<p><strong>ನವದೆಹಲಿ (ಐಎಎನ್ಎಸ್): </strong>ರಾಜ್ಯ ವಿಧಾನಸಭಾಧ್ಯಕ್ಷ ಮತ್ತು ಉಪ ಸಭಾಧ್ಯಕ್ಷರನ್ನು ಹೊರತು ಪಡಿಸಿ ಬೇರೆ ಯಾರಿಗೂ ಭ್ರಷ್ಟಾಚಾರ ಆರೋಪ ಕುರಿತ ಲೋಕಾಯುಕ್ತ ತನಿಖೆಯಿಂದ ವಿನಾಯಿತಿ ಇಲ್ಲ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.</p>.<p>ಮುಖ್ಯನ್ಯಾಯಮೂರ್ತಿ ಪಿ.ಸದಾಶಿವಂ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ರಂಜನ್ ಗೊಗೋಯ್, ಶಿವ ಕೀರ್ತಿ ಸಿಂಗ್ ಅವರನ್ನು ಒಳಗೊಂಡ ತ್ರಿಸದಸ್ಯ ನ್ಯಾಯಪೀಠವು ಈ ಮಹತ್ವದ ತೀರ್ಪನ್ನು ನೀಡಿದ್ದು, 'ಪ್ರತಿಯೊಬ್ಬರು ಒಂದೇ ವರ್ಗಕ್ಕೆ ಸೇರಿದ್ದಾರೆ. ಹಾಗಾಗಿ ಸಾಮಾನ್ಯ ವ್ಯಕ್ತಿಗೆ ವಿಶೇಷ ಹಕ್ಕು ದೊರೆಯಲಾರದು' ಎಂದು ಹೇಳಿತು.<br /> <br /> 2007ರಲ್ಲಿ ಮಧ್ಯಪ್ರದೇಶದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ತನಿಖೆ ಕೈಗೆತ್ತಿಕೊಂಡ ಲೋಕಾಯುಕ್ತವು ಸರ್ಕಾರದ ಕಾರ್ಯದರ್ಶಿಗೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳೊಂದಿಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಲೋಕಾಯುಕ್ತದ ಈ ಕ್ರಮದಿಂದ ಹಕ್ಕು ಉಲ್ಲಂಘನೆಯಾಗಿದೆ ಎಂದ ರಾಜ್ಯ ಸರ್ಕಾರವು ಪ್ರತಿಯಾಗಿ ಲೋಕಾಯುಕ್ತಕ್ಕೆ ಷೋಕಾಸ್ ನೋಟಿಸ್ ಕಳುಹಿಸಿತ್ತು. ನಂತರ ಈ ಪ್ರಕರಣವು ಸುಪ್ರೀಂ ಕೋರ್ಟ್ ಮೇಟ್ಟಿಲೇರಿದೆ.<br /> <br /> ಪ್ರಕರಣದ ವಿಚಾರಣೆ ವೇಳೆ ಲೋಕಾಯುಕ್ತದ ಕ್ರಮವನ್ನು ಎತ್ತಿಹಿಡಿದ ಪೀಠವು ಅದರಿಂದ ಯಾವುದೇ ಹಕ್ಕು ಉಲ್ಲಂಘನೆಯಾಗಿಲ್ಲ ಎಂದು ಹೇಳಿತು.</p>.<p>ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಸದಾಶಿವಂ ಅವರು `ಭ್ರಷ್ಟಾಚಾರ ತಡೆ ಕಾಯ್ದೆ ಉಲ್ಲಂಘಿಸುವ ಯಾವುದೇ ಅಧಿಕಾರಿಗೆ ಭ್ರಷ್ಟಾಚಾರ ಕುರಿತಂತೆ ಪೊಲೀಸರಿಗೆ ಮಾಹಿತಿ ನೀಡುವುದರೊಂದಿಗೆ ಅವರೊಂದಿಗೆ ಸಹಕರಿಸಬೇಕೆಂಬ ಕರ್ತವ್ಯದ ವಿವೇಚನೆ ಇರಬೇಕು' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್): </strong>ರಾಜ್ಯ ವಿಧಾನಸಭಾಧ್ಯಕ್ಷ ಮತ್ತು ಉಪ ಸಭಾಧ್ಯಕ್ಷರನ್ನು ಹೊರತು ಪಡಿಸಿ ಬೇರೆ ಯಾರಿಗೂ ಭ್ರಷ್ಟಾಚಾರ ಆರೋಪ ಕುರಿತ ಲೋಕಾಯುಕ್ತ ತನಿಖೆಯಿಂದ ವಿನಾಯಿತಿ ಇಲ್ಲ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.</p>.<p>ಮುಖ್ಯನ್ಯಾಯಮೂರ್ತಿ ಪಿ.ಸದಾಶಿವಂ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ರಂಜನ್ ಗೊಗೋಯ್, ಶಿವ ಕೀರ್ತಿ ಸಿಂಗ್ ಅವರನ್ನು ಒಳಗೊಂಡ ತ್ರಿಸದಸ್ಯ ನ್ಯಾಯಪೀಠವು ಈ ಮಹತ್ವದ ತೀರ್ಪನ್ನು ನೀಡಿದ್ದು, 'ಪ್ರತಿಯೊಬ್ಬರು ಒಂದೇ ವರ್ಗಕ್ಕೆ ಸೇರಿದ್ದಾರೆ. ಹಾಗಾಗಿ ಸಾಮಾನ್ಯ ವ್ಯಕ್ತಿಗೆ ವಿಶೇಷ ಹಕ್ಕು ದೊರೆಯಲಾರದು' ಎಂದು ಹೇಳಿತು.<br /> <br /> 2007ರಲ್ಲಿ ಮಧ್ಯಪ್ರದೇಶದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ತನಿಖೆ ಕೈಗೆತ್ತಿಕೊಂಡ ಲೋಕಾಯುಕ್ತವು ಸರ್ಕಾರದ ಕಾರ್ಯದರ್ಶಿಗೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳೊಂದಿಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಲೋಕಾಯುಕ್ತದ ಈ ಕ್ರಮದಿಂದ ಹಕ್ಕು ಉಲ್ಲಂಘನೆಯಾಗಿದೆ ಎಂದ ರಾಜ್ಯ ಸರ್ಕಾರವು ಪ್ರತಿಯಾಗಿ ಲೋಕಾಯುಕ್ತಕ್ಕೆ ಷೋಕಾಸ್ ನೋಟಿಸ್ ಕಳುಹಿಸಿತ್ತು. ನಂತರ ಈ ಪ್ರಕರಣವು ಸುಪ್ರೀಂ ಕೋರ್ಟ್ ಮೇಟ್ಟಿಲೇರಿದೆ.<br /> <br /> ಪ್ರಕರಣದ ವಿಚಾರಣೆ ವೇಳೆ ಲೋಕಾಯುಕ್ತದ ಕ್ರಮವನ್ನು ಎತ್ತಿಹಿಡಿದ ಪೀಠವು ಅದರಿಂದ ಯಾವುದೇ ಹಕ್ಕು ಉಲ್ಲಂಘನೆಯಾಗಿಲ್ಲ ಎಂದು ಹೇಳಿತು.</p>.<p>ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಸದಾಶಿವಂ ಅವರು `ಭ್ರಷ್ಟಾಚಾರ ತಡೆ ಕಾಯ್ದೆ ಉಲ್ಲಂಘಿಸುವ ಯಾವುದೇ ಅಧಿಕಾರಿಗೆ ಭ್ರಷ್ಟಾಚಾರ ಕುರಿತಂತೆ ಪೊಲೀಸರಿಗೆ ಮಾಹಿತಿ ನೀಡುವುದರೊಂದಿಗೆ ಅವರೊಂದಿಗೆ ಸಹಕರಿಸಬೇಕೆಂಬ ಕರ್ತವ್ಯದ ವಿವೇಚನೆ ಇರಬೇಕು' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>