<p><strong>ನವದೆಹಲಿ(ಪಿಟಿಐ): </strong>ಬಹುನಿರೀಕ್ಷಿತ ಲೋಕಪಾಲ ಮಸೂದೆಯನ್ನು ಸಂಸತ್ನಲ್ಲಿ ಅಂಗೀಕರಿಸಲಾಗಿದೆ. ತೆಲಂಗಾಣ ರಚನೆ ಕುರಿತು ಪರ ಮತ್ತು ವಿರೋಧಿ ಬಣಗಳ ಗದ್ದಲದ ನಡುವೆಯೇ ಬುಧವಾರ ಲೋಕಸಭೆಯಲ್ಲಿ ಮಸೂದೆ ಅಂಗೀಕಾರಗೊಂಡಿದೆ.</p>.<p>ರಾಜ್ಯಸಭೆಯಲ್ಲಿ ತಿದ್ದುಪಡಿಯಾದ ಪರಿಷ್ಕೃತ ಮಸೂದೆಯನ್ನು ಅಲ್ಪ ಚರ್ಚೆಯ ನಂತರ ಲೋಕಸಭೆ ಸಮ್ಮತಿ ಸೂಚಿಸಿತು.</p>.<p>ಮಸೂದೆಗೆ ವಿರೋಧಿಸಿ ಸಮಾಜವಾದಿ ಮತ್ತು ಶಿವಸೇನಾ ಸದಸ್ಯರು ಪ್ರತಿಭಟನೆ ನಡೆಸಿ ಸದನದಿಂದ ಹೊರನಡೆದರು. ಪ್ರತಿಯಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಮಸೂದೆಗೆ ಬೆಂಬಲಿಸಿದರು.</p>.<p>ಲೋಕಪಾಲ ಮಸೂದೆ ಒಂದರಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಸಾಧ್ಯವಿಲ್ಲ. ಹೀಗಾಗಿ ಸಮಗ್ರ ಭ್ರಷ್ಟಾಚಾರ ವಿರೋಧಿ ಚೌಕಟ್ಟಿನ ಭಾಗವಾದ ಇನ್ನುಳಿದ ಮಹತ್ವದ ಆರು ಭ್ರಷ್ಟಾಚಾರ ವಿರೋಧಿ ಮಸೂದೆಗಳ ಮಂಡನೆ ಅಗತ್ಯವಿದೆ. ಈ ಕಾರಣಕ್ಕಾಗಿ ಚಳಿಗಾಲದ ಅಧಿವೇಶನವನ್ನು ವಿಸ್ತರಿಸುವಂತೆ ರಾಹುಲ್ ಗಾಂಧಿ ಒತ್ತಾಯಿಸಿದರು.</p>.<p>ದೇಶದ ಸಾಮಾನ್ಯ ಜನರು ಮತ್ತು ಅಣ್ಣಹಜಾರೆ ಅವರ ಉಪವಾಸ ಸತ್ಯಾಗ್ರಹದ ಫಲವಾಗಿ ಈ ಮಸೂದೆ ಜಾರಿಯಾಗಿದೆ. ಇದರ ಶ್ರೇಯ ಅವರಿಗೆ ಸಲ್ಲಬೇಕೇ ಹೊರತು ಕಾಂಗ್ರೆಸ್ ಪಕ್ಷಕ್ಕಲ್ಲ ಎಂದು ಸುಷ್ಮಾ ಸ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ(ಪಿಟಿಐ): </strong>ಬಹುನಿರೀಕ್ಷಿತ ಲೋಕಪಾಲ ಮಸೂದೆಯನ್ನು ಸಂಸತ್ನಲ್ಲಿ ಅಂಗೀಕರಿಸಲಾಗಿದೆ. ತೆಲಂಗಾಣ ರಚನೆ ಕುರಿತು ಪರ ಮತ್ತು ವಿರೋಧಿ ಬಣಗಳ ಗದ್ದಲದ ನಡುವೆಯೇ ಬುಧವಾರ ಲೋಕಸಭೆಯಲ್ಲಿ ಮಸೂದೆ ಅಂಗೀಕಾರಗೊಂಡಿದೆ.</p>.<p>ರಾಜ್ಯಸಭೆಯಲ್ಲಿ ತಿದ್ದುಪಡಿಯಾದ ಪರಿಷ್ಕೃತ ಮಸೂದೆಯನ್ನು ಅಲ್ಪ ಚರ್ಚೆಯ ನಂತರ ಲೋಕಸಭೆ ಸಮ್ಮತಿ ಸೂಚಿಸಿತು.</p>.<p>ಮಸೂದೆಗೆ ವಿರೋಧಿಸಿ ಸಮಾಜವಾದಿ ಮತ್ತು ಶಿವಸೇನಾ ಸದಸ್ಯರು ಪ್ರತಿಭಟನೆ ನಡೆಸಿ ಸದನದಿಂದ ಹೊರನಡೆದರು. ಪ್ರತಿಯಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಮಸೂದೆಗೆ ಬೆಂಬಲಿಸಿದರು.</p>.<p>ಲೋಕಪಾಲ ಮಸೂದೆ ಒಂದರಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಸಾಧ್ಯವಿಲ್ಲ. ಹೀಗಾಗಿ ಸಮಗ್ರ ಭ್ರಷ್ಟಾಚಾರ ವಿರೋಧಿ ಚೌಕಟ್ಟಿನ ಭಾಗವಾದ ಇನ್ನುಳಿದ ಮಹತ್ವದ ಆರು ಭ್ರಷ್ಟಾಚಾರ ವಿರೋಧಿ ಮಸೂದೆಗಳ ಮಂಡನೆ ಅಗತ್ಯವಿದೆ. ಈ ಕಾರಣಕ್ಕಾಗಿ ಚಳಿಗಾಲದ ಅಧಿವೇಶನವನ್ನು ವಿಸ್ತರಿಸುವಂತೆ ರಾಹುಲ್ ಗಾಂಧಿ ಒತ್ತಾಯಿಸಿದರು.</p>.<p>ದೇಶದ ಸಾಮಾನ್ಯ ಜನರು ಮತ್ತು ಅಣ್ಣಹಜಾರೆ ಅವರ ಉಪವಾಸ ಸತ್ಯಾಗ್ರಹದ ಫಲವಾಗಿ ಈ ಮಸೂದೆ ಜಾರಿಯಾಗಿದೆ. ಇದರ ಶ್ರೇಯ ಅವರಿಗೆ ಸಲ್ಲಬೇಕೇ ಹೊರತು ಕಾಂಗ್ರೆಸ್ ಪಕ್ಷಕ್ಕಲ್ಲ ಎಂದು ಸುಷ್ಮಾ ಸ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>