<p>ಶ್ರೀರಂಗಪಟ್ಟಣ: `ಲೋಕಾಯುಕ್ತರ ನೇಮಕ ವಿಷಯದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯದಿಂದ ಜನರಲ್ಲಿ ಗೊಂದಲ ಮೂಡಿದ್ದು, ಗುಜರಾತ್ ಮಾದರಿಯಲ್ಲಿ ನಮ್ಮಲ್ಲೂ ರಾಜ್ಯಪಾಲರೇ ಲೋಕಾಯುಕ್ತರನ್ನು ನೇಮಿಸುವುದು ಒಳಿತು~ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಬುಧವಾರ ಇಲ್ಲಿ ಹೇಳಿದರು.<br /> <br /> ರೈತಸಂಘ, ಹಸಿರು ಸೇನೆ ಹಾಗೂ ಕರ್ನಾಟಕ ಜನಪರ ವೇದಿಕೆ ಏರ್ಪಡಿಸಿದ್ದ ಭ್ರಷ್ಟಾಚಾರ ವಿರುದ್ಧದ ಜನಜಾಗೃತಿ ಸಮಾವೇಶಕ್ಕೂ ಮುನ್ನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜತೆ ಅವರು ಮಾತನಾಡಿದರು.<br /> <br /> ಗುಜರಾತ್ನಲ್ಲಿ 6 ವರ್ಷಗಳಿಂದ ಖಾಲಿ ಇದ್ದ ಲೋಕಾಯುಕ್ತ ಹುದ್ದೆಗೆ ಅಲ್ಲಿನ ರಾಜ್ಯಪಾಲರು ನೇಮಕ ಮಾಡಿದ್ದಾರೆ. ಇದನ್ನು ಅಲ್ಲಿನ ಹೈಕೋರ್ಟ್ ಎತ್ತಿ ಹಿಡಿದಿದೆ. ರಾಜ್ಯದಲ್ಲೂ ಅದೇ ಮಾದರಿ ಅನುಸರಿಸಲಿ~ ಎಂದರು. <br /> <br /> ವೇದಿಕೆಯಲ್ಲಿ ಮಾತನಾಡಿದ ಎ.ಕೆ.ಸುಬ್ಬಯ್ಯ, `ಬನ್ನೂರ್ಮಠ ಬಗ್ಗೆ ಊಹಾಪೋಹಗಳು ಕೇಳಿ ಬರುತ್ತಿದ್ದು ಆ ಬಗ್ಗೆ ಅವರು ತಮ್ಮ ಪ್ರತಿಕ್ರಿಯೆ ನೀಡಬೇಕು. ಮುಖ್ಯಮಂತ್ರಿ ಸದಾನಂದಗೌಡ ಹಟ ಹಿಡಿಯದೆ ಆದಷ್ಟು ಶೀಘ್ರ ಉತ್ತಮರನ್ನು ಲೋಕಾಯುಕ್ತರ ಸ್ಥಾನಕ್ಕೆ ಸೂಚಿಸಬೇಕು. ಬನ್ನೂರ್ಮಠ ಅವರ ನೇಮಕ ಸಮ್ಮತವಲ್ಲ ಎನಿಸಿದರೆ ರಾಜ್ಯಪಾಲರು ಏಕೆ ಆ ಬಗೆಗಿನ ಕಡತವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿಲ್ಲ~ ಎಂದು ಪ್ರಶ್ನಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಂಗಪಟ್ಟಣ: `ಲೋಕಾಯುಕ್ತರ ನೇಮಕ ವಿಷಯದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯದಿಂದ ಜನರಲ್ಲಿ ಗೊಂದಲ ಮೂಡಿದ್ದು, ಗುಜರಾತ್ ಮಾದರಿಯಲ್ಲಿ ನಮ್ಮಲ್ಲೂ ರಾಜ್ಯಪಾಲರೇ ಲೋಕಾಯುಕ್ತರನ್ನು ನೇಮಿಸುವುದು ಒಳಿತು~ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಬುಧವಾರ ಇಲ್ಲಿ ಹೇಳಿದರು.<br /> <br /> ರೈತಸಂಘ, ಹಸಿರು ಸೇನೆ ಹಾಗೂ ಕರ್ನಾಟಕ ಜನಪರ ವೇದಿಕೆ ಏರ್ಪಡಿಸಿದ್ದ ಭ್ರಷ್ಟಾಚಾರ ವಿರುದ್ಧದ ಜನಜಾಗೃತಿ ಸಮಾವೇಶಕ್ಕೂ ಮುನ್ನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜತೆ ಅವರು ಮಾತನಾಡಿದರು.<br /> <br /> ಗುಜರಾತ್ನಲ್ಲಿ 6 ವರ್ಷಗಳಿಂದ ಖಾಲಿ ಇದ್ದ ಲೋಕಾಯುಕ್ತ ಹುದ್ದೆಗೆ ಅಲ್ಲಿನ ರಾಜ್ಯಪಾಲರು ನೇಮಕ ಮಾಡಿದ್ದಾರೆ. ಇದನ್ನು ಅಲ್ಲಿನ ಹೈಕೋರ್ಟ್ ಎತ್ತಿ ಹಿಡಿದಿದೆ. ರಾಜ್ಯದಲ್ಲೂ ಅದೇ ಮಾದರಿ ಅನುಸರಿಸಲಿ~ ಎಂದರು. <br /> <br /> ವೇದಿಕೆಯಲ್ಲಿ ಮಾತನಾಡಿದ ಎ.ಕೆ.ಸುಬ್ಬಯ್ಯ, `ಬನ್ನೂರ್ಮಠ ಬಗ್ಗೆ ಊಹಾಪೋಹಗಳು ಕೇಳಿ ಬರುತ್ತಿದ್ದು ಆ ಬಗ್ಗೆ ಅವರು ತಮ್ಮ ಪ್ರತಿಕ್ರಿಯೆ ನೀಡಬೇಕು. ಮುಖ್ಯಮಂತ್ರಿ ಸದಾನಂದಗೌಡ ಹಟ ಹಿಡಿಯದೆ ಆದಷ್ಟು ಶೀಘ್ರ ಉತ್ತಮರನ್ನು ಲೋಕಾಯುಕ್ತರ ಸ್ಥಾನಕ್ಕೆ ಸೂಚಿಸಬೇಕು. ಬನ್ನೂರ್ಮಠ ಅವರ ನೇಮಕ ಸಮ್ಮತವಲ್ಲ ಎನಿಸಿದರೆ ರಾಜ್ಯಪಾಲರು ಏಕೆ ಆ ಬಗೆಗಿನ ಕಡತವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿಲ್ಲ~ ಎಂದು ಪ್ರಶ್ನಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>