<p><strong>ಕಾರ್ಗಲ್:</strong> ಲೇಖಕರಿಗೆ ಸಾಮಾಜಿಕ ಕಳಕಳಿ ಮತ್ತು ಸ್ಥಿತಿಗತಿಗಳ ಬಗ್ಗೆ ಅರಿವು ಇರಬೇಕು. ಆಗ ಮಾತ್ರ ಲೇಖಕ ಜನಸಾಮಾನ್ಯರನ್ನು ತಲುಪಲು ಸಾಧ್ಯ ಎಂದು ಸಾಹಿತಿ ನಾ.ಡಿಸೋಜಾ ಅಭಿಪ್ರಾಯಪಟ್ಟರು.<br /> <br /> ಜೋಗದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಚಿಂತನಾ ಸಮಾವೇಶದಲ್ಲಿ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು. <br /> <br /> ಶ್ರೀಪತಿ ಹಳಗುಂದ ಅವರ ಮಣ್ಣು ಮತ್ತು ಮನಸ್ಸು ಪುಸ್ತಕದ ಮುನ್ನುಡಿಯಲ್ಲಿ, ಪುಸ್ತಕದ ಒಳಗೇನಿದೆ ಎಂಬುದು ವ್ಯಕ್ತವಾಗಿದೆ. ಮಕ್ಕಳ ಸಾಹಿತ್ಯದ ಬಗ್ಗೆ ನಿರ್ಲಕ್ಷ್ಯ ಮಾಡದೇ ಹೆಚ್ಚಿನ ಗಮನಹರಿಸಬೇಕಾಗಿದೆ ಎಂದು ಅವರು ಹೇಳಿದರು. <br /> <br /> ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಹಿತಿ ಮಹಾಬಲೇಶ್ವರ್ ಭಟ್, ಜಿಲ್ಲೆಯಲ್ಲಿ ಸಾಹಿತಿಗಳು ಬೆಳೆಯಲು ಪರಿಷತ್ತುಗಳು ಕಾರಣ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಈ ನಿಟ್ಟಿನಲ್ಲಿ ಉತ್ತಮ ಕಾರ್ಯಗಳನ್ನು ಕೈಗೊಂಡಿದೆ ಎಂದರು. <br /> <br /> ಇದೇ ವೇಳೆ ಸಾಹಿತಿ ನಾ.ಡಿಸೋಜಾ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಾಯಿತು. <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎನ್. ಹರಿಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಾಸಾ ನಂಜುಂಡಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು. <br /> <br /> ಲಕ್ಷ್ಮೀ ಮಹೇಶ್ ಮತ್ತು ಶಾಂತಾ ಆನಂದ್ ಪ್ರಾರ್ಥಿಸಿದರು. ಪ್ರೊ.ಮಾರ್ಷಲ್ ಶರಾಂ ಪ್ರಾಸ್ತಾವಿಕ ಮಾತನಾಡಿದರು. ವಿ.ಟಿ. ಸ್ವಾಮಿ ಸ್ವಾಗತಿಸಿದರು. ಸುರೇಶ್ ಕಾರ್ಯಕ್ರಮ ನಿರೂಪಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಗಲ್:</strong> ಲೇಖಕರಿಗೆ ಸಾಮಾಜಿಕ ಕಳಕಳಿ ಮತ್ತು ಸ್ಥಿತಿಗತಿಗಳ ಬಗ್ಗೆ ಅರಿವು ಇರಬೇಕು. ಆಗ ಮಾತ್ರ ಲೇಖಕ ಜನಸಾಮಾನ್ಯರನ್ನು ತಲುಪಲು ಸಾಧ್ಯ ಎಂದು ಸಾಹಿತಿ ನಾ.ಡಿಸೋಜಾ ಅಭಿಪ್ರಾಯಪಟ್ಟರು.<br /> <br /> ಜೋಗದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಚಿಂತನಾ ಸಮಾವೇಶದಲ್ಲಿ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು. <br /> <br /> ಶ್ರೀಪತಿ ಹಳಗುಂದ ಅವರ ಮಣ್ಣು ಮತ್ತು ಮನಸ್ಸು ಪುಸ್ತಕದ ಮುನ್ನುಡಿಯಲ್ಲಿ, ಪುಸ್ತಕದ ಒಳಗೇನಿದೆ ಎಂಬುದು ವ್ಯಕ್ತವಾಗಿದೆ. ಮಕ್ಕಳ ಸಾಹಿತ್ಯದ ಬಗ್ಗೆ ನಿರ್ಲಕ್ಷ್ಯ ಮಾಡದೇ ಹೆಚ್ಚಿನ ಗಮನಹರಿಸಬೇಕಾಗಿದೆ ಎಂದು ಅವರು ಹೇಳಿದರು. <br /> <br /> ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಹಿತಿ ಮಹಾಬಲೇಶ್ವರ್ ಭಟ್, ಜಿಲ್ಲೆಯಲ್ಲಿ ಸಾಹಿತಿಗಳು ಬೆಳೆಯಲು ಪರಿಷತ್ತುಗಳು ಕಾರಣ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಈ ನಿಟ್ಟಿನಲ್ಲಿ ಉತ್ತಮ ಕಾರ್ಯಗಳನ್ನು ಕೈಗೊಂಡಿದೆ ಎಂದರು. <br /> <br /> ಇದೇ ವೇಳೆ ಸಾಹಿತಿ ನಾ.ಡಿಸೋಜಾ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಾಯಿತು. <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎನ್. ಹರಿಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಾಸಾ ನಂಜುಂಡಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು. <br /> <br /> ಲಕ್ಷ್ಮೀ ಮಹೇಶ್ ಮತ್ತು ಶಾಂತಾ ಆನಂದ್ ಪ್ರಾರ್ಥಿಸಿದರು. ಪ್ರೊ.ಮಾರ್ಷಲ್ ಶರಾಂ ಪ್ರಾಸ್ತಾವಿಕ ಮಾತನಾಡಿದರು. ವಿ.ಟಿ. ಸ್ವಾಮಿ ಸ್ವಾಗತಿಸಿದರು. ಸುರೇಶ್ ಕಾರ್ಯಕ್ರಮ ನಿರೂಪಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>