<p><strong>ಬೆಂಗಳೂರು</strong>: ಪ್ರಕರಣವೊಂದರ ಆರೋಪಪಟ್ಟಿ ಸಲ್ಲಿಸಲು ವಕೀಲರೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಚಿಕ್ಕಜಾಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಂಕರ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.<br /> <br /> ಠಾಣೆಯ ವ್ಯಾಪ್ತಿಯ ವಸಂತಕುಮಾರ್ ಎಂಬ ವಕೀಲರು ವ್ಯಕ್ತಿಯೊಬ್ಬರಿಗೆ ತಮ್ಮ ಭೂಮಿ ಮಾರಿದ್ದರು. ಅವರಿಂದ ಭೂಮಿ ಖರೀದಿಸಿದ ವ್ಯಕ್ತಿ 72 ಲಕ್ಷ ರೂಪಾಯಿ ನೀಡದೇ ವಂಚಿಸಿದ್ದರು. ಈ ಬಗ್ಗೆ ವಕೀಲರು ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ತನಿಖೆಯನ್ನು ಚಿಕ್ಕಜಾಲ ಪೊಲೀಸರಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿತ್ತು.<br /> <br /> ಸುದೀರ್ಘ ಕಾಲ ಕಳೆದರೂ ಪ್ರಕರಣದ ಆರೋಪಪಟ್ಟಿ ಸಲ್ಲಿಸಿರಲಿಲ್ಲ. ಈ ಸಂಬಂಧ ತನಿಖಾಧಿಕಾರಿಯಾಗಿದ್ದ ಶಂಕರ್ ಅವರನ್ನು ಭೇಟಿಮಾಡಿದ ವಸಂತಕುಮಾರ್, ಶೀಘ್ರದಲ್ಲಿ ಆರೋಪಪಟ್ಟಿ ಸಲ್ಲಿಸುವಂತೆ ಮನವಿ ಮಾಡಿದ್ದರು. ಆಗ ಆರೋಪಿ ಅಧಿಕಾರಿ ರೂ 15 ಸಾವಿರ ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ವಕೀಲರು ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.<br /> <br /> ‘ಸೋಮವಾರ ಠಾಣೆಯಲ್ಲೇ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ನಮ್ಮ ಪೊಲೀಸರು ಆರೋಪಿ ಸಬ್ ಇನ್ಸ್ಪೆಕ್ಟರ್ನನ್ನು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆ ಪೂರ್ಣಗೊಳಿಸಿದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು’ ಎಂದು ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಕೆ.ಮಧುಕರ ಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರಕರಣವೊಂದರ ಆರೋಪಪಟ್ಟಿ ಸಲ್ಲಿಸಲು ವಕೀಲರೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಚಿಕ್ಕಜಾಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಂಕರ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.<br /> <br /> ಠಾಣೆಯ ವ್ಯಾಪ್ತಿಯ ವಸಂತಕುಮಾರ್ ಎಂಬ ವಕೀಲರು ವ್ಯಕ್ತಿಯೊಬ್ಬರಿಗೆ ತಮ್ಮ ಭೂಮಿ ಮಾರಿದ್ದರು. ಅವರಿಂದ ಭೂಮಿ ಖರೀದಿಸಿದ ವ್ಯಕ್ತಿ 72 ಲಕ್ಷ ರೂಪಾಯಿ ನೀಡದೇ ವಂಚಿಸಿದ್ದರು. ಈ ಬಗ್ಗೆ ವಕೀಲರು ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ತನಿಖೆಯನ್ನು ಚಿಕ್ಕಜಾಲ ಪೊಲೀಸರಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿತ್ತು.<br /> <br /> ಸುದೀರ್ಘ ಕಾಲ ಕಳೆದರೂ ಪ್ರಕರಣದ ಆರೋಪಪಟ್ಟಿ ಸಲ್ಲಿಸಿರಲಿಲ್ಲ. ಈ ಸಂಬಂಧ ತನಿಖಾಧಿಕಾರಿಯಾಗಿದ್ದ ಶಂಕರ್ ಅವರನ್ನು ಭೇಟಿಮಾಡಿದ ವಸಂತಕುಮಾರ್, ಶೀಘ್ರದಲ್ಲಿ ಆರೋಪಪಟ್ಟಿ ಸಲ್ಲಿಸುವಂತೆ ಮನವಿ ಮಾಡಿದ್ದರು. ಆಗ ಆರೋಪಿ ಅಧಿಕಾರಿ ರೂ 15 ಸಾವಿರ ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ವಕೀಲರು ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.<br /> <br /> ‘ಸೋಮವಾರ ಠಾಣೆಯಲ್ಲೇ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ನಮ್ಮ ಪೊಲೀಸರು ಆರೋಪಿ ಸಬ್ ಇನ್ಸ್ಪೆಕ್ಟರ್ನನ್ನು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆ ಪೂರ್ಣಗೊಳಿಸಿದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು’ ಎಂದು ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಕೆ.ಮಧುಕರ ಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>