<p><strong>ಭೂಪಾಲ್, (ಪಿಟಿಐ):</strong> ದೇಶದ ಬ್ಯಾಂಕ್ ಲಾಕರ್ ಗಳಲ್ಲಿ ಇರಿಸಿರುವ ಕಪ್ಪು ಹಣದ ಬಗ್ಗೆ ಕ್ರಮ ಕೈಗೊಳ್ಳಲು ಗೋಪ್ಯದ ಅಧಿನಿಯಮ ಅಡ್ಡ ಬರುತ್ತಿದೆ ಎಂದು ರಿಜರ್ವ ಬ್ಯಾಂಕ್ ನ ಗವರ್ನರ್ ಡಿ. ಸುಬ್ಬರಾವ್ ಅವರು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.</p>.<p>ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಬ್ಯಾಂಕ್ ಲಾಕರ್ ಗಳಲ್ಲಿರುವ ಕಪ್ಪು ಹಣದ ಸಮಸ್ಯೆಯ ಕುರಿತು ಪರಿಣಾಮಕಾರಿ ಕ್ರಮ ಕೈಗೊಳ್ಳಲು ಆರ್ ಬಿ ಐ ಗೆ ಸಾಧ್ಯವಾಗದು. ಆದರೆ ಕೇಂದ್ರ ಸರ್ಕಾರ ಈ ಸಂಬಂಧ ಕ್ರಮ ಕೈಗೊಳ್ಳಬಹುದಾಗಿದೆ ಎಂದಿದ್ದಾರೆ.</p>.<p>ಸದ್ಯದ ಸ್ಥಿತಿಯಲ್ಲಿ, ಈಗ ಜಾರಿಯಲ್ಲಿರುವ ಗೋಪ್ಯದ ಅಧಿನಿಯಮಗಳ ಅನ್ವಯ ಭಾರತದ ಬ್ಯಾಂಕ್ ಗಳಲ್ಲಿನ ಲಾಕರ್ ಗಳಲ್ಲಿರುವ ಅಕ್ರಮ ಹಣ ಸಂಗ್ರಹಣೆಯ ಕುರಿತು ಆರ್ ಬಿ ಐ ಯಾವುದೇ ರೀತಿಯಲ್ಲಿ ಕ್ರಮ ಜರುಗಿಸುವಂತಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.</p>.<p>ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಅವರು, ಕೇಂದ್ರ ಸರ್ಕಾರದ ಬಜೆಟ್ ಸಿದ್ಧಪಡಿಸುವಲ್ಲಿ ಆರ್ ಬಿ ಐಗೆ ಯಾವುದೇ ಬಗೆಯ ಪಾಲು ಇರುವುದಿಲ್ಲ, ಆದರೆ ಬ್ಯಾಂಕ್ ಗಳ ಆರ್ಥಿಕ ತುರ್ತು ಪರಿಸ್ಥಿತಿ ನಿರ್ವಹಣೆ ಅದರ ಜವಾಬ್ದಾರಿ ಎಂದಿದ್ದಾರೆ.</p>.<p>ಆರ್ಥಿಕ ಬೆಳವಣಿಗೆ ಮತ್ತು ಹಣದುಬ್ಬರ ನಿರ್ವಹಣೆ ತುಂಬಾ ಕಷ್ಟದ ಕೆಲಸ ಆದರೂ ಎಂಥದೇ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಆರ್ ಬಿ ಐ ಸಮರ್ಥವಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೂಪಾಲ್, (ಪಿಟಿಐ):</strong> ದೇಶದ ಬ್ಯಾಂಕ್ ಲಾಕರ್ ಗಳಲ್ಲಿ ಇರಿಸಿರುವ ಕಪ್ಪು ಹಣದ ಬಗ್ಗೆ ಕ್ರಮ ಕೈಗೊಳ್ಳಲು ಗೋಪ್ಯದ ಅಧಿನಿಯಮ ಅಡ್ಡ ಬರುತ್ತಿದೆ ಎಂದು ರಿಜರ್ವ ಬ್ಯಾಂಕ್ ನ ಗವರ್ನರ್ ಡಿ. ಸುಬ್ಬರಾವ್ ಅವರು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.</p>.<p>ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಬ್ಯಾಂಕ್ ಲಾಕರ್ ಗಳಲ್ಲಿರುವ ಕಪ್ಪು ಹಣದ ಸಮಸ್ಯೆಯ ಕುರಿತು ಪರಿಣಾಮಕಾರಿ ಕ್ರಮ ಕೈಗೊಳ್ಳಲು ಆರ್ ಬಿ ಐ ಗೆ ಸಾಧ್ಯವಾಗದು. ಆದರೆ ಕೇಂದ್ರ ಸರ್ಕಾರ ಈ ಸಂಬಂಧ ಕ್ರಮ ಕೈಗೊಳ್ಳಬಹುದಾಗಿದೆ ಎಂದಿದ್ದಾರೆ.</p>.<p>ಸದ್ಯದ ಸ್ಥಿತಿಯಲ್ಲಿ, ಈಗ ಜಾರಿಯಲ್ಲಿರುವ ಗೋಪ್ಯದ ಅಧಿನಿಯಮಗಳ ಅನ್ವಯ ಭಾರತದ ಬ್ಯಾಂಕ್ ಗಳಲ್ಲಿನ ಲಾಕರ್ ಗಳಲ್ಲಿರುವ ಅಕ್ರಮ ಹಣ ಸಂಗ್ರಹಣೆಯ ಕುರಿತು ಆರ್ ಬಿ ಐ ಯಾವುದೇ ರೀತಿಯಲ್ಲಿ ಕ್ರಮ ಜರುಗಿಸುವಂತಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.</p>.<p>ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಅವರು, ಕೇಂದ್ರ ಸರ್ಕಾರದ ಬಜೆಟ್ ಸಿದ್ಧಪಡಿಸುವಲ್ಲಿ ಆರ್ ಬಿ ಐಗೆ ಯಾವುದೇ ಬಗೆಯ ಪಾಲು ಇರುವುದಿಲ್ಲ, ಆದರೆ ಬ್ಯಾಂಕ್ ಗಳ ಆರ್ಥಿಕ ತುರ್ತು ಪರಿಸ್ಥಿತಿ ನಿರ್ವಹಣೆ ಅದರ ಜವಾಬ್ದಾರಿ ಎಂದಿದ್ದಾರೆ.</p>.<p>ಆರ್ಥಿಕ ಬೆಳವಣಿಗೆ ಮತ್ತು ಹಣದುಬ್ಬರ ನಿರ್ವಹಣೆ ತುಂಬಾ ಕಷ್ಟದ ಕೆಲಸ ಆದರೂ ಎಂಥದೇ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಆರ್ ಬಿ ಐ ಸಮರ್ಥವಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>