<p><strong>ಯಲ್ಲಾಪುರ (ಉ.ಕ. ಜಿಲ್ಲೆ): </strong>ರೋಗ ನಿರೋಧಕ ಚುಚ್ಚುಮದ್ದು ಮತ್ತು ಲಸಿಕೆ ಹಾಕಿದ ಮಾರನೆ ದಿನವೇ ಮಗುವೊಂದು ಮೃತಪಟ್ಟ ಘಟನೆ ತಾಲ್ಲೂಕಿನ ಅರಬೈಲ್ ಸಮೀಪದ ಕೆಳಾಸೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.<br /> <br /> ಕೆಳಾಸೆಯ ಗೋಪಾಲ ಮತ್ತು ಮಾದೇವಿ ಸಿದ್ದಿ ದಂಪತಿ ಪುತ್ರಿ, ಒಂದೂವರೆ ತಿಂಗಳ ಮಗಳು ಧನ್ಯಾ ಸಿದ್ದಿ ಮೃತಪಟ್ಟಿದ್ದಾಳೆ. ವಜ್ರಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಅರಬೈಲ್ ಉಪ ಆರೋಗ್ಯ ಕೇಂದ್ರದಲ್ಲಿ ಈಕೆಗೆ ಗುರುವಾರ ಗಂಟಲುಮಾರಿ, ನಾಯಿಕೆಮ್ಮು, ಧನುರ್ವಾಯು, ಹೆಪಟೈಟಿಸ್-ಬಿ ಚುಚ್ಚುಮದ್ದು ಮತ್ತು ಪೋಲಿಯೊ ಲಸಿಕೆ ಹಾಕಲಾಗಿತ್ತು.<br /> <br /> ಲಸಿಕೆ ಹಾಕಿಸಿಕೊಂಡ ನಂತರ ಮಧ್ಯಾಹ್ನದವರೆಗೆ ಮಗು ಆರೋಗ್ಯದಿಂದಲೇ ಇತ್ತು. ಸಂಜೆ ಸ್ವಲ್ಪ ಅಸ್ವಸ್ಥಗೊಂಡಿದೆ. ಚುಚ್ಚುಮದ್ದು ಕೊಟ್ಟ ನಂತರ ಇದು ಸಹಜ ಇರಬಹುದು ಎಂದು ಪಾಲಕರು ಸುಮ್ಮನಾಗಿದ್ದಾರೆ. ಆದರೆ ರಾತ್ರಿ 12ರ ಸುಮಾರಿಗೆ ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.<br /> <br /> ಪಟ್ಟಣದಲ್ಲಿರುವ ಆಸ್ಪತ್ರೆಗೆ ಬರಲು ಸಾಧ್ಯವಾಗದೇ ಇರುವುದರಿಂದ ಪಾಲಕರು ಮಗುವನ್ನು ಬೆಳಿಗ್ಗೆ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ. ಮಗುವನ್ನು ಪರೀಕ್ಷೆ ಮಾಡಿದ ಆರೋಗ್ಯ ಸಹಾಯಕಿ, ಮಗು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. <br /> <br /> `ಮಗಳ ಸಾವಿಗೆ ಆರೋಗ್ಯ ಕೇಂದ್ರದಲ್ಲಿ ನೀಡಿರುವ ಲಸಿಕೆಯೇ ಕಾರಣ~ ಎಂದು ಗೋಪಾಲ ಸಿದ್ದಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.`ಅರಬೈಲ್ ಆರೋಗ್ಯ ಕೇಂದ್ರದಲ್ಲಿ ಗುರುವಾರ ಒಟ್ಟು ಆರು ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಐವರು ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಲಾಗಿದ್ದು ಅವರು ಆರೋಗ್ಯದಿಂದಿದ್ದಾರೆ.<br /> <br /> ಮಗುವಿಗೆ ನೀಡಿರುವ ಚುಚ್ಚುಮದ್ದು ಮತ್ತು ಲಸಿಕೆಯ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗುವುದು. ಮರಣೋತ್ತರ ಪರೀಕ್ಷೆ ವರದಿಯಿಂದ ನಿಖರ ಕಾರಣ ತಿಳಿಯಲಿದೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಶೋಕ ಕುಮಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ (ಉ.ಕ. ಜಿಲ್ಲೆ): </strong>ರೋಗ ನಿರೋಧಕ ಚುಚ್ಚುಮದ್ದು ಮತ್ತು ಲಸಿಕೆ ಹಾಕಿದ ಮಾರನೆ ದಿನವೇ ಮಗುವೊಂದು ಮೃತಪಟ್ಟ ಘಟನೆ ತಾಲ್ಲೂಕಿನ ಅರಬೈಲ್ ಸಮೀಪದ ಕೆಳಾಸೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.<br /> <br /> ಕೆಳಾಸೆಯ ಗೋಪಾಲ ಮತ್ತು ಮಾದೇವಿ ಸಿದ್ದಿ ದಂಪತಿ ಪುತ್ರಿ, ಒಂದೂವರೆ ತಿಂಗಳ ಮಗಳು ಧನ್ಯಾ ಸಿದ್ದಿ ಮೃತಪಟ್ಟಿದ್ದಾಳೆ. ವಜ್ರಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಅರಬೈಲ್ ಉಪ ಆರೋಗ್ಯ ಕೇಂದ್ರದಲ್ಲಿ ಈಕೆಗೆ ಗುರುವಾರ ಗಂಟಲುಮಾರಿ, ನಾಯಿಕೆಮ್ಮು, ಧನುರ್ವಾಯು, ಹೆಪಟೈಟಿಸ್-ಬಿ ಚುಚ್ಚುಮದ್ದು ಮತ್ತು ಪೋಲಿಯೊ ಲಸಿಕೆ ಹಾಕಲಾಗಿತ್ತು.<br /> <br /> ಲಸಿಕೆ ಹಾಕಿಸಿಕೊಂಡ ನಂತರ ಮಧ್ಯಾಹ್ನದವರೆಗೆ ಮಗು ಆರೋಗ್ಯದಿಂದಲೇ ಇತ್ತು. ಸಂಜೆ ಸ್ವಲ್ಪ ಅಸ್ವಸ್ಥಗೊಂಡಿದೆ. ಚುಚ್ಚುಮದ್ದು ಕೊಟ್ಟ ನಂತರ ಇದು ಸಹಜ ಇರಬಹುದು ಎಂದು ಪಾಲಕರು ಸುಮ್ಮನಾಗಿದ್ದಾರೆ. ಆದರೆ ರಾತ್ರಿ 12ರ ಸುಮಾರಿಗೆ ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.<br /> <br /> ಪಟ್ಟಣದಲ್ಲಿರುವ ಆಸ್ಪತ್ರೆಗೆ ಬರಲು ಸಾಧ್ಯವಾಗದೇ ಇರುವುದರಿಂದ ಪಾಲಕರು ಮಗುವನ್ನು ಬೆಳಿಗ್ಗೆ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ. ಮಗುವನ್ನು ಪರೀಕ್ಷೆ ಮಾಡಿದ ಆರೋಗ್ಯ ಸಹಾಯಕಿ, ಮಗು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. <br /> <br /> `ಮಗಳ ಸಾವಿಗೆ ಆರೋಗ್ಯ ಕೇಂದ್ರದಲ್ಲಿ ನೀಡಿರುವ ಲಸಿಕೆಯೇ ಕಾರಣ~ ಎಂದು ಗೋಪಾಲ ಸಿದ್ದಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.`ಅರಬೈಲ್ ಆರೋಗ್ಯ ಕೇಂದ್ರದಲ್ಲಿ ಗುರುವಾರ ಒಟ್ಟು ಆರು ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಐವರು ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಲಾಗಿದ್ದು ಅವರು ಆರೋಗ್ಯದಿಂದಿದ್ದಾರೆ.<br /> <br /> ಮಗುವಿಗೆ ನೀಡಿರುವ ಚುಚ್ಚುಮದ್ದು ಮತ್ತು ಲಸಿಕೆಯ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗುವುದು. ಮರಣೋತ್ತರ ಪರೀಕ್ಷೆ ವರದಿಯಿಂದ ನಿಖರ ಕಾರಣ ತಿಳಿಯಲಿದೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಶೋಕ ಕುಮಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>