<p><strong>ಕೋಲ್ಕತ್ತ (ಪಿಟಿಐ): </strong>ಲೋಕಪಾಲ ಮಸೂದೆಯಲ್ಲಿರುವ ಲೋಕಾಯುಕ್ತ ನಿಯಮದ ಬಗೆಗಿನ ತನ್ನ ಕಠಿಣ ನಿಲುವಿಗೆ ಬದ್ಧವಾಗಿರುವ ತೃಣಮೂಲ ಕಾಂಗ್ರೆಸ್, ಸಂವಿಧಾನದ ಒಕ್ಕೂಟ ವ್ಯವಸ್ಥೆಯಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಭಾನುವಾರ ಸ್ಪಷ್ಟಪಡಿಸಿದೆ.<br /> <br /> `ನಮಗೆ ಪ್ರಬಲ ಲೋಕಪಾಲ ಕಾಯ್ದೆ ಬೇಕು. ಪಕ್ಷ ಮುಂದಿಟ್ಟ ತಿದ್ದುಪಡಿಯನ್ನು ಒಪ್ಪಿಕೊಳ್ಳಬೇಕಾಗುತ್ತದೆ~ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಮುಕುಲ್ ರಾಯ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.<br /> <br /> ಮಸೂದೆಯಲ್ಲಿ ಪ್ರಸ್ತಾಪವಾಗಿರುವ ಲೋಕಾಯುಕ್ತ ನಿಯಮವನ್ನು ಸಂಪೂರ್ಣವಾಗಿ ಅಳಿಸಿಹಾಕಬೇಕೆನ್ನುವ ತೃಣಮೂಲ ಕಾಂಗ್ರೆಸ್ ಪಕ್ಷದ ಬೇಡಿಕೆ ಈಡೇರಿಸುವುದು ಸುಲಭವಲ್ಲ. <br /> <br /> ಒಂದು ಅಥವಾ ಎರಡು ತಿದ್ದುಪಡಿಗಳನ್ನು ಸರ್ಕಾರ ಒಪ್ಪಿಕೊಳ್ಳಬಹುದು ಎಂದು ಶನಿವಾರ ಗೃಹ ಸಚಿವ ಪಿ.ಚಿದಂಬರಂ ಅವರು ನೀಡಿರುವ ಹೇಳಿಕೆಗೆ ರಾಯ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.<br /> <br /> ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರಕ್ಕೆ ಮುನ್ನ ತೃಣಮೂಲ ಕಾಂಗ್ರೆಸ್ ಸಲಹೆಯನ್ನು ಪರಿಗಣಿಸಬೇಕೆಂದು ಸರ್ಕಾರದೊಂದಿಗೆ ಒಡಂಬಡಿಕೆಯಾಗಿತ್ತು. ಹಾಗಾಗಿಯೇ ಪಕ್ಷದ ಸಂಸದರು ಮಸೂದೆಯಲ್ಲಿ ಪ್ರಸ್ತಾಪವಾದ ಲೋಕಾಯುಕ್ತಕ್ಕೆ ಸಂಬಂಧಿಸಿದ ಅಂಶಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸ್ದ್ದಿದರು ಎಂದು ರಾಯ್ ಹೇಳಿದ್ದಾರೆ.<br /> <br /> `ಸರ್ಕಾರ ಭರವಸೆಯಂತೆ ನಡೆದುಕೊಂಡಿಲ್ಲ. ದೇಶದ ಇತರ ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ ಅಭಿಪ್ರಾಯದಲ್ಲಿ ಮಮತಾ ಅವರ ದನಿ ಪ್ರತಿಧ್ವನಿಯಾಗಿ ಕೇಳಿಬಂತು. <br /> <br /> ಅಲ್ಲದೆ ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶುಭ ಲಕ್ಷಣವಲ್ಲ~ ಎಂದೂ ಅವರು ದೂರಿದ್ದಾರೆ.<br /> <br /> ಲೋಕಪಾಲ ಪ್ರತ್ಯೇಕ ವಿಷಯವಲ್ಲ. ಕೇಂದ್ರದ ಕೈಗೆ ಲಗಾಮು ಕೊಟ್ಟು ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುವುದು ಸೂಕ್ತವಲ್ಲ ಎಂದು ರಾಯ್ ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ (ಪಿಟಿಐ): </strong>ಲೋಕಪಾಲ ಮಸೂದೆಯಲ್ಲಿರುವ ಲೋಕಾಯುಕ್ತ ನಿಯಮದ ಬಗೆಗಿನ ತನ್ನ ಕಠಿಣ ನಿಲುವಿಗೆ ಬದ್ಧವಾಗಿರುವ ತೃಣಮೂಲ ಕಾಂಗ್ರೆಸ್, ಸಂವಿಧಾನದ ಒಕ್ಕೂಟ ವ್ಯವಸ್ಥೆಯಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಭಾನುವಾರ ಸ್ಪಷ್ಟಪಡಿಸಿದೆ.<br /> <br /> `ನಮಗೆ ಪ್ರಬಲ ಲೋಕಪಾಲ ಕಾಯ್ದೆ ಬೇಕು. ಪಕ್ಷ ಮುಂದಿಟ್ಟ ತಿದ್ದುಪಡಿಯನ್ನು ಒಪ್ಪಿಕೊಳ್ಳಬೇಕಾಗುತ್ತದೆ~ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಮುಕುಲ್ ರಾಯ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.<br /> <br /> ಮಸೂದೆಯಲ್ಲಿ ಪ್ರಸ್ತಾಪವಾಗಿರುವ ಲೋಕಾಯುಕ್ತ ನಿಯಮವನ್ನು ಸಂಪೂರ್ಣವಾಗಿ ಅಳಿಸಿಹಾಕಬೇಕೆನ್ನುವ ತೃಣಮೂಲ ಕಾಂಗ್ರೆಸ್ ಪಕ್ಷದ ಬೇಡಿಕೆ ಈಡೇರಿಸುವುದು ಸುಲಭವಲ್ಲ. <br /> <br /> ಒಂದು ಅಥವಾ ಎರಡು ತಿದ್ದುಪಡಿಗಳನ್ನು ಸರ್ಕಾರ ಒಪ್ಪಿಕೊಳ್ಳಬಹುದು ಎಂದು ಶನಿವಾರ ಗೃಹ ಸಚಿವ ಪಿ.ಚಿದಂಬರಂ ಅವರು ನೀಡಿರುವ ಹೇಳಿಕೆಗೆ ರಾಯ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.<br /> <br /> ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರಕ್ಕೆ ಮುನ್ನ ತೃಣಮೂಲ ಕಾಂಗ್ರೆಸ್ ಸಲಹೆಯನ್ನು ಪರಿಗಣಿಸಬೇಕೆಂದು ಸರ್ಕಾರದೊಂದಿಗೆ ಒಡಂಬಡಿಕೆಯಾಗಿತ್ತು. ಹಾಗಾಗಿಯೇ ಪಕ್ಷದ ಸಂಸದರು ಮಸೂದೆಯಲ್ಲಿ ಪ್ರಸ್ತಾಪವಾದ ಲೋಕಾಯುಕ್ತಕ್ಕೆ ಸಂಬಂಧಿಸಿದ ಅಂಶಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸ್ದ್ದಿದರು ಎಂದು ರಾಯ್ ಹೇಳಿದ್ದಾರೆ.<br /> <br /> `ಸರ್ಕಾರ ಭರವಸೆಯಂತೆ ನಡೆದುಕೊಂಡಿಲ್ಲ. ದೇಶದ ಇತರ ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ ಅಭಿಪ್ರಾಯದಲ್ಲಿ ಮಮತಾ ಅವರ ದನಿ ಪ್ರತಿಧ್ವನಿಯಾಗಿ ಕೇಳಿಬಂತು. <br /> <br /> ಅಲ್ಲದೆ ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶುಭ ಲಕ್ಷಣವಲ್ಲ~ ಎಂದೂ ಅವರು ದೂರಿದ್ದಾರೆ.<br /> <br /> ಲೋಕಪಾಲ ಪ್ರತ್ಯೇಕ ವಿಷಯವಲ್ಲ. ಕೇಂದ್ರದ ಕೈಗೆ ಲಗಾಮು ಕೊಟ್ಟು ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುವುದು ಸೂಕ್ತವಲ್ಲ ಎಂದು ರಾಯ್ ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>