<p><strong>ಬೆಂಗಳೂರು: </strong>`ಕರ್ನಾಟಕದಲ್ಲಿ ಲೋಕಾಯುಕ್ತರ ನೇಮಕ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಈ ವಿಚಾರದಲ್ಲಿ ಸರ್ಕಾರದೊಂದಿಗೆ ಸಂಘರ್ಷ ಕೂಡ ಇಲ್ಲ. ಮುಖ್ಯಮಂತ್ರಿಗಳ ಮೇಲೆ ನನಗೆ ಪೂರ್ಣ ವಿಶ್ವಾಸವಿದೆ. ಲೋಕಾಯುಕ್ತರ ನೇಮಕಕ್ಕೆ ಅರ್ಹರ ಹೆಸರನ್ನು ಶಿಫಾರಸು ಮಾಡಿದಲ್ಲಿ ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳುತ್ತೇನೆ~ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಬುಧವಾರ ಇಲ್ಲಿ ಪ್ರತಿಕ್ರಿಯಿಸಿದರು.<br /> <br /> ಗುಜರಾತ್ನಲ್ಲಿ ರಾಜ್ಯಪಾಲರೇ ಲೋಕಾಯುಕ್ತರ ನೇಮಕ ಮಾಡಿರುವುದನ್ನು ಅಲ್ಲಿನ ಹೈಕೋರ್ಟ್ ಸಂವಿಧಾನ ಬದ್ಧವಾದುದು ಎಂದು ಎತ್ತಿ ಹಿಡಿದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, `ಲೋಕಾಯುಕ್ತರ ನೇಮಕ ವಿಚಾರದಲ್ಲಿ ಗುಜರಾತ್ನ ಪರಿಸ್ಥಿತಿ ವಿಭಿನ್ನ. ಕರ್ನಾಟಕದಲ್ಲಿ ಅಂತಹ ಯಾವುದೇ ಗೊಂದಲವಿಲ್ಲ. ಹೀಗಾಗಿ, ಅಲ್ಲಿಗೆ ಸೀಮಿತವಾಗಿ ಹೈಕೋರ್ಟ್ ನೀಡಿರುವ ತೀರ್ಪನ್ನು ಇಲ್ಲಿಗೆ ಅನ್ವಯಿಸಲು ಸಾಧ್ಯವಾಗದು~ ಎಂದು ಅವರು ಹೇಳಿದರು.<br /> <br /> ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರಿಗೆ ವಿಶ್ವ ಮಾನವ ಪ್ರಶಸ್ತಿ ಪ್ರದಾನ ಮಾಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಲೋಕಾಯುಕ್ತರ ನೇಮಕ ವಿಳಂಬದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ಜನಪ್ರತಿನಿಧಿಗಳು ಆರೋಪಮುಕ್ತರಾಗುತ್ತಿದ್ದಾರೆ ಹಾಗೂ ಲೋಕಾಯುಕ್ತ ಸಂಸ್ಥೆ ಪರವಾಗಿ ಸಮರ್ಥವಾಗಿ ವಾದ ಮಂಡನೆಯಾಗುತ್ತಿಲ್ಲ ಎಂಬ ಆರೋಪದ ಬಗ್ಗೆ, `ಇದು ನನಗೆ ಸಂಬಂಧಿಸಿದ ವಿಚಾರವಲ್ಲ. ಬೇಕಾದಲ್ಲಿ ಸರ್ಕಾರ ಉತ್ತಮ ವಕೀಲರನ್ನು ನಿಯೋಜಿಸಿಕೊಳ್ಳಲಿ~ ಎಂದು ಸಲಹೆ ಮಾಡಿದರು.<br /> <br /> `ಲೋಕಾಯುಕ್ತರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ನಾನು ಈಗಾಗಲೇ ಚರ್ಚೆ ನಡೆಸಿದ್ದೇನೆ. ಅರ್ಹರ ಹೆಸರನ್ನು ಶಿಫಾರಸು ಮಾಡಲು ಸ್ವಲ್ಪ ಕಾಲಾವಕಾಶ ಬೇಕಾಗಬಹುದು ಎಂದು ಹೇಳಿದ್ದಾರೆ. <br /> <br /> ಮುಖ್ಯಮಂತ್ರಿಗಳ ಬಗ್ಗೆ ನನಗೆ ನಂಬಿಕೆಯಿದೆ. ಅವರಿಂದ ಮೊದಲು ಶಿಫಾರಸು ಬರಲಿ. ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇನೆ~ ಎಂದು ಅವರು ನುಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಕರ್ನಾಟಕದಲ್ಲಿ ಲೋಕಾಯುಕ್ತರ ನೇಮಕ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಈ ವಿಚಾರದಲ್ಲಿ ಸರ್ಕಾರದೊಂದಿಗೆ ಸಂಘರ್ಷ ಕೂಡ ಇಲ್ಲ. ಮುಖ್ಯಮಂತ್ರಿಗಳ ಮೇಲೆ ನನಗೆ ಪೂರ್ಣ ವಿಶ್ವಾಸವಿದೆ. ಲೋಕಾಯುಕ್ತರ ನೇಮಕಕ್ಕೆ ಅರ್ಹರ ಹೆಸರನ್ನು ಶಿಫಾರಸು ಮಾಡಿದಲ್ಲಿ ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳುತ್ತೇನೆ~ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಬುಧವಾರ ಇಲ್ಲಿ ಪ್ರತಿಕ್ರಿಯಿಸಿದರು.<br /> <br /> ಗುಜರಾತ್ನಲ್ಲಿ ರಾಜ್ಯಪಾಲರೇ ಲೋಕಾಯುಕ್ತರ ನೇಮಕ ಮಾಡಿರುವುದನ್ನು ಅಲ್ಲಿನ ಹೈಕೋರ್ಟ್ ಸಂವಿಧಾನ ಬದ್ಧವಾದುದು ಎಂದು ಎತ್ತಿ ಹಿಡಿದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, `ಲೋಕಾಯುಕ್ತರ ನೇಮಕ ವಿಚಾರದಲ್ಲಿ ಗುಜರಾತ್ನ ಪರಿಸ್ಥಿತಿ ವಿಭಿನ್ನ. ಕರ್ನಾಟಕದಲ್ಲಿ ಅಂತಹ ಯಾವುದೇ ಗೊಂದಲವಿಲ್ಲ. ಹೀಗಾಗಿ, ಅಲ್ಲಿಗೆ ಸೀಮಿತವಾಗಿ ಹೈಕೋರ್ಟ್ ನೀಡಿರುವ ತೀರ್ಪನ್ನು ಇಲ್ಲಿಗೆ ಅನ್ವಯಿಸಲು ಸಾಧ್ಯವಾಗದು~ ಎಂದು ಅವರು ಹೇಳಿದರು.<br /> <br /> ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರಿಗೆ ವಿಶ್ವ ಮಾನವ ಪ್ರಶಸ್ತಿ ಪ್ರದಾನ ಮಾಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಲೋಕಾಯುಕ್ತರ ನೇಮಕ ವಿಳಂಬದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ಜನಪ್ರತಿನಿಧಿಗಳು ಆರೋಪಮುಕ್ತರಾಗುತ್ತಿದ್ದಾರೆ ಹಾಗೂ ಲೋಕಾಯುಕ್ತ ಸಂಸ್ಥೆ ಪರವಾಗಿ ಸಮರ್ಥವಾಗಿ ವಾದ ಮಂಡನೆಯಾಗುತ್ತಿಲ್ಲ ಎಂಬ ಆರೋಪದ ಬಗ್ಗೆ, `ಇದು ನನಗೆ ಸಂಬಂಧಿಸಿದ ವಿಚಾರವಲ್ಲ. ಬೇಕಾದಲ್ಲಿ ಸರ್ಕಾರ ಉತ್ತಮ ವಕೀಲರನ್ನು ನಿಯೋಜಿಸಿಕೊಳ್ಳಲಿ~ ಎಂದು ಸಲಹೆ ಮಾಡಿದರು.<br /> <br /> `ಲೋಕಾಯುಕ್ತರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ನಾನು ಈಗಾಗಲೇ ಚರ್ಚೆ ನಡೆಸಿದ್ದೇನೆ. ಅರ್ಹರ ಹೆಸರನ್ನು ಶಿಫಾರಸು ಮಾಡಲು ಸ್ವಲ್ಪ ಕಾಲಾವಕಾಶ ಬೇಕಾಗಬಹುದು ಎಂದು ಹೇಳಿದ್ದಾರೆ. <br /> <br /> ಮುಖ್ಯಮಂತ್ರಿಗಳ ಬಗ್ಗೆ ನನಗೆ ನಂಬಿಕೆಯಿದೆ. ಅವರಿಂದ ಮೊದಲು ಶಿಫಾರಸು ಬರಲಿ. ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇನೆ~ ಎಂದು ಅವರು ನುಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>