<p>ಬೆಂಗಳೂರು: `ನೂತನ ಮುಖ್ಯಮಂತ್ರಿಯು ಒಂದು ತಿಂಗಳಲ್ಲಿ ಲೋಕಾಯುಕ್ತರನ್ನು ನೇಮಕ ಮಾಡಬೇಕು. ಇಲ್ಲವಾದರೆ, ರಾಜ್ಯಾದ್ಯಾಂತ ಬಿಜೆಪಿ ಹಟಾವೋ ಹೋರಾಟವನ್ನು ನಡೆಸಬೇಕಾಗುತ್ತದೆ~ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹೇಳಿದರು. <br /> <br /> ಕರ್ನಾಟಕ ಜಾಗೃತಿ ಜನಾಂದೋಲನವು ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಸರ್ಕಾರ 12 ತಿಂಗಳಾದರೂ ಲೋಕಾಯುಕ್ತರನ್ನು ನೇಮಿಸುವಲ್ಲಿ ವಿಫಲವಾಗಿದೆ. ಕಳೆದ ಎರಡು ತಿಂಗಳಿನಿಂದ ಲೋಕಾಯುಕ್ತ ನೇಮಕಕ್ಕೆ ಒತ್ತಾಯಿಸಿ ಧರಣಿ, ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಆದರೆ, ಸರ್ಕಾರ ಇದ್ಯಾವುದನ್ನು ಪರಿಗಣಿಸದೆ ನಿರ್ಲಕ್ಷ್ಯಸುತ್ತಿದೆ~ ಎಂದರು.<br /> <br /> `ಈ ಒಂದು ತಿಂಗಳಿನಲ್ಲಿ ಲೋಕಾಯುಕ್ತದ ಜನರಲ್ಲಿ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಗುವುದು. ಸಾರ್ವಜನಿಕ ಸಭೆ, ಚರ್ಚೆಗಳನ್ನು ನಡೆಸಲಾಗುವುದು. ಇದಕ್ಕೂ ಸರ್ಕಾರ ಮಣಿಯದಿದ್ದರೆ, ರಾಜ್ಯಾದ್ಯಾಂತ ಹೋರಾಟವನ್ನು ತೀವ್ರಗೊಳಿಸಲಾಗುವುದು~ ಎಂದುಅವರು ಹೇಳಿದರು.<br /> <br /> ಗೋಷ್ಠಿಯಲ್ಲಿ ಜೆಡಿಯು ಪ್ರಧಾನ ಕಾರ್ಯದರ್ಶಿ ಲೋಕಪಾಲ್ ಜೈನ್, ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ನೂತನ ಮುಖ್ಯಮಂತ್ರಿಯು ಒಂದು ತಿಂಗಳಲ್ಲಿ ಲೋಕಾಯುಕ್ತರನ್ನು ನೇಮಕ ಮಾಡಬೇಕು. ಇಲ್ಲವಾದರೆ, ರಾಜ್ಯಾದ್ಯಾಂತ ಬಿಜೆಪಿ ಹಟಾವೋ ಹೋರಾಟವನ್ನು ನಡೆಸಬೇಕಾಗುತ್ತದೆ~ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹೇಳಿದರು. <br /> <br /> ಕರ್ನಾಟಕ ಜಾಗೃತಿ ಜನಾಂದೋಲನವು ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಸರ್ಕಾರ 12 ತಿಂಗಳಾದರೂ ಲೋಕಾಯುಕ್ತರನ್ನು ನೇಮಿಸುವಲ್ಲಿ ವಿಫಲವಾಗಿದೆ. ಕಳೆದ ಎರಡು ತಿಂಗಳಿನಿಂದ ಲೋಕಾಯುಕ್ತ ನೇಮಕಕ್ಕೆ ಒತ್ತಾಯಿಸಿ ಧರಣಿ, ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಆದರೆ, ಸರ್ಕಾರ ಇದ್ಯಾವುದನ್ನು ಪರಿಗಣಿಸದೆ ನಿರ್ಲಕ್ಷ್ಯಸುತ್ತಿದೆ~ ಎಂದರು.<br /> <br /> `ಈ ಒಂದು ತಿಂಗಳಿನಲ್ಲಿ ಲೋಕಾಯುಕ್ತದ ಜನರಲ್ಲಿ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಗುವುದು. ಸಾರ್ವಜನಿಕ ಸಭೆ, ಚರ್ಚೆಗಳನ್ನು ನಡೆಸಲಾಗುವುದು. ಇದಕ್ಕೂ ಸರ್ಕಾರ ಮಣಿಯದಿದ್ದರೆ, ರಾಜ್ಯಾದ್ಯಾಂತ ಹೋರಾಟವನ್ನು ತೀವ್ರಗೊಳಿಸಲಾಗುವುದು~ ಎಂದುಅವರು ಹೇಳಿದರು.<br /> <br /> ಗೋಷ್ಠಿಯಲ್ಲಿ ಜೆಡಿಯು ಪ್ರಧಾನ ಕಾರ್ಯದರ್ಶಿ ಲೋಕಪಾಲ್ ಜೈನ್, ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>