<p>ಬೆಂಗಳೂರು: ಕುಂದಲಹಳ್ಳಿ ಮುಖ್ಯರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗುರುರಾಜಶೆಟ್ಟಿ (35) ಮತ್ತು ರೂಬೇಶ್ ಮಹಾಲಿಂಗಂ (34) ಎಂಬ ಇಬ್ಬರು ಸಾಫ್ಟ್ವೇರ್ ಕಂಪೆನಿ ಉದ್ಯೋಗಿಗಳು ಸಾವನ್ನಪ್ಪಿದ್ದಾರೆ.<br /> <br /> ಮುಂಬೈ ಮೂಲದ ಗುರುರಾಜಶೆಟ್ಟಿ, ವೈಟ್ಫೀಲ್ಡ್ ಸಮೀಪದ ಸೀಗೆಹಳ್ಳಿಯಲ್ಲಿ ವಾಸವಾಗಿದ್ದರು. ರೂಬೇಶ್ ತಮಿಳುನಾಡು ಮೂಲದವರಾಗಿದ್ದು, ನಗರದ ಚನ್ನಸಂದ್ರದಲ್ಲಿ ನೆಲೆಸಿದ್ದರು.<br /> <br /> ಇಬ್ಬರೂ ಕುಂದಲಹಳ್ಳಿ ಮುಖ್ಯರಸ್ತೆಯ ಬ್ರೂಕ್ಫೀಲ್ಡ್ನಲ್ಲಿರುವ ಇಂಟೆಲ್ ಸಾಫ್ಟ್ವೇರ್ ಕಂಪೆನಿಯಲ್ಲಿ ಉದ್ಯೋಗಿಗಳಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.<br /> <br /> ಎಂದಿನಂತೆ ಶುಕ್ರವಾರ ಕೆಲಸಕ್ಕೆ ಹೋಗಿದ್ದ ಅವರು, ಮಧ್ಯಾಹ್ನ 2.15ರ ಸುಮಾರಿಗೆ ಊಟಕ್ಕೆಂದು ಟಿನ್ಫ್ಯಾಕ್ಟರಿ ಸಮೀಪದ ಹೋಟೆಲ್ಗೆ ಹೋಗಿದ್ದಾರೆ. ಊಟ ಮುಗಿಸಿಕೊಂಡು ಬೈಕ್ನಲ್ಲಿ ಕಂಪೆನಿಗೆ ಹಿಂದಿರುಗುವಾಗ ಈ ದುರ್ಘಟನೆ ನಡೆದಿದೆ.<br /> <br /> ಕೆ.ಆರ್.ಪುರ ಕಡೆಗೆ ಹೋಗುತ್ತಿದ್ದ ಲಾರಿ ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೆಳಗೆ ಬಿದ್ದ ರೂಬೇಶ್ ಮೇಲೆ ವಾಹನದ ಚಕ್ರ ಹರಿದಿದ್ದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.<br /> <br /> ತಲೆಗೆ ಗಂಭೀರ ಪೆಟ್ಟು ಬಿದ್ದು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುರುರಾಜಶೆಟ್ಟಿ, ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 12ಕ್ಕೆ ಕೊನೆಯುಸಿರೆಳೆದರು.<br /> <br /> ಚಾಲಕನನ್ನು ಬಂಧಿಸಿ, ಲಾರಿ-ಯನ್ನು ಜಪ್ತಿ ಮಾಡಲಾಗಿದೆ ಎಂದು ವೈಟ್ಫೀಲ್ಡ್ ಸಂಚಾರ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> <strong>ಅಪಘಾತ: ಮಹಿಳೆ ಸಾವು</strong><br /> ಸುಮನಹಳ್ಳಿ ವರ್ತುಲ ರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ ಅಪರಿಚಿತ ವಾಹನ ಹರಿದು ಯಶೋಧಮ್ಮ (50) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.<br /> <br /> ಲಗ್ಗೆರೆ ನಿವಾಸಿಯಾದ ಯಶೋಧಮ್ಮ, ಮಗಳಾದ ಕೆಂಗೇರಿಯಲ್ಲಿರುವ ಇಂದ್ರಾಣಿ ಮನೆಗೆ ಹೊರಟಿದ್ದರು. ಬೆಳಿಗ್ಗೆ 4.20ರ ಸುಮಾರಿಗೆ ಸಮೀಪದ ಬಸ್ ನಿಲ್ದಾಣಕ್ಕೆ ನಡೆದು ಹೋಗುವಾಗ ಅವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.<br /> <br /> ಘಟನೆಯಲ್ಲಿ ಕೆಳಗೆ ಬಿದ್ದ ಅವರ ಮೇಲೆ ವಾಹನದ ಚಕ್ರ ಹರಿದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ತಿಳಿಸಿದ್ದಾರೆ.<br /> <br /> <strong>ವಾಹನ ಡಿಕ್ಕಿ ವ್ಯಕ್ತಿ ಸಾವು</strong><br /> ಗೊರಗುಂಟೆಪಾಳ್ಯದಲ್ಲಿ ಶನಿವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.<br /> <br /> ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಅವರ ವಯಸ್ಸು ಸುಮಾರು 40 ರಿಂದ 45 ವರ್ಷ. ಬೆಳಿಗ್ಗೆ 6.15ಕ್ಕೆ ಗೊರಗುಂಟೆಪಾಳ್ಯದಲ್ಲಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಯಶವಂತಪುರ ಸಂಚಾರ ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕುಂದಲಹಳ್ಳಿ ಮುಖ್ಯರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗುರುರಾಜಶೆಟ್ಟಿ (35) ಮತ್ತು ರೂಬೇಶ್ ಮಹಾಲಿಂಗಂ (34) ಎಂಬ ಇಬ್ಬರು ಸಾಫ್ಟ್ವೇರ್ ಕಂಪೆನಿ ಉದ್ಯೋಗಿಗಳು ಸಾವನ್ನಪ್ಪಿದ್ದಾರೆ.<br /> <br /> ಮುಂಬೈ ಮೂಲದ ಗುರುರಾಜಶೆಟ್ಟಿ, ವೈಟ್ಫೀಲ್ಡ್ ಸಮೀಪದ ಸೀಗೆಹಳ್ಳಿಯಲ್ಲಿ ವಾಸವಾಗಿದ್ದರು. ರೂಬೇಶ್ ತಮಿಳುನಾಡು ಮೂಲದವರಾಗಿದ್ದು, ನಗರದ ಚನ್ನಸಂದ್ರದಲ್ಲಿ ನೆಲೆಸಿದ್ದರು.<br /> <br /> ಇಬ್ಬರೂ ಕುಂದಲಹಳ್ಳಿ ಮುಖ್ಯರಸ್ತೆಯ ಬ್ರೂಕ್ಫೀಲ್ಡ್ನಲ್ಲಿರುವ ಇಂಟೆಲ್ ಸಾಫ್ಟ್ವೇರ್ ಕಂಪೆನಿಯಲ್ಲಿ ಉದ್ಯೋಗಿಗಳಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.<br /> <br /> ಎಂದಿನಂತೆ ಶುಕ್ರವಾರ ಕೆಲಸಕ್ಕೆ ಹೋಗಿದ್ದ ಅವರು, ಮಧ್ಯಾಹ್ನ 2.15ರ ಸುಮಾರಿಗೆ ಊಟಕ್ಕೆಂದು ಟಿನ್ಫ್ಯಾಕ್ಟರಿ ಸಮೀಪದ ಹೋಟೆಲ್ಗೆ ಹೋಗಿದ್ದಾರೆ. ಊಟ ಮುಗಿಸಿಕೊಂಡು ಬೈಕ್ನಲ್ಲಿ ಕಂಪೆನಿಗೆ ಹಿಂದಿರುಗುವಾಗ ಈ ದುರ್ಘಟನೆ ನಡೆದಿದೆ.<br /> <br /> ಕೆ.ಆರ್.ಪುರ ಕಡೆಗೆ ಹೋಗುತ್ತಿದ್ದ ಲಾರಿ ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೆಳಗೆ ಬಿದ್ದ ರೂಬೇಶ್ ಮೇಲೆ ವಾಹನದ ಚಕ್ರ ಹರಿದಿದ್ದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.<br /> <br /> ತಲೆಗೆ ಗಂಭೀರ ಪೆಟ್ಟು ಬಿದ್ದು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುರುರಾಜಶೆಟ್ಟಿ, ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 12ಕ್ಕೆ ಕೊನೆಯುಸಿರೆಳೆದರು.<br /> <br /> ಚಾಲಕನನ್ನು ಬಂಧಿಸಿ, ಲಾರಿ-ಯನ್ನು ಜಪ್ತಿ ಮಾಡಲಾಗಿದೆ ಎಂದು ವೈಟ್ಫೀಲ್ಡ್ ಸಂಚಾರ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> <strong>ಅಪಘಾತ: ಮಹಿಳೆ ಸಾವು</strong><br /> ಸುಮನಹಳ್ಳಿ ವರ್ತುಲ ರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ ಅಪರಿಚಿತ ವಾಹನ ಹರಿದು ಯಶೋಧಮ್ಮ (50) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.<br /> <br /> ಲಗ್ಗೆರೆ ನಿವಾಸಿಯಾದ ಯಶೋಧಮ್ಮ, ಮಗಳಾದ ಕೆಂಗೇರಿಯಲ್ಲಿರುವ ಇಂದ್ರಾಣಿ ಮನೆಗೆ ಹೊರಟಿದ್ದರು. ಬೆಳಿಗ್ಗೆ 4.20ರ ಸುಮಾರಿಗೆ ಸಮೀಪದ ಬಸ್ ನಿಲ್ದಾಣಕ್ಕೆ ನಡೆದು ಹೋಗುವಾಗ ಅವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.<br /> <br /> ಘಟನೆಯಲ್ಲಿ ಕೆಳಗೆ ಬಿದ್ದ ಅವರ ಮೇಲೆ ವಾಹನದ ಚಕ್ರ ಹರಿದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ತಿಳಿಸಿದ್ದಾರೆ.<br /> <br /> <strong>ವಾಹನ ಡಿಕ್ಕಿ ವ್ಯಕ್ತಿ ಸಾವು</strong><br /> ಗೊರಗುಂಟೆಪಾಳ್ಯದಲ್ಲಿ ಶನಿವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.<br /> <br /> ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಅವರ ವಯಸ್ಸು ಸುಮಾರು 40 ರಿಂದ 45 ವರ್ಷ. ಬೆಳಿಗ್ಗೆ 6.15ಕ್ಕೆ ಗೊರಗುಂಟೆಪಾಳ್ಯದಲ್ಲಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಯಶವಂತಪುರ ಸಂಚಾರ ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>