<p><strong>ಮೈಸೂರು: </strong>ಸಂಶೋಧನಾ ವಿದ್ಯಾರ್ಥಿನಿ ಸರಿತಾಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಮೈಸೂರು ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಶಿವಬಸವಯ್ಯನವರ ಒಂಬತ್ತು ಇಂಕ್ರಿಮೆಂಟ್ಗಳನ್ನು ಕಡಿತಗೊಳಿಸಿ, ಚಾಮರಾಜನಗರ ಸ್ನಾತಕೋತ್ತರ ಕೇಂದ್ರದ ಸಂಯೋಜಕರಾಗಿ ವರ್ಗಾವಣೆ ಮಾಡಲಾಗಿದೆ.<br /> <br /> ಜ.21 ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಮೈಸೂರು ವಿವಿ ಮಹಿಳಾ ದೌರ್ಜನ್ಯ ದೂರು ಸಮಿತಿ ವರದಿ ಆಧಾರ ಹಾಗೂ ಸರ್ಕಾರದ ನಿರ್ದೇಶನದಂತೆ ಪ್ರೊ.ಶಿವಬಸವಯ್ಯನವರಿಗೆ ಈ ಶಿಕ್ಷೆಯನ್ನು ವಿಧಿಸಲಾಗಿದೆ ಎಂದು ಕುಲಪತಿ ಪ್ರೊ.ವಿ.ಜಿ.ತಳವಾರ್ ಮಂಗಳವಾರ ಪತ್ರಕರ್ತರಿಗೆ ತಿಳಿಸಿದರು.<br /> <br /> 2003 ರಲ್ಲಿ ಶಿವಬಸವಯ್ಯ ನೇರವಾಗಿ ಪ್ರಾಧ್ಯಾಪಕರಾಗಿ ನೇಮಕಗೊಂಡಿದ್ದರು. ಹೀಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸುತ್ತೋಲೆ ಪ್ರಕಾರ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದರೆ ಅಂಥವರನ್ನು ಕನಿಷ್ಠ ಕಾಲ ವೇತನ ಶ್ರೇಣಿಗೆ ಇಳಿಸಬಹುದಾಗಿದೆ. ಆದ್ದರಿಂದ ಶಿವಬಸವಯ್ಯನವರ 9 ಇಂಕ್ರಿಮೆಂಟ್ಗಳನ್ನು ಕಡಿತಗೊಳಿಸಲಾಗಿದೆ.<br /> <br /> ಇದು ಇಂತಹ ಆರೋಪಕ್ಕೆ ಗರಿಷ್ಠ ಶಿಕ್ಷೆಯಾಗಿದೆ ಎಂದವರು ಸಿಂಡಿಕೇಟ್ ಸಭೆಯಲ್ಲಿ ಸತತ ನಾಲ್ಕು ಗಂಟೆ ಕಾಲ ಈ ವಿಷಯವಾಗಿ ಚರ್ಚೆ ನಡೆಯಿತು. ಎಲ್ಲ ರೀತಿಯ ಸಾಧಕ ಬಾಧಕಗಳನ್ನು ಪರಿಶೀಲಿಸಿದ ನಂತರ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದರು.<br /> <br /> ಲೈಂಗಿಕ ಕಿರುಕುಳ ಆರೋಪ ಮಾಡಿರುವ ಸಂಶೋಧನಾ ವಿದ್ಯಾರ್ಥಿನಿ ಮೈಸೂರು ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲಿದ್ದಾರೆ. ಆದ್ದರಿಂದ ಅವರಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ಕಾರಣದಿಂದ ಪ್ರೊ.ಶಿವಬಸವಯ್ಯನವರನ್ನು ಚಾಮರಾಜನಗರ ಸ್ನಾತಕೋತ್ತರ ಕೇಂದ್ರದ ಸಂಯೋಜಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಈ ನಿರ್ಧಾರವನ್ನು ಸರ್ಕಾರ ತಿಳಿಸಲಾಗಿದೆ ಹಾಗೂ ಪ್ರೊ.ಶಿವಬಸವಯ್ಯನವರಿಗೆ ಆದೇಶ ನೀಡಲಾಗಿದೆ ಎಂದರು.</p>.<p><strong>ಪತಿಯಿಂದ ಗಲಾಟೆ</strong><br /> ಕುಲಪತಿ ಪ್ರೊ.ವಿ.ಜಿ.ತಳವಾರ್ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ನುಗ್ಗಿದ ಸರಿತಾ ಪತಿ ಡಾ.ವಿಜಯ್, ~ನೀವು ನನ್ನ ಪತ್ನಿಗೆ ನ್ಯಾಯ ಕೊಡಿಸುವಲ್ಲಿ ವಿಫಲರಾಗಿದೀರಿ, ಜಾತಿವಾದಿಯಾಗಿದ್ದೀರಿ, ನನ್ನ ಪತ್ನಿ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ನಿಮ್ಮ ಹೆಂಡತಿ, ಮಕ್ಕಳಿಗೆ ಆಗಿದ್ದರೆ ನೀವು ಏನು ಮಾಡುತ್ತಿದ್ದೀರಿ~ ಎಂದು ಕೂಗಾಡಿದರು. ಅನಿರೀಕ್ಷಿತವಾಗಿ ನಡೆದ ಘಟನೆಯಿಂದ ತೀವ್ರ ವಿಚಲಿತರಾದ ಕುಲಪತಿ ತಳವಾರ್, ವಿಜಯ್ ಅವರಿಂದ ಮನವಿ ಪತ್ರ ಪಡೆದು ಹೊರಟು ಹೋದರು.<br /> <br /> ವಿಜಯ್ ಅವರ ವರ್ತನೆಗೆ ಸ್ಥಳದಲ್ಲಿದ್ದ ಪ್ರಾಧ್ಯಾಪಕರು, ವಿವಿ ಅಧಿಕಾರಿಗಳು, ಸಿಬ್ಬಂದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಸಂಶೋಧನಾ ವಿದ್ಯಾರ್ಥಿನಿ ಸರಿತಾಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಮೈಸೂರು ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಶಿವಬಸವಯ್ಯನವರ ಒಂಬತ್ತು ಇಂಕ್ರಿಮೆಂಟ್ಗಳನ್ನು ಕಡಿತಗೊಳಿಸಿ, ಚಾಮರಾಜನಗರ ಸ್ನಾತಕೋತ್ತರ ಕೇಂದ್ರದ ಸಂಯೋಜಕರಾಗಿ ವರ್ಗಾವಣೆ ಮಾಡಲಾಗಿದೆ.<br /> <br /> ಜ.21 ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಮೈಸೂರು ವಿವಿ ಮಹಿಳಾ ದೌರ್ಜನ್ಯ ದೂರು ಸಮಿತಿ ವರದಿ ಆಧಾರ ಹಾಗೂ ಸರ್ಕಾರದ ನಿರ್ದೇಶನದಂತೆ ಪ್ರೊ.ಶಿವಬಸವಯ್ಯನವರಿಗೆ ಈ ಶಿಕ್ಷೆಯನ್ನು ವಿಧಿಸಲಾಗಿದೆ ಎಂದು ಕುಲಪತಿ ಪ್ರೊ.ವಿ.ಜಿ.ತಳವಾರ್ ಮಂಗಳವಾರ ಪತ್ರಕರ್ತರಿಗೆ ತಿಳಿಸಿದರು.<br /> <br /> 2003 ರಲ್ಲಿ ಶಿವಬಸವಯ್ಯ ನೇರವಾಗಿ ಪ್ರಾಧ್ಯಾಪಕರಾಗಿ ನೇಮಕಗೊಂಡಿದ್ದರು. ಹೀಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸುತ್ತೋಲೆ ಪ್ರಕಾರ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದರೆ ಅಂಥವರನ್ನು ಕನಿಷ್ಠ ಕಾಲ ವೇತನ ಶ್ರೇಣಿಗೆ ಇಳಿಸಬಹುದಾಗಿದೆ. ಆದ್ದರಿಂದ ಶಿವಬಸವಯ್ಯನವರ 9 ಇಂಕ್ರಿಮೆಂಟ್ಗಳನ್ನು ಕಡಿತಗೊಳಿಸಲಾಗಿದೆ.<br /> <br /> ಇದು ಇಂತಹ ಆರೋಪಕ್ಕೆ ಗರಿಷ್ಠ ಶಿಕ್ಷೆಯಾಗಿದೆ ಎಂದವರು ಸಿಂಡಿಕೇಟ್ ಸಭೆಯಲ್ಲಿ ಸತತ ನಾಲ್ಕು ಗಂಟೆ ಕಾಲ ಈ ವಿಷಯವಾಗಿ ಚರ್ಚೆ ನಡೆಯಿತು. ಎಲ್ಲ ರೀತಿಯ ಸಾಧಕ ಬಾಧಕಗಳನ್ನು ಪರಿಶೀಲಿಸಿದ ನಂತರ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದರು.<br /> <br /> ಲೈಂಗಿಕ ಕಿರುಕುಳ ಆರೋಪ ಮಾಡಿರುವ ಸಂಶೋಧನಾ ವಿದ್ಯಾರ್ಥಿನಿ ಮೈಸೂರು ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲಿದ್ದಾರೆ. ಆದ್ದರಿಂದ ಅವರಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ಕಾರಣದಿಂದ ಪ್ರೊ.ಶಿವಬಸವಯ್ಯನವರನ್ನು ಚಾಮರಾಜನಗರ ಸ್ನಾತಕೋತ್ತರ ಕೇಂದ್ರದ ಸಂಯೋಜಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಈ ನಿರ್ಧಾರವನ್ನು ಸರ್ಕಾರ ತಿಳಿಸಲಾಗಿದೆ ಹಾಗೂ ಪ್ರೊ.ಶಿವಬಸವಯ್ಯನವರಿಗೆ ಆದೇಶ ನೀಡಲಾಗಿದೆ ಎಂದರು.</p>.<p><strong>ಪತಿಯಿಂದ ಗಲಾಟೆ</strong><br /> ಕುಲಪತಿ ಪ್ರೊ.ವಿ.ಜಿ.ತಳವಾರ್ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ನುಗ್ಗಿದ ಸರಿತಾ ಪತಿ ಡಾ.ವಿಜಯ್, ~ನೀವು ನನ್ನ ಪತ್ನಿಗೆ ನ್ಯಾಯ ಕೊಡಿಸುವಲ್ಲಿ ವಿಫಲರಾಗಿದೀರಿ, ಜಾತಿವಾದಿಯಾಗಿದ್ದೀರಿ, ನನ್ನ ಪತ್ನಿ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ನಿಮ್ಮ ಹೆಂಡತಿ, ಮಕ್ಕಳಿಗೆ ಆಗಿದ್ದರೆ ನೀವು ಏನು ಮಾಡುತ್ತಿದ್ದೀರಿ~ ಎಂದು ಕೂಗಾಡಿದರು. ಅನಿರೀಕ್ಷಿತವಾಗಿ ನಡೆದ ಘಟನೆಯಿಂದ ತೀವ್ರ ವಿಚಲಿತರಾದ ಕುಲಪತಿ ತಳವಾರ್, ವಿಜಯ್ ಅವರಿಂದ ಮನವಿ ಪತ್ರ ಪಡೆದು ಹೊರಟು ಹೋದರು.<br /> <br /> ವಿಜಯ್ ಅವರ ವರ್ತನೆಗೆ ಸ್ಥಳದಲ್ಲಿದ್ದ ಪ್ರಾಧ್ಯಾಪಕರು, ವಿವಿ ಅಧಿಕಾರಿಗಳು, ಸಿಬ್ಬಂದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>