<p>ನವದೆಹಲಿ: ಲೋಕಪಾಲ ಮಸೂದೆಯನ್ನು ಮತಕ್ಕೆ ಹಾಕಲು ಬಿಜೆಪಿ ಮತ್ತೆ ಸಂಸತ್ ಅಧಿವೇಶನಕ್ಕೆ ಆಗ್ರಹ ಮಾಡಿದ್ದರೂ, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕನಿಷ್ಠ ಏಪ್ರಿಲ್ ಮಧ್ಯಾವಧಿವರೆಗೆ ಈ ಬೇಡಿಕೆಯನ್ನು ಒಪ್ಪಿಕೊಳ್ಳುವ ಮನಃಸ್ಥಿತಿಯಲ್ಲಿ ಇದ್ದಂತಿಲ್ಲ.<br /> <br /> ಉದ್ದೇಶಿತ ಮಸೂದೆಯು ಬಜೆಟ್ ಅಧಿವೇಶನದ ಮೊದಲ ಭಾಗದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇಲ್ಲ ಎಂದು ಸರ್ಕಾರದ ಉನ್ನತ ಮೂಲಗಳು `ಪ್ರಜಾವಾಣಿ~ಗೆ ತಿಳಿಸಿವೆ.<br /> <br /> ಮಾರ್ಚ್ ಮೊದಲ ವಾರ ಆರಂಭಗೊಳ್ಳಲಿರುವ ಬಜೆಟ್ ಅಧಿವೇಶನ 20ರವರೆಗೆ ನಡೆಯಬಹುದು. ವಿವಿಧ ಬಜೆಟ್ ಮಂಜೂರಾತಿ ಕುರಿತಂತೆ ಸಂಸದೀಯ ಸ್ಥಾಯಿ ಸಮಿತಿ ಸಭೆಯಲ್ಲಿ ಸಂಸದರು ಭಾಗವಹಿಸಲು ಅನುಕೂಲವಾಗುವಂತೆ ಅಧಿವೇಶನಕ್ಕೆ ಮಧ್ಯಂತರ ವಿರಾಮ ಇರುತ್ತದೆ. <br /> <br /> ಬಜೆಟ್ ಅಧಿವೇಶನದ ಎರಡನೇ ಭಾಗವು ಏಪ್ರಿಲ್ 15ರ ಹೊತ್ತಿಗೆ ಆರಂಭಗೊಳ್ಳುವ ನಿರೀಕ್ಷೆ ಇದ್ದು, ಮೇ 15ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಲೋಕಪಾಲ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.<br /> <br /> `ಬಜೆಟ್ ಅಧಿವೇಶನದ ಮೊದಲ ಭಾಗದಲ್ಲಿ ನಾವು ಲೋಕಪಾಲ ಕುರಿತು ಚರ್ಚೆ ನಡೆಸುವುದಿಲ್ಲ. ಈ ಅವಧಿಯಲ್ಲಿ ಇತರ ಅನೇಕ ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಬೇಕಾಗಿದೆ~ ಎಂದು ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಲೋಕಪಾಲ ಮಸೂದೆಯನ್ನು ಮತಕ್ಕೆ ಹಾಕಲು ಬಿಜೆಪಿ ಮತ್ತೆ ಸಂಸತ್ ಅಧಿವೇಶನಕ್ಕೆ ಆಗ್ರಹ ಮಾಡಿದ್ದರೂ, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕನಿಷ್ಠ ಏಪ್ರಿಲ್ ಮಧ್ಯಾವಧಿವರೆಗೆ ಈ ಬೇಡಿಕೆಯನ್ನು ಒಪ್ಪಿಕೊಳ್ಳುವ ಮನಃಸ್ಥಿತಿಯಲ್ಲಿ ಇದ್ದಂತಿಲ್ಲ.<br /> <br /> ಉದ್ದೇಶಿತ ಮಸೂದೆಯು ಬಜೆಟ್ ಅಧಿವೇಶನದ ಮೊದಲ ಭಾಗದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇಲ್ಲ ಎಂದು ಸರ್ಕಾರದ ಉನ್ನತ ಮೂಲಗಳು `ಪ್ರಜಾವಾಣಿ~ಗೆ ತಿಳಿಸಿವೆ.<br /> <br /> ಮಾರ್ಚ್ ಮೊದಲ ವಾರ ಆರಂಭಗೊಳ್ಳಲಿರುವ ಬಜೆಟ್ ಅಧಿವೇಶನ 20ರವರೆಗೆ ನಡೆಯಬಹುದು. ವಿವಿಧ ಬಜೆಟ್ ಮಂಜೂರಾತಿ ಕುರಿತಂತೆ ಸಂಸದೀಯ ಸ್ಥಾಯಿ ಸಮಿತಿ ಸಭೆಯಲ್ಲಿ ಸಂಸದರು ಭಾಗವಹಿಸಲು ಅನುಕೂಲವಾಗುವಂತೆ ಅಧಿವೇಶನಕ್ಕೆ ಮಧ್ಯಂತರ ವಿರಾಮ ಇರುತ್ತದೆ. <br /> <br /> ಬಜೆಟ್ ಅಧಿವೇಶನದ ಎರಡನೇ ಭಾಗವು ಏಪ್ರಿಲ್ 15ರ ಹೊತ್ತಿಗೆ ಆರಂಭಗೊಳ್ಳುವ ನಿರೀಕ್ಷೆ ಇದ್ದು, ಮೇ 15ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಲೋಕಪಾಲ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.<br /> <br /> `ಬಜೆಟ್ ಅಧಿವೇಶನದ ಮೊದಲ ಭಾಗದಲ್ಲಿ ನಾವು ಲೋಕಪಾಲ ಕುರಿತು ಚರ್ಚೆ ನಡೆಸುವುದಿಲ್ಲ. ಈ ಅವಧಿಯಲ್ಲಿ ಇತರ ಅನೇಕ ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಬೇಕಾಗಿದೆ~ ಎಂದು ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>