<p><strong>ಗದಗ: </strong>ಮುನ್ಸೂಚನೆ ಇಲ್ಲದೆ ರೈತರ ಜಮೀನಿನಲ್ಲಿ ಜೆಸಿಬಿ ಯಂತ್ರದ ಮೂಲಕ ಗುಂಡಿ ತೆಗೆಯುತ್ತಿದ್ದ ಕಾರ್ಯವನ್ನು ತಡೆಹಿಡಿದ ಘಟನೆ ತಾಲ್ಲೂಕಿನ ಲಕ್ಕುಂಡಿಯಲ್ಲಿ ಶನಿವಾರ ಸಂಜೆ ನಡೆದಿದೆ. <br /> <br /> ಬೆಂಗಳೂರಿನ ದಾಬೋಲ ಗ್ಯಾಸ್ ಕಂಪೆನಿಯ ಪೈಪ್ಲೈನ್ ಅಳವಡಿಕೆಗಾಗಿ ಜಮೀನುಗಳಲ್ಲಿ ಗುಂಡಿ ತೆಗೆಯಲಾಗುತ್ತಿತ್ತು. ಇದರಿಂದ ಆಕ್ರೋಶಗೊಂಡ ರೈತರು ಯಂತ್ರಗಳನ್ನು ತಡೆಹಿಡಿದರು. ಕೊನೆಗೆ ಕಂಪೆನಿಯವರು ಕಾಮಗಾರಿಯನ್ನು ಅರ್ಧಕ್ಕೆ ಬಿಟ್ಟು ಕಾಲ್ಕಿತ್ತರು. <br /> <br /> ಲಕ್ಕುಂಡಿ ಗ್ರಾಮದ ಅಂದಾಜು 80 ಎಕರೆ ಭೂಮಿಯಲ್ಲಿ ಈ ಯೋಜನೆ ಕಾಮಗಾರಿ ನಡೆಯುತ್ತಿದೆ. ಕಳೆದ ತಿಂಗಳಲ್ಲಿ ಕೇವಲ ಒಂದು ನೋಟಿಸ್ ಮಾತ್ರ ನೀಡಿ ಈಗ ಯಾವುದೇ ಪರಿಹಾರ ನೀಡದೆ ಕಾಮಗಾರಿ ಆರಂಭಿಸಿ ಬಿ.ಟಿ ಹತ್ತಿ, ಸೂರ್ಯಕಾಂತಿ, ಉಳ್ಳಾಗಡ್ಡಿ ಬೆಳೆಯನ್ನು ಹಾನಿಮಾಡಿದ್ದಾರೆ ಎಂದು ರೈತರು ಆರೋಪಿಸಿದರು. <br /> <br /> ಈ ವಿಚಾರವಾಗಿ ಗ್ರಾಮದಲ್ಲಿ ಸಭೆ ಸೇರಿದ ರೈತರು ಹಾನಿಗೊಳಗಾದ ಬೆಳೆಗೆ ಪರಿಹಾರ ಹಾಗೂ ವಶಪಡಿಸಿಕೊಳ್ಳುತ್ತಿರುವ ಭೂಮಿಗೆ ರೈತರು ನಿಗದಿಪಡಿಸುವ ಬೆಲೆಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. <br /> <br /> ಸಭೆಯಲ್ಲಿ ಶಿವಪ್ಪ ಮಂಗಳೂರ, ಬಸವಣ್ಣೆಪ್ಪ ಬಳಿಗೇರ, ಮಲ್ಲಪ್ಪ ಕಮತರ, ಈರಪ್ಪ ಕಮತರ, ಮರಿಯಪ್ಪ ವಡ್ಡರ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>ಮುನ್ಸೂಚನೆ ಇಲ್ಲದೆ ರೈತರ ಜಮೀನಿನಲ್ಲಿ ಜೆಸಿಬಿ ಯಂತ್ರದ ಮೂಲಕ ಗುಂಡಿ ತೆಗೆಯುತ್ತಿದ್ದ ಕಾರ್ಯವನ್ನು ತಡೆಹಿಡಿದ ಘಟನೆ ತಾಲ್ಲೂಕಿನ ಲಕ್ಕುಂಡಿಯಲ್ಲಿ ಶನಿವಾರ ಸಂಜೆ ನಡೆದಿದೆ. <br /> <br /> ಬೆಂಗಳೂರಿನ ದಾಬೋಲ ಗ್ಯಾಸ್ ಕಂಪೆನಿಯ ಪೈಪ್ಲೈನ್ ಅಳವಡಿಕೆಗಾಗಿ ಜಮೀನುಗಳಲ್ಲಿ ಗುಂಡಿ ತೆಗೆಯಲಾಗುತ್ತಿತ್ತು. ಇದರಿಂದ ಆಕ್ರೋಶಗೊಂಡ ರೈತರು ಯಂತ್ರಗಳನ್ನು ತಡೆಹಿಡಿದರು. ಕೊನೆಗೆ ಕಂಪೆನಿಯವರು ಕಾಮಗಾರಿಯನ್ನು ಅರ್ಧಕ್ಕೆ ಬಿಟ್ಟು ಕಾಲ್ಕಿತ್ತರು. <br /> <br /> ಲಕ್ಕುಂಡಿ ಗ್ರಾಮದ ಅಂದಾಜು 80 ಎಕರೆ ಭೂಮಿಯಲ್ಲಿ ಈ ಯೋಜನೆ ಕಾಮಗಾರಿ ನಡೆಯುತ್ತಿದೆ. ಕಳೆದ ತಿಂಗಳಲ್ಲಿ ಕೇವಲ ಒಂದು ನೋಟಿಸ್ ಮಾತ್ರ ನೀಡಿ ಈಗ ಯಾವುದೇ ಪರಿಹಾರ ನೀಡದೆ ಕಾಮಗಾರಿ ಆರಂಭಿಸಿ ಬಿ.ಟಿ ಹತ್ತಿ, ಸೂರ್ಯಕಾಂತಿ, ಉಳ್ಳಾಗಡ್ಡಿ ಬೆಳೆಯನ್ನು ಹಾನಿಮಾಡಿದ್ದಾರೆ ಎಂದು ರೈತರು ಆರೋಪಿಸಿದರು. <br /> <br /> ಈ ವಿಚಾರವಾಗಿ ಗ್ರಾಮದಲ್ಲಿ ಸಭೆ ಸೇರಿದ ರೈತರು ಹಾನಿಗೊಳಗಾದ ಬೆಳೆಗೆ ಪರಿಹಾರ ಹಾಗೂ ವಶಪಡಿಸಿಕೊಳ್ಳುತ್ತಿರುವ ಭೂಮಿಗೆ ರೈತರು ನಿಗದಿಪಡಿಸುವ ಬೆಲೆಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. <br /> <br /> ಸಭೆಯಲ್ಲಿ ಶಿವಪ್ಪ ಮಂಗಳೂರ, ಬಸವಣ್ಣೆಪ್ಪ ಬಳಿಗೇರ, ಮಲ್ಲಪ್ಪ ಕಮತರ, ಈರಪ್ಪ ಕಮತರ, ಮರಿಯಪ್ಪ ವಡ್ಡರ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>