<p><strong>ಲಖನೌ, ನವದೆಹಲಿ (ಪಿಟಿಐ):</strong> ಪಕ್ಷದ ನಾಯಕರಿಗೆ ಟಿಕೆಟ್ ನೀಡಿಕೆ ವಿಚಾರದಲ್ಲಿ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ ನಡುವೆಯೇ, ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗಾಗಿ ಲಖನೌ ಲೋಕಸಭಾ ಸ್ಥಾನ ನೀಡಲು ಸಿದ್ಧವಿರುವುದಾಗಿ ಸಂಸದ ಲಾಲ್ಜಿ ಟಂಡನ್ ಹೇಳಿದ್ದಾರೆ.<br /> <br /> ಆದರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಇದೇ ರೀತಿ ಬೆಂಬಲ ಕೊಡಲು ಅವರು ಹಿಂದೇಟು ಹಾಕಿದ್ದಾರೆ.<br /> <br /> ‘ಚುನಾವಣೆಗೆ ಸ್ಪರ್ಧಿಸುವುದು ನನ್ನ ಜೀವನದ ಗುರಿಯಾಗಿರಲಿಲ್ಲ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಮೋದಿ ಅವರು ಲಖನೌದಿಂದ ಸ್ಪರ್ಧಿಸುತ್ತಾರೆ ಎಂದಾದರೆ, ಅವರ ಗೆಲುವಿಗೆ ಬೇಕಾದ ಎಲ್ಲಾ ಯತ್ನಗಳನ್ನು ಮಾಡುತ್ತೇನೆ’ ಎಂದು ಟಂಡನ್ ಹೇಳಿದ್ದಾರೆ.<br /> <br /> ಈ ಸಂಬಂಧ, ಇದುವರೆಗೆ ಪಕ್ಷದಿಂದ ಯಾವುದೇ ಪ್ರಸ್ತಾವನೆ ತಮಗೆ ಬಂದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.<br /> ಲಖನೌ ಲೋಕಸಭಾ ಕ್ಷೇತ್ರಕ್ಕೆ ರಾಜನಾಥ್ ಸಿಂಗ್ ಹೆಸರು ಕೇಳಿಬರುತ್ತಿರುವ ಬಗ್ಗೆ ಪ್ರಶ್ನಿಸಿದಾಗ, ಈ ವಿಷಯ ಮಾಧ್ಯಮದಿಂದ ತಿಳಿಯಿತು ಎಂದು ಅವರು ಹೇಳಿದ್ದಾರೆ.<br /> <br /> ‘ಅಂತಿಮ ನಿರ್ಧಾರ ಸಿಇಸಿಯದ್ದು’: ವಾರಾಣಸಿ ಮತ್ತು ಲಖನೌ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಉಂಟಾಗಿರುವ ವಿವಾದವನ್ನು ಶಮನಗೊಳಿಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಸೋಮವಾರ ಯತ್ನಿಸಿದ್ದಾರೆ.<br /> <br /> ಅಭ್ಯರ್ಥಿಗಳ ಆಯ್ಕೆಯ ವಿಚಾರದಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.<br /> <br /> ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹಾಗೂ ರಾಜನಾಥ್ ಸಿಂಗ್ ಅವರಿಗಾಗಿ ಪಕ್ಷದ ಹಿರಿಯ ಮುಖಂಡರಾದ ಮುರಳಿ ಮನೋಹರ ಜೋಶಿ ಹಾಗೂ ಸಂಸದ ಲಾಲ್ಜಿ ಟಂಡನ್ ಅವರು ತಮ್ಮ ಕ್ಷೇತ್ರಗಳಾದ ವಾರಾಣಸಿ ಮತ್ತು ಲಖನೌಗಳನ್ನು ತೆರವುಗೊಳಿಸಬೇಕಾಗಬಹುದು ಎಂಬ ಮಾತುಗಳು ಬಿಜೆಪಿಯಲ್ಲಿ ಕೇಳಿ ಬಂದಿವೆ.<br /> <br /> ಈ ಬಗ್ಗೆ ಜೋಶಿ ಹಾಗೂ ಟಂಡನ್ ಅಸಮಾಧಾನಗೊಂಡಿದ್ದಾರೆ ಎಂದೂ ಹೇಳಲಾಗಿದೆ.<br /> <br /> ‘ನನ್ನ ಅಭ್ಯರ್ಥಿತನದ ಬಗೆಗಿನ ನಿರ್ಧಾರವನ್ನೂ ಸಿಇಸಿ ಕೈಗೊಳ್ಳಲಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಾರೊಬ್ಬರಿಗೂ ವೈಯಕ್ತಿಕ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಸಂಬಂಧ ನಾನೇನು ಹೇಳ-ಲಾರೆ’ ಎಂದು ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ, ನವದೆಹಲಿ (ಪಿಟಿಐ):</strong> ಪಕ್ಷದ ನಾಯಕರಿಗೆ ಟಿಕೆಟ್ ನೀಡಿಕೆ ವಿಚಾರದಲ್ಲಿ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ ನಡುವೆಯೇ, ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗಾಗಿ ಲಖನೌ ಲೋಕಸಭಾ ಸ್ಥಾನ ನೀಡಲು ಸಿದ್ಧವಿರುವುದಾಗಿ ಸಂಸದ ಲಾಲ್ಜಿ ಟಂಡನ್ ಹೇಳಿದ್ದಾರೆ.<br /> <br /> ಆದರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಇದೇ ರೀತಿ ಬೆಂಬಲ ಕೊಡಲು ಅವರು ಹಿಂದೇಟು ಹಾಕಿದ್ದಾರೆ.<br /> <br /> ‘ಚುನಾವಣೆಗೆ ಸ್ಪರ್ಧಿಸುವುದು ನನ್ನ ಜೀವನದ ಗುರಿಯಾಗಿರಲಿಲ್ಲ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಮೋದಿ ಅವರು ಲಖನೌದಿಂದ ಸ್ಪರ್ಧಿಸುತ್ತಾರೆ ಎಂದಾದರೆ, ಅವರ ಗೆಲುವಿಗೆ ಬೇಕಾದ ಎಲ್ಲಾ ಯತ್ನಗಳನ್ನು ಮಾಡುತ್ತೇನೆ’ ಎಂದು ಟಂಡನ್ ಹೇಳಿದ್ದಾರೆ.<br /> <br /> ಈ ಸಂಬಂಧ, ಇದುವರೆಗೆ ಪಕ್ಷದಿಂದ ಯಾವುದೇ ಪ್ರಸ್ತಾವನೆ ತಮಗೆ ಬಂದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.<br /> ಲಖನೌ ಲೋಕಸಭಾ ಕ್ಷೇತ್ರಕ್ಕೆ ರಾಜನಾಥ್ ಸಿಂಗ್ ಹೆಸರು ಕೇಳಿಬರುತ್ತಿರುವ ಬಗ್ಗೆ ಪ್ರಶ್ನಿಸಿದಾಗ, ಈ ವಿಷಯ ಮಾಧ್ಯಮದಿಂದ ತಿಳಿಯಿತು ಎಂದು ಅವರು ಹೇಳಿದ್ದಾರೆ.<br /> <br /> ‘ಅಂತಿಮ ನಿರ್ಧಾರ ಸಿಇಸಿಯದ್ದು’: ವಾರಾಣಸಿ ಮತ್ತು ಲಖನೌ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಉಂಟಾಗಿರುವ ವಿವಾದವನ್ನು ಶಮನಗೊಳಿಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಸೋಮವಾರ ಯತ್ನಿಸಿದ್ದಾರೆ.<br /> <br /> ಅಭ್ಯರ್ಥಿಗಳ ಆಯ್ಕೆಯ ವಿಚಾರದಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.<br /> <br /> ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹಾಗೂ ರಾಜನಾಥ್ ಸಿಂಗ್ ಅವರಿಗಾಗಿ ಪಕ್ಷದ ಹಿರಿಯ ಮುಖಂಡರಾದ ಮುರಳಿ ಮನೋಹರ ಜೋಶಿ ಹಾಗೂ ಸಂಸದ ಲಾಲ್ಜಿ ಟಂಡನ್ ಅವರು ತಮ್ಮ ಕ್ಷೇತ್ರಗಳಾದ ವಾರಾಣಸಿ ಮತ್ತು ಲಖನೌಗಳನ್ನು ತೆರವುಗೊಳಿಸಬೇಕಾಗಬಹುದು ಎಂಬ ಮಾತುಗಳು ಬಿಜೆಪಿಯಲ್ಲಿ ಕೇಳಿ ಬಂದಿವೆ.<br /> <br /> ಈ ಬಗ್ಗೆ ಜೋಶಿ ಹಾಗೂ ಟಂಡನ್ ಅಸಮಾಧಾನಗೊಂಡಿದ್ದಾರೆ ಎಂದೂ ಹೇಳಲಾಗಿದೆ.<br /> <br /> ‘ನನ್ನ ಅಭ್ಯರ್ಥಿತನದ ಬಗೆಗಿನ ನಿರ್ಧಾರವನ್ನೂ ಸಿಇಸಿ ಕೈಗೊಳ್ಳಲಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಾರೊಬ್ಬರಿಗೂ ವೈಯಕ್ತಿಕ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಸಂಬಂಧ ನಾನೇನು ಹೇಳ-ಲಾರೆ’ ಎಂದು ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>