<p>ಕುಶಾಲನಗರ: ಮುಂಬರುವ ಕೊಡಗು– ಮೈಸೂರು ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಯಾರೇ ಸ್ಪರ್ಧಿಸಿದರೂ ಗೆಲ್ಲಿಸಲು ಶ್ರಮಿಸುವುದಾಗಿ ಈ ಕ್ಷೇತ್ರದ ಶಕ್ತಿ ಕೇಂದ್ರದ ಕಾರ್ಯಕರ್ತರು ಒಕ್ಕೊರಲಿನಿಂದ ಘೋಷಿಸಿದರು.<br /> <br /> ಇಲ್ಲಿನ ರೈತ ಭವನದಲ್ಲಿ ಬುಧವಾರ ನಡೆದ ಕೊಡಗು–ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಶಕ್ತಿ ಕೇಂದ್ರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪಕ್ಷದ ಹಿರಿಯ ಮುಖಂಡರ ಮಾತಿಗೆ ಸಮ್ಮತಿ ಎನ್ನುವಂತೆ ಕಾರ್ಯಕರ್ತರು ಒಪ್ಪಿಗೆ ಸೂಚಿಸಿದರು.<br /> <br /> ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ದೇಶದೆಲ್ಲೆಡೆ ಜನರು ಬದಲಾವಣೆ ಬಯಸುತ್ತಿದ್ದಾರೆ. ಅವರಿಗೆ ಸ್ಪಂದಿಸುವ ಕೆಲಸವನ್ನು ನಾವು (ಬಿಜೆಪಿ) ಮಾಡಬೇಕಾಗಿದೆ ಎಂದರು. <br /> <br /> ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಪಕ್ಷವನ್ನು ಗೆಲ್ಲಿಸಿಕೊಡಲು ಕಾರ್ಯಕರ್ತರೆಲ್ಲರೂ ಸಂಘಟಿತರಾಗಿ ಪ್ರಯತ್ನಿಸಬೇಕು ಎಂದರು. ಮಾಜಿ ಸಚಿವ ವಿಜಯ ಶಂಕರ್, ಮಾಜಿ ಸಚಿವ ಎಸ್.ಎ. ರಾಮದಾಸ್ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಜಾ ಕುಶಾಲಪ್ಪ ವಂದಿಸಿದರು. <br /> <br /> ಕೊಡಗು ಜಿಲ್ಲೆಯಲ್ಲಿ ಕಸ್ತೂರಿ ರಂಗನ್ ವರದಿಯ ಶಿಫಾರಸುಗಳನ್ನು ಅನುಷ್ಠಾನ ಗೊಳಿಸಬಾರದು ಎನ್ನುವ ಸಭೆಯ ನಿರ್ಣಯವನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನು ಮುತ್ತಪ್ಪ ಮಂಡಿಸಿದರು. ಇದಕ್ಕೆ ಕಾರ್ಯಕರ್ತರು ಒಕ್ಕೊರಲಿನಿಂದ ಸಮ್ಮತಿ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ: ಮುಂಬರುವ ಕೊಡಗು– ಮೈಸೂರು ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಯಾರೇ ಸ್ಪರ್ಧಿಸಿದರೂ ಗೆಲ್ಲಿಸಲು ಶ್ರಮಿಸುವುದಾಗಿ ಈ ಕ್ಷೇತ್ರದ ಶಕ್ತಿ ಕೇಂದ್ರದ ಕಾರ್ಯಕರ್ತರು ಒಕ್ಕೊರಲಿನಿಂದ ಘೋಷಿಸಿದರು.<br /> <br /> ಇಲ್ಲಿನ ರೈತ ಭವನದಲ್ಲಿ ಬುಧವಾರ ನಡೆದ ಕೊಡಗು–ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಶಕ್ತಿ ಕೇಂದ್ರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪಕ್ಷದ ಹಿರಿಯ ಮುಖಂಡರ ಮಾತಿಗೆ ಸಮ್ಮತಿ ಎನ್ನುವಂತೆ ಕಾರ್ಯಕರ್ತರು ಒಪ್ಪಿಗೆ ಸೂಚಿಸಿದರು.<br /> <br /> ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ದೇಶದೆಲ್ಲೆಡೆ ಜನರು ಬದಲಾವಣೆ ಬಯಸುತ್ತಿದ್ದಾರೆ. ಅವರಿಗೆ ಸ್ಪಂದಿಸುವ ಕೆಲಸವನ್ನು ನಾವು (ಬಿಜೆಪಿ) ಮಾಡಬೇಕಾಗಿದೆ ಎಂದರು. <br /> <br /> ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಪಕ್ಷವನ್ನು ಗೆಲ್ಲಿಸಿಕೊಡಲು ಕಾರ್ಯಕರ್ತರೆಲ್ಲರೂ ಸಂಘಟಿತರಾಗಿ ಪ್ರಯತ್ನಿಸಬೇಕು ಎಂದರು. ಮಾಜಿ ಸಚಿವ ವಿಜಯ ಶಂಕರ್, ಮಾಜಿ ಸಚಿವ ಎಸ್.ಎ. ರಾಮದಾಸ್ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಜಾ ಕುಶಾಲಪ್ಪ ವಂದಿಸಿದರು. <br /> <br /> ಕೊಡಗು ಜಿಲ್ಲೆಯಲ್ಲಿ ಕಸ್ತೂರಿ ರಂಗನ್ ವರದಿಯ ಶಿಫಾರಸುಗಳನ್ನು ಅನುಷ್ಠಾನ ಗೊಳಿಸಬಾರದು ಎನ್ನುವ ಸಭೆಯ ನಿರ್ಣಯವನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನು ಮುತ್ತಪ್ಪ ಮಂಡಿಸಿದರು. ಇದಕ್ಕೆ ಕಾರ್ಯಕರ್ತರು ಒಕ್ಕೊರಲಿನಿಂದ ಸಮ್ಮತಿ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>