<p>ಚೆನ್ನೈ (ಪಿಟಿಐ): `ಇನ್ಫೋಸಿಸ್~ ಮುಖ್ಯಸ್ಥ ನಾರಾಯಣ ಮೂರ್ತಿ ಅವರ ಪುತ್ರ ರೋಹನ್ ಮೂರ್ತಿ ಮತ್ತು `ಟಿವಿಎಸ್~ ಮೋಟಾರ್ ಕಂಪೆನಿಯ ಅಧ್ಯಕ್ಷ ವೇಣು ಶ್ರೀನಿವಾಸನ್ ಅವರ ಪುತ್ರಿ ಲಕ್ಷ್ಮೀ ವೇಣು ಅವರ ವಿವಾಹ ಭಾನುವಾರ ಇಲ್ಲಿ ನಡೆಯಿತು. <br /> <br /> ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ನಲ್ಲಿ `ಪಿಎಚ್ಡಿ~ ಪಡೆದಿರುವ ರೋಹನ್ ಮೂರ್ತಿ (28) ಸದ್ಯ ಮೈಕ್ರೊಸಾಫ್ಟ್ನಲ್ಲಿ ವೃತ್ತಿನಿರತರಾಗಿದ್ದಾರೆ. ಈ ವಿವಾಹವು ದೇಶದ ಎರಡು ಪ್ರಮುಖ ಉದ್ದಿಮೆ ಕುಟುಂಬಗಳನ್ನು ಇನ್ನಷ್ಟು ಹತ್ತಿರ ತಂದಿದೆ. <br /> <br /> ಬಿಜೆಪಿ ಮುಖಂಡ ಎಲ್.ಕೆ ಅಡ್ವಾಣಿ, ಕೇಂದ್ರ ಸಚಿವರಾದ ಪಿ.ಚಿದಂಬರಂ, ಕಮಲ್ನಾಥ್, ಆನಂದ್ ಶರ್ಮಾ ಮತ್ತು ಜಿ.ಕೆ ವಾಸನ್ ಸೇರಿದಂತೆ ಅನೇಕ ಗಣ್ಯರು ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು. <br /> <br /> ಇನ್ಫೋಸಿಸ್ನ ಮಾಜಿ ಅಧ್ಯಕ್ಷ ಹಾಗೂ ರಾಷ್ಟ್ರೀಯ ವಿಶಿಷ್ಠ ಗುರುತಿನ ಸಂಖ್ಯೆ ಪ್ರಾಧಿಕಾರದ ಅಧ್ಯಕ್ಷ ನಂದನ್ ನಿಲೇಕಣಿ, ಏರ್ಡೆಕ್ಕನ್ ಸ್ಥಾಪಕ ಅಧ್ಯಕ್ಷ ಕ್ಯಾಪ್ಟನ್ ಜಿ.ಆರ್ ಗೋಪಿನಾಥ್ ಮತ್ತು ಗೋದ್ರೆಜ್ ಸಮೂಹದ ಅಧ್ಯಕ್ಷ ಆದಿ ಗೋದ್ರೇಜ್ ಮತ್ತಿತರರೂ ನೂತನ ವಧು ವರರನ್ನು ಆಶೀರ್ವದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ (ಪಿಟಿಐ): `ಇನ್ಫೋಸಿಸ್~ ಮುಖ್ಯಸ್ಥ ನಾರಾಯಣ ಮೂರ್ತಿ ಅವರ ಪುತ್ರ ರೋಹನ್ ಮೂರ್ತಿ ಮತ್ತು `ಟಿವಿಎಸ್~ ಮೋಟಾರ್ ಕಂಪೆನಿಯ ಅಧ್ಯಕ್ಷ ವೇಣು ಶ್ರೀನಿವಾಸನ್ ಅವರ ಪುತ್ರಿ ಲಕ್ಷ್ಮೀ ವೇಣು ಅವರ ವಿವಾಹ ಭಾನುವಾರ ಇಲ್ಲಿ ನಡೆಯಿತು. <br /> <br /> ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ನಲ್ಲಿ `ಪಿಎಚ್ಡಿ~ ಪಡೆದಿರುವ ರೋಹನ್ ಮೂರ್ತಿ (28) ಸದ್ಯ ಮೈಕ್ರೊಸಾಫ್ಟ್ನಲ್ಲಿ ವೃತ್ತಿನಿರತರಾಗಿದ್ದಾರೆ. ಈ ವಿವಾಹವು ದೇಶದ ಎರಡು ಪ್ರಮುಖ ಉದ್ದಿಮೆ ಕುಟುಂಬಗಳನ್ನು ಇನ್ನಷ್ಟು ಹತ್ತಿರ ತಂದಿದೆ. <br /> <br /> ಬಿಜೆಪಿ ಮುಖಂಡ ಎಲ್.ಕೆ ಅಡ್ವಾಣಿ, ಕೇಂದ್ರ ಸಚಿವರಾದ ಪಿ.ಚಿದಂಬರಂ, ಕಮಲ್ನಾಥ್, ಆನಂದ್ ಶರ್ಮಾ ಮತ್ತು ಜಿ.ಕೆ ವಾಸನ್ ಸೇರಿದಂತೆ ಅನೇಕ ಗಣ್ಯರು ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು. <br /> <br /> ಇನ್ಫೋಸಿಸ್ನ ಮಾಜಿ ಅಧ್ಯಕ್ಷ ಹಾಗೂ ರಾಷ್ಟ್ರೀಯ ವಿಶಿಷ್ಠ ಗುರುತಿನ ಸಂಖ್ಯೆ ಪ್ರಾಧಿಕಾರದ ಅಧ್ಯಕ್ಷ ನಂದನ್ ನಿಲೇಕಣಿ, ಏರ್ಡೆಕ್ಕನ್ ಸ್ಥಾಪಕ ಅಧ್ಯಕ್ಷ ಕ್ಯಾಪ್ಟನ್ ಜಿ.ಆರ್ ಗೋಪಿನಾಥ್ ಮತ್ತು ಗೋದ್ರೆಜ್ ಸಮೂಹದ ಅಧ್ಯಕ್ಷ ಆದಿ ಗೋದ್ರೇಜ್ ಮತ್ತಿತರರೂ ನೂತನ ವಧು ವರರನ್ನು ಆಶೀರ್ವದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>