<p><strong>ತಿಪಟೂರು: </strong>ನಗರಸಭೆ ಸ್ವಯಂ ಘೋಷಿತ ಆಸ್ತಿ ತೆರಿಗೆ ಪಾವತಿಯಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅವ್ಯವಹಾರವನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸಬೇಕು ಎಂದು ನಗರಸಭೆಯ 22 ಸದಸ್ಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ.<br /> <br /> ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಶೇಖರ್, ಉಪಾಧ್ಯಕ್ಷ ಟಿ.ಎನ್.ಪ್ರಕಾಶ್ ಹಾಗೂ ಕೆಲ ಸದಸ್ಯರೊಂದಿಗೆ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಎಂ.ಆರ್.ದಿನೇಶ್ಕುಮಾರ್ ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಚೆಗೆ ಬೆಳಕಿಗೆ ಬಂದ ತೆರಿಗೆ ಹಣ ವಂಚನೆ ಪ್ರಕರಣದಲ್ಲಿ ನಗರಸಭೆಗೆ 2 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ. ಆದರೆ ಇಷ್ಟೊಂದು ದೊಡ್ಡ ಮೊತ್ತದ ವಂಚನೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ದೂರಿದರು.<br /> <br /> ಇದುವರೆವಿಗೂ ಜಿಲ್ಲಾಧಿಕಾರಿ ಸಮಗ್ರ ಪರಿವೀಕ್ಷಣಾ ತಂಡ ಕಳುಹಿಸಿಲ್ಲ. ನಗರಸಭೆ ಸಿಬ್ಬಂದಿ ಮಾತ್ರ ಹಳೆ ಕಡತ ಬಿಚ್ಚಿಕೊಂಡು ಪರಿಶೀಲನೆಯ ಸರ್ಕಸ್ ಮಾಡುತ್ತಿದ್ದಾರೆ. ಇದರಿಂದ ಸತ್ಯ ಹೊರಬರುವ ನಂಬಿಕೆ ಇಲ್ಲ ಎಂದರು.<br /> ನಗರಸಭೆ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿ ಪ್ರಕರಣದ ತನಿಖೆ ಕುರಿತು ದಿಟ್ಟ ನಿರ್ಧಾರ ತಾಳುವರೆಂಬ ನಂಬಿಕೆಯಿಂದ ನಗರಸಭೆ ಸದಸ್ಯರು ಈವರೆಗೆ ಸಂಯಮದಿಂದ ಕಾಯ್ದಿದ್ದರು.<br /> <br /> ಆ ನಂಬಿಕೆ ಹುಸಿಯಾಗಿದ್ದರಿಂದ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಕರಣವನ್ನು ಮೇಲ್ಮಟ್ಟದ ತನಿಖೆಗೆ ಒಪ್ಪಿಸಬೇಕೆಂಬುದು ತಮ್ಮ ಆಗ್ರಹವಾಗಿದೆ. ಈ ಕುರಿತು ನಗರಾಡಳಿತ ಇಲಾಖೆ ಕಾರ್ಯದರ್ಶಿ, ಪೌರಾಡಳಿತ ಇಲಾಖೆ ನಿರ್ದೇಶಕರಿಗೆ ಈ ಬಗ್ಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು. ನಗರಸಭೆ ಸದಸ್ಯರಾದ ಇಸ್ಮಾಯಿಲ್, ನಾಜೀರ್ ಖಾನ್, ನದೀಂ, ನಸರತ್ತುಲ್ಲಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು: </strong>ನಗರಸಭೆ ಸ್ವಯಂ ಘೋಷಿತ ಆಸ್ತಿ ತೆರಿಗೆ ಪಾವತಿಯಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅವ್ಯವಹಾರವನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸಬೇಕು ಎಂದು ನಗರಸಭೆಯ 22 ಸದಸ್ಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ.<br /> <br /> ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಶೇಖರ್, ಉಪಾಧ್ಯಕ್ಷ ಟಿ.ಎನ್.ಪ್ರಕಾಶ್ ಹಾಗೂ ಕೆಲ ಸದಸ್ಯರೊಂದಿಗೆ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಎಂ.ಆರ್.ದಿನೇಶ್ಕುಮಾರ್ ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಚೆಗೆ ಬೆಳಕಿಗೆ ಬಂದ ತೆರಿಗೆ ಹಣ ವಂಚನೆ ಪ್ರಕರಣದಲ್ಲಿ ನಗರಸಭೆಗೆ 2 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ. ಆದರೆ ಇಷ್ಟೊಂದು ದೊಡ್ಡ ಮೊತ್ತದ ವಂಚನೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ದೂರಿದರು.<br /> <br /> ಇದುವರೆವಿಗೂ ಜಿಲ್ಲಾಧಿಕಾರಿ ಸಮಗ್ರ ಪರಿವೀಕ್ಷಣಾ ತಂಡ ಕಳುಹಿಸಿಲ್ಲ. ನಗರಸಭೆ ಸಿಬ್ಬಂದಿ ಮಾತ್ರ ಹಳೆ ಕಡತ ಬಿಚ್ಚಿಕೊಂಡು ಪರಿಶೀಲನೆಯ ಸರ್ಕಸ್ ಮಾಡುತ್ತಿದ್ದಾರೆ. ಇದರಿಂದ ಸತ್ಯ ಹೊರಬರುವ ನಂಬಿಕೆ ಇಲ್ಲ ಎಂದರು.<br /> ನಗರಸಭೆ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿ ಪ್ರಕರಣದ ತನಿಖೆ ಕುರಿತು ದಿಟ್ಟ ನಿರ್ಧಾರ ತಾಳುವರೆಂಬ ನಂಬಿಕೆಯಿಂದ ನಗರಸಭೆ ಸದಸ್ಯರು ಈವರೆಗೆ ಸಂಯಮದಿಂದ ಕಾಯ್ದಿದ್ದರು.<br /> <br /> ಆ ನಂಬಿಕೆ ಹುಸಿಯಾಗಿದ್ದರಿಂದ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಕರಣವನ್ನು ಮೇಲ್ಮಟ್ಟದ ತನಿಖೆಗೆ ಒಪ್ಪಿಸಬೇಕೆಂಬುದು ತಮ್ಮ ಆಗ್ರಹವಾಗಿದೆ. ಈ ಕುರಿತು ನಗರಾಡಳಿತ ಇಲಾಖೆ ಕಾರ್ಯದರ್ಶಿ, ಪೌರಾಡಳಿತ ಇಲಾಖೆ ನಿರ್ದೇಶಕರಿಗೆ ಈ ಬಗ್ಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು. ನಗರಸಭೆ ಸದಸ್ಯರಾದ ಇಸ್ಮಾಯಿಲ್, ನಾಜೀರ್ ಖಾನ್, ನದೀಂ, ನಸರತ್ತುಲ್ಲಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>