಿದರು. ತಮ್ಮ ನಿಲುವಿಗೆ ಅಂಟಿಕೊಂಡ ಮೀನಾ, ಅವು ದಂಡನೆಯ ಪ್ರಮಾಣವನ್ನೂ ವಿವರಿಸುತ್ತವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>