<p>ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಲೆಕ್ಕಪರಿಶೋಧಕರಿಗೆ ಬಡ್ತಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಆಧ್ಯಕ್ಷ ಮಾರುತಿ ಮಾನ್ಪಡೆ ಆಗ್ರಹಿಸಿದರು.<br /> <br /> ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರಿ ನೌಕರರ ಸಂಘವು ಗುರುವಾರ ಪುರಭವನದಲ್ಲಿ ಆಯೋಜಿಸಿದ್ದ ನೌಕರರ ರಾಜ್ಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.<br /> <br /> ‘ಲೆಕ್ಕಪರಿಶೋಧಕರಿಗೆ ಬಡ್ತಿ ನೀಡಲು ಇಲಾಖೆಯಲ್ಲಿ ಅವಕಾಶವಿಲ್ಲ. ಬಡ್ತಿ ನೀಡಲು ಅಗತ್ಯವಿರುವ ಹುದ್ದೆಗಳನ್ನು ಇಲಾಖೆ ಸೃಷ್ಟಿಸಬೇಕು. ಈಗಾಗಲೆ ನಿವೃತ್ತರಾಗಿರುವ ನೌಕರರಿಗೆ ಸೂಕ್ತ ಪಿಂಚಣಿ ವ್ಯವಸ್ಥೆ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.<br /> <br /> ಅಖಿಲ ಭಾರತ ಸರ್ಕಾರಿ ನೌಕರರ ಒಕ್ಕೂಟದ ಉಪಾಧ್ಯಕ್ಷ ಮಹಾದೇವಯ್ಯ ಮಠಪತಿ ಮಾತನಾಡಿ, ‘ಬೆಂಗಳೂರು ನಗರದಲ್ಲಿ ಸರ್ಕಾರಿ ನೌಕರರಿಗೆ ಶೇ 30 ರಷ್ಟು ಮನೆ ಬಾಡಿಗೆ ಭತ್ಯೆ ನೀಡುತ್ತಿದ್ದು ಇದನ್ನು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೂ ವಿಸ್ತರಿಸಬೇಕು’ ಎಂದರು.<br /> <br /> ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ.ನಾಡಗೌಡ, ಸಂಘದ ರಾಜ್ಯ ಸಂಚಾಲಕ ಎಚ್.ಎಸ್.ಚಟ್ರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಲೆಕ್ಕಪರಿಶೋಧಕರಿಗೆ ಬಡ್ತಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಆಧ್ಯಕ್ಷ ಮಾರುತಿ ಮಾನ್ಪಡೆ ಆಗ್ರಹಿಸಿದರು.<br /> <br /> ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರಿ ನೌಕರರ ಸಂಘವು ಗುರುವಾರ ಪುರಭವನದಲ್ಲಿ ಆಯೋಜಿಸಿದ್ದ ನೌಕರರ ರಾಜ್ಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.<br /> <br /> ‘ಲೆಕ್ಕಪರಿಶೋಧಕರಿಗೆ ಬಡ್ತಿ ನೀಡಲು ಇಲಾಖೆಯಲ್ಲಿ ಅವಕಾಶವಿಲ್ಲ. ಬಡ್ತಿ ನೀಡಲು ಅಗತ್ಯವಿರುವ ಹುದ್ದೆಗಳನ್ನು ಇಲಾಖೆ ಸೃಷ್ಟಿಸಬೇಕು. ಈಗಾಗಲೆ ನಿವೃತ್ತರಾಗಿರುವ ನೌಕರರಿಗೆ ಸೂಕ್ತ ಪಿಂಚಣಿ ವ್ಯವಸ್ಥೆ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.<br /> <br /> ಅಖಿಲ ಭಾರತ ಸರ್ಕಾರಿ ನೌಕರರ ಒಕ್ಕೂಟದ ಉಪಾಧ್ಯಕ್ಷ ಮಹಾದೇವಯ್ಯ ಮಠಪತಿ ಮಾತನಾಡಿ, ‘ಬೆಂಗಳೂರು ನಗರದಲ್ಲಿ ಸರ್ಕಾರಿ ನೌಕರರಿಗೆ ಶೇ 30 ರಷ್ಟು ಮನೆ ಬಾಡಿಗೆ ಭತ್ಯೆ ನೀಡುತ್ತಿದ್ದು ಇದನ್ನು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೂ ವಿಸ್ತರಿಸಬೇಕು’ ಎಂದರು.<br /> <br /> ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ.ನಾಡಗೌಡ, ಸಂಘದ ರಾಜ್ಯ ಸಂಚಾಲಕ ಎಚ್.ಎಸ್.ಚಟ್ರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>