<p><strong>ಕುಶಾಲನಗರ: </strong>ಸಮೀಪದ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯಲ್ಲಿ ಎರಡು ತಿಂಗಳ ಹಿಂದೆ ನಡೆದಿದೆ ಎನ್ನಲಾದ 37 ಲಕ್ಷ ರೂಪಾಯಿ ಅವ್ಯವಹಾರ ಕುರಿತು ಲೋಕಾಯುಕ್ತ ಪೊಲೀಸರು ಸೋಮವಾರ ಪಂಚಾಯಿತಿಯಲ್ಲಿ ತನಿಖೆ ನಡೆಸಿದರು.<br /> <br /> ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ₨ 37 ಲಕ್ಷ ಅವ್ಯವಹಾರ ನಡೆದಿದೆ ಎಂದು ಕೆಲ ದಿನಗಳ ಹಿಂದೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ಸೋಮವಾರ ಪಂಚಾಯಿತಿಗೆ ಭೇಟಿ ನೀಡಿದ ಲೋಕಾಯುಕ್ತ ಡಿವೈಎಸ್ಪಿ ವಿಜಯ್ ಗೋಪಾಲ್ ನೇತೃತ್ವದ ತಂಡವು ದಾಖಲೆಗಳ ಪರಿಶೀಲನೆ ನಡೆಸಿತು.<br /> <br /> ಬೆಳಿಗ್ಗೆ 10 ಗಂಟೆಗೆ ಪಂಚಾಯಿತಿಗೆ ಭೇಟಿ ನೀಡಿದ ಲೋಕಾಯುಕ್ತ ತಂಡವು ಸಂಜೆ 4 ಗಂಟೆವರೆಗೂ ದಾಖಲೆಗಳ ಪರಿಶೀಲನೆ ನಡೆಸಿತು. ಅಲ್ಲದೇ, ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಹಿಂದಿನ ಅಭಿವೃದ್ಧಿ ಅಧಿಕಾರಿ ಮಂಜ್ರೂರ್ ಖಾನ್ ಅವರನ್ನು ತಂಡವು ವಿಚಾರಣೆ ನಡೆಸಿತು.<br /> <br /> ಪರಿಶೀಲನೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ತಂಡವು, ಈ ಹಿಂದೆಯೇ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಕಡತಗಳನ್ನು ವಶಪಡಿಸಿಕೊಂಡು ಇಲಾಖೆಯ ವಶದಲ್ಲಿಟ್ಟಿದ್ದರು. ಅವುಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿತು.<br /> <br /> ಕೊಡಗು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀವಿದ್ಯಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪಿ. ಚಂದ್ರಶೇಖರ್, ಲೋಕಾಯುಕ್ತ ಇನ್ಸ್ಪೆಕ್ಟರ್ ಪರಶುರಾಮ್ ಸೇರಿದಂತೆ ತಂಡದಲ್ಲಿ 8 ಜನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ: </strong>ಸಮೀಪದ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯಲ್ಲಿ ಎರಡು ತಿಂಗಳ ಹಿಂದೆ ನಡೆದಿದೆ ಎನ್ನಲಾದ 37 ಲಕ್ಷ ರೂಪಾಯಿ ಅವ್ಯವಹಾರ ಕುರಿತು ಲೋಕಾಯುಕ್ತ ಪೊಲೀಸರು ಸೋಮವಾರ ಪಂಚಾಯಿತಿಯಲ್ಲಿ ತನಿಖೆ ನಡೆಸಿದರು.<br /> <br /> ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ₨ 37 ಲಕ್ಷ ಅವ್ಯವಹಾರ ನಡೆದಿದೆ ಎಂದು ಕೆಲ ದಿನಗಳ ಹಿಂದೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ಸೋಮವಾರ ಪಂಚಾಯಿತಿಗೆ ಭೇಟಿ ನೀಡಿದ ಲೋಕಾಯುಕ್ತ ಡಿವೈಎಸ್ಪಿ ವಿಜಯ್ ಗೋಪಾಲ್ ನೇತೃತ್ವದ ತಂಡವು ದಾಖಲೆಗಳ ಪರಿಶೀಲನೆ ನಡೆಸಿತು.<br /> <br /> ಬೆಳಿಗ್ಗೆ 10 ಗಂಟೆಗೆ ಪಂಚಾಯಿತಿಗೆ ಭೇಟಿ ನೀಡಿದ ಲೋಕಾಯುಕ್ತ ತಂಡವು ಸಂಜೆ 4 ಗಂಟೆವರೆಗೂ ದಾಖಲೆಗಳ ಪರಿಶೀಲನೆ ನಡೆಸಿತು. ಅಲ್ಲದೇ, ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಹಿಂದಿನ ಅಭಿವೃದ್ಧಿ ಅಧಿಕಾರಿ ಮಂಜ್ರೂರ್ ಖಾನ್ ಅವರನ್ನು ತಂಡವು ವಿಚಾರಣೆ ನಡೆಸಿತು.<br /> <br /> ಪರಿಶೀಲನೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ತಂಡವು, ಈ ಹಿಂದೆಯೇ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಕಡತಗಳನ್ನು ವಶಪಡಿಸಿಕೊಂಡು ಇಲಾಖೆಯ ವಶದಲ್ಲಿಟ್ಟಿದ್ದರು. ಅವುಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿತು.<br /> <br /> ಕೊಡಗು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀವಿದ್ಯಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪಿ. ಚಂದ್ರಶೇಖರ್, ಲೋಕಾಯುಕ್ತ ಇನ್ಸ್ಪೆಕ್ಟರ್ ಪರಶುರಾಮ್ ಸೇರಿದಂತೆ ತಂಡದಲ್ಲಿ 8 ಜನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>