<p><strong>ಬೆಂಗಳೂರು:</strong> ಹಲವಾರು ತಿಂಗಳುಗಳಿಂದ ಖಾಲಿ ಇರುವ ರಾಜ್ಯ ಲೋಕಾಯುಕ್ತ ಹುದ್ದೆಗೆ ಅರ್ಹ ವ್ಯಕ್ತಿಯನ್ನು ನೇಮಿಸಲು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಸದಸ್ಯರು ಇತ್ತೀಚೆಗೆ ರಾಜ್ಯಪಾಲರನ್ನು ಕಂಡು ಮನವಿ ಸಲ್ಲಿಸಿದರು.</p>.<p>ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರನ್ನು ಭೇಟಿ ಮಾಡಿ ಶೀಘ್ರ ಖಾಲಿ ಹುದ್ದೆಯನ್ನು ತುಂಬುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ದೊರೆಸ್ವಾಮಿ ಅವರು ನಿವೃತ್ತ ನ್ಯಾಯಾಧೀಶರಾದ ಮೈಸೂರಿನ ಶ್ರೀಕೃಷ್ಣ ಅವರ ಹೆಸರನ್ನು ಲೋಕಾಯುಕ್ತ ಸ್ಥಾನದ ನೇಮಕಕ್ಕಾಗಿ ಸೂಚಿಸಿದರು.</p>.<p>ಇದೇ ಸಂದರ್ಭದಲ್ಲಿ ಸರ್ಕಾರಿ ಭೂ ಒತ್ತವರಿ ಕಾರ್ಯಪಡೆಯ ಅಧ್ಯಕ್ಷ ಎ.ಟಿ.ರಾಮಸ್ವಾಮಿ ಅವರ ವರದಿಯನ್ನು ಜಾರಿಗೆ ತರಬೇಕು ಎಂದು ವೇದಿಕೆಯ ಸದಸ್ಯರು ಮನವಿ ಮಾಡಿದರು.</p>.<p>ವೇದಿಕೆಯ ಅಧ್ಯಕ್ಷ ಕೆ.ಪ್ರಭಾಕರರೆಡ್ಡಿ, ಕರ್ನಾಟಕ ಕೈಗಾರಿಕಾ ಕನ್ನಡ ಸಂಘಗಳ ಒಕ್ಕೂಟದ ಕಾರ್ಯಾಧ್ಯಕ್ಷ ಸಿದ್ದಯ್ಯ, ಕನ್ನಡ ವೇದಿಕೆಯ ಯುವ ಘಟಕದ ಅಧ್ಯಕ್ಷ ಎಂ.ಲಕ್ಷ್ಮಣ ಮನವಿ ಸಲ್ಲಿಸುವ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಲವಾರು ತಿಂಗಳುಗಳಿಂದ ಖಾಲಿ ಇರುವ ರಾಜ್ಯ ಲೋಕಾಯುಕ್ತ ಹುದ್ದೆಗೆ ಅರ್ಹ ವ್ಯಕ್ತಿಯನ್ನು ನೇಮಿಸಲು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಸದಸ್ಯರು ಇತ್ತೀಚೆಗೆ ರಾಜ್ಯಪಾಲರನ್ನು ಕಂಡು ಮನವಿ ಸಲ್ಲಿಸಿದರು.</p>.<p>ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರನ್ನು ಭೇಟಿ ಮಾಡಿ ಶೀಘ್ರ ಖಾಲಿ ಹುದ್ದೆಯನ್ನು ತುಂಬುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ದೊರೆಸ್ವಾಮಿ ಅವರು ನಿವೃತ್ತ ನ್ಯಾಯಾಧೀಶರಾದ ಮೈಸೂರಿನ ಶ್ರೀಕೃಷ್ಣ ಅವರ ಹೆಸರನ್ನು ಲೋಕಾಯುಕ್ತ ಸ್ಥಾನದ ನೇಮಕಕ್ಕಾಗಿ ಸೂಚಿಸಿದರು.</p>.<p>ಇದೇ ಸಂದರ್ಭದಲ್ಲಿ ಸರ್ಕಾರಿ ಭೂ ಒತ್ತವರಿ ಕಾರ್ಯಪಡೆಯ ಅಧ್ಯಕ್ಷ ಎ.ಟಿ.ರಾಮಸ್ವಾಮಿ ಅವರ ವರದಿಯನ್ನು ಜಾರಿಗೆ ತರಬೇಕು ಎಂದು ವೇದಿಕೆಯ ಸದಸ್ಯರು ಮನವಿ ಮಾಡಿದರು.</p>.<p>ವೇದಿಕೆಯ ಅಧ್ಯಕ್ಷ ಕೆ.ಪ್ರಭಾಕರರೆಡ್ಡಿ, ಕರ್ನಾಟಕ ಕೈಗಾರಿಕಾ ಕನ್ನಡ ಸಂಘಗಳ ಒಕ್ಕೂಟದ ಕಾರ್ಯಾಧ್ಯಕ್ಷ ಸಿದ್ದಯ್ಯ, ಕನ್ನಡ ವೇದಿಕೆಯ ಯುವ ಘಟಕದ ಅಧ್ಯಕ್ಷ ಎಂ.ಲಕ್ಷ್ಮಣ ಮನವಿ ಸಲ್ಲಿಸುವ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>