<p><strong>ಮಡಿಕೇರಿ</strong>: ಇಲ್ಲಿಗೆ ಸಮೀಪದ ಮಂಗಳೂರು ರಾಜ್ಯ ಹೆದ್ದಾರಿ ತಿರುವಿನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಅವಘಡದಲ್ಲಿ ಕಂಟೇನರ್ ಲಾರಿ ಹರಿದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ.<br /> <br /> ಬೆಟ್ಟಗೇರಿ ಸಮೀಪದ ಐವತ್ತೊಕ್ಲು ನಿವಾಸಿ ವಿಶ್ವನಾಥ (25) ಎಂಬುವವರೇ ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿ. ಇವರು ಮಡಿಕೇರಿಯಿಂದ ವಾಪಸ್ ತಮ್ಮ ಮನೆಗೆ ತೆರಳುತ್ತಿರುವ ಸಂದರ್ಭದಲ್ಲಿ ಹಾಗೂ ಮಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಕಂಟೇನರ್ ಲಾರಿ ನಡುವೆ ಈ ದುರ್ಘಟನೆ ಸಂಭವಿಸಿದೆ.<br /> <br /> ಕಂಟೇನರ್ ಲಾರಿ ಚಾಲಕ ಸೋಮಲಿಂಗಪ್ಪ ಅವರನ್ನು ಮಡಿಕೇರಿ ಸಂಚಾರಿ ಪೊಲೀಸರು ಬಂಧಿಸಿದ್ದು, ಕಂಟೇನರ್ ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. <br /> <br /> ಮೃತ ವ್ಯಕ್ತಿಯ ಶವವನ್ನು ಮರಣೋತ್ತರ ಪರೀಕ್ಷೆ ಮಾಡಿದ ನಂತರ ಅವರ ಪೋಷಕರಿಗೆ ನೀಡಲಾಗಿದೆ ಎಂದು ಎಸ್.ಐ ಮಂಜುನಾಥ್ ತಿಳಿಸಿದರು.<br /> <br /> ಟ್ರಾಫಿಕ್ ಜಾಮ್: ಈ ದುರ್ಘಟನೆಯಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಂಬುಲೆನ್ಸ್ ಆಗಮಿಸಲು ವಿಳಂಬ ಮಾಡಿದರೆಂದು ಸ್ಥಳೀಯರು ಪ್ರತಿಭಟನೆ ಮಾಡಿದರು. ಕೆಲವರು ಪೊಲೀಸರೊಂದಗೆ ವಾಗ್ವಾದಕ್ಕೂ ಇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಇಲ್ಲಿಗೆ ಸಮೀಪದ ಮಂಗಳೂರು ರಾಜ್ಯ ಹೆದ್ದಾರಿ ತಿರುವಿನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಅವಘಡದಲ್ಲಿ ಕಂಟೇನರ್ ಲಾರಿ ಹರಿದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ.<br /> <br /> ಬೆಟ್ಟಗೇರಿ ಸಮೀಪದ ಐವತ್ತೊಕ್ಲು ನಿವಾಸಿ ವಿಶ್ವನಾಥ (25) ಎಂಬುವವರೇ ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿ. ಇವರು ಮಡಿಕೇರಿಯಿಂದ ವಾಪಸ್ ತಮ್ಮ ಮನೆಗೆ ತೆರಳುತ್ತಿರುವ ಸಂದರ್ಭದಲ್ಲಿ ಹಾಗೂ ಮಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಕಂಟೇನರ್ ಲಾರಿ ನಡುವೆ ಈ ದುರ್ಘಟನೆ ಸಂಭವಿಸಿದೆ.<br /> <br /> ಕಂಟೇನರ್ ಲಾರಿ ಚಾಲಕ ಸೋಮಲಿಂಗಪ್ಪ ಅವರನ್ನು ಮಡಿಕೇರಿ ಸಂಚಾರಿ ಪೊಲೀಸರು ಬಂಧಿಸಿದ್ದು, ಕಂಟೇನರ್ ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. <br /> <br /> ಮೃತ ವ್ಯಕ್ತಿಯ ಶವವನ್ನು ಮರಣೋತ್ತರ ಪರೀಕ್ಷೆ ಮಾಡಿದ ನಂತರ ಅವರ ಪೋಷಕರಿಗೆ ನೀಡಲಾಗಿದೆ ಎಂದು ಎಸ್.ಐ ಮಂಜುನಾಥ್ ತಿಳಿಸಿದರು.<br /> <br /> ಟ್ರಾಫಿಕ್ ಜಾಮ್: ಈ ದುರ್ಘಟನೆಯಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಂಬುಲೆನ್ಸ್ ಆಗಮಿಸಲು ವಿಳಂಬ ಮಾಡಿದರೆಂದು ಸ್ಥಳೀಯರು ಪ್ರತಿಭಟನೆ ಮಾಡಿದರು. ಕೆಲವರು ಪೊಲೀಸರೊಂದಗೆ ವಾಗ್ವಾದಕ್ಕೂ ಇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>