<p><strong>ಪೀಣ್ಯ ದಾಸರಹಳ್ಳಿ:</strong> ಲಗ್ಗೆರೆ ವಾರ್ಡ್ ವ್ಯಾಪ್ತಿಯಲ್ಲಿ ನೀರಿನ ಕೊರತೆ ತೀವ್ರವಾಗಿದೆ. ವಿವಿಧ ಬಡಾವಣೆಗಳ ನಿವಾಸಿಗಳು ಕೆಲಸ ಕಾರ್ಯಗಳನ್ನು ಬದಿಗೊತ್ತಿ ಟ್ಯಾಂಕರ್ ನೀರಿಗಾಗಿ ಕಾಯುವ ಪರಿಸ್ಥಿತಿ ಉಂಟಾಗಿದೆ.<br /> <br /> ವಾರ್ಡ್ನಲ್ಲಿ 80 ಕೊಳವೆ ಬಾವಿಗಳಿವೆ. ಆದರೆ ನೀರು ಇರುವುದು 10ರಿಂದ 15 ಕೊಳವೆ ಬಾವಿಗಳಲ್ಲಿ ಮಾತ್ರ ನೀರು ಇದೆ. ಉಳಿದೆಡೆ 4 ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.<br /> <br /> ಯಾವ ಸಮಯಕ್ಕೆ ಟ್ಯಾಂಕರ್ ಬರುತ್ತದೆ ಎಂಬುದು ಗೊತ್ತಿಲ್ಲದೇ ಜನರು ಪರದಾಡುವ ಸ್ಥಿತಿ ಉಂಟಾಗಿದೆ. ಟ್ಯಾಂಕರ್ ಬಂದ ತಕ್ಷಣ ನೀರಿಗಾಗಿ ನೂರಾರು ಜನರು ಮುಗಿ ಬೀಳುವ ದೃಶ್ಯ ಸಾಮಾನ್ಯವಾಗಿದೆ.<br /> ಕೆಲಸ ಕಾರ್ಯಗಳಿಗೆ ಹೊರಗೆ ಹೋಗುವ ನೌಕರರು, ಕಾರ್ಮಿಕರು ಖಾಸಗಿಯವರಿಂದ ಹಣ ಕೊಟ್ಟು ನೀರು ಖರೀದಿಸಬೇಕಾದ ಅನಿವಾರ್ಯತೆ ಇದೆ.<br /> <br /> ಪಾಲಿಕೆ ಸದಸ್ಯ ಲಕ್ಷ್ಮೀಕಾಂತ್ ರೆಡ್ಡಿ, `ಕಂದಾಯ ಬಡಾವಣೆಗಳು ಹೆಚ್ಚಿರುವುದರಿಂದ ವಾರ್ಡ್ನಲ್ಲಿ ಮೂಲ ಸೌಕರ್ಯಗಳ ಕೊರತೆ ಹೆಚ್ಚಾಗಿದೆ. ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುವೆ~ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಲಗ್ಗೆರೆ ವಾರ್ಡ್ ವ್ಯಾಪ್ತಿಯಲ್ಲಿ ನೀರಿನ ಕೊರತೆ ತೀವ್ರವಾಗಿದೆ. ವಿವಿಧ ಬಡಾವಣೆಗಳ ನಿವಾಸಿಗಳು ಕೆಲಸ ಕಾರ್ಯಗಳನ್ನು ಬದಿಗೊತ್ತಿ ಟ್ಯಾಂಕರ್ ನೀರಿಗಾಗಿ ಕಾಯುವ ಪರಿಸ್ಥಿತಿ ಉಂಟಾಗಿದೆ.<br /> <br /> ವಾರ್ಡ್ನಲ್ಲಿ 80 ಕೊಳವೆ ಬಾವಿಗಳಿವೆ. ಆದರೆ ನೀರು ಇರುವುದು 10ರಿಂದ 15 ಕೊಳವೆ ಬಾವಿಗಳಲ್ಲಿ ಮಾತ್ರ ನೀರು ಇದೆ. ಉಳಿದೆಡೆ 4 ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.<br /> <br /> ಯಾವ ಸಮಯಕ್ಕೆ ಟ್ಯಾಂಕರ್ ಬರುತ್ತದೆ ಎಂಬುದು ಗೊತ್ತಿಲ್ಲದೇ ಜನರು ಪರದಾಡುವ ಸ್ಥಿತಿ ಉಂಟಾಗಿದೆ. ಟ್ಯಾಂಕರ್ ಬಂದ ತಕ್ಷಣ ನೀರಿಗಾಗಿ ನೂರಾರು ಜನರು ಮುಗಿ ಬೀಳುವ ದೃಶ್ಯ ಸಾಮಾನ್ಯವಾಗಿದೆ.<br /> ಕೆಲಸ ಕಾರ್ಯಗಳಿಗೆ ಹೊರಗೆ ಹೋಗುವ ನೌಕರರು, ಕಾರ್ಮಿಕರು ಖಾಸಗಿಯವರಿಂದ ಹಣ ಕೊಟ್ಟು ನೀರು ಖರೀದಿಸಬೇಕಾದ ಅನಿವಾರ್ಯತೆ ಇದೆ.<br /> <br /> ಪಾಲಿಕೆ ಸದಸ್ಯ ಲಕ್ಷ್ಮೀಕಾಂತ್ ರೆಡ್ಡಿ, `ಕಂದಾಯ ಬಡಾವಣೆಗಳು ಹೆಚ್ಚಿರುವುದರಿಂದ ವಾರ್ಡ್ನಲ್ಲಿ ಮೂಲ ಸೌಕರ್ಯಗಳ ಕೊರತೆ ಹೆಚ್ಚಾಗಿದೆ. ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುವೆ~ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>