<p><strong>ಅಹಮದಾಬಾದ್ (ಪಿಟಿಐ): </strong>ರಾಜ್ಯಪಾಲರು ಲೋಕಾಯುಕ್ತರನ್ನು ನೇಮಿಸಿದ್ದು ಸರಿಯಾದ ಕ್ರಮ ಎಂದು ಗುಜರಾತ್ ಹೈಕೋರ್ಟ್ ಬುಧವಾರ ಐತಿಹಾಸಿಕ ತೀರ್ಪು ನೀಡಿದ್ದು, ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದೆ. <br /> <br /> ರಾಜ್ಯಪಾಲರು ಸರ್ಕಾರದೊಂದಿಗೆ ಸಮಾಲೋಚಿಸದೆ ಏಕಪಕ್ಷೀಯವಾಗಿ ಲೋಕಾಯುಕ್ತರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ರಾಜ್ಯಸರ್ಕಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಇಬ್ಬರು ನ್ಯಾಯಮೂರ್ತಿಗಳ ನ್ಯಾಯಪೀಠವು ವಿಭಿನ್ನ ತೀರ್ಪು ನೀಡಿತ್ತು. ಇದರಿಂದ ಪ್ರಕರಣದ ವಿಚಾರಣೆಯು ನ್ಯಾಯಮೂರ್ತಿ ವಿ.ಎಂ. ಸಾಯ್ ಅವರ ಹೆಗಲೇರಿತ್ತು.<br /> <br /> ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಎಂ. ಸಾಯ್ ಅವರು ಸರ್ಕಾರವನ್ನು ಸಂಪರ್ಕಿಸದೆ ರಾಜ್ಯಪಾಲರು ಲೋಕಾಯುಕ್ತರನ್ನು ನೇಮಕ ಮಾಡಿದ್ದು ಸರಿ ಎಂದು ತೀರ್ಪು ನೀಡಿದರು. ಇದರಿಂದ ನರೇಂದ್ರ ಮೋದಿ ಸರ್ಕಾರಕ್ಕೆ ಹಿನ್ನಡೆಯಾಗಿದೆ.<br /> <br /> ಈ ತೀರ್ಪನ್ನು ಪರಿಶೀಲಿಸಿ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಆದೇಶದ ವಿರುದ್ಧ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವುದಾಗಿ ಸರ್ಕಾರ ತಿಳಿಸಿದೆ. <br /> <br /> ರಾಜ್ಯಪಾಲೆ ಕಮಲಾ ಬೇನಿವಾಲ್ ಅವರು ಕಳೆದ 7 ವರ್ಷಗಳಿಂದ ಖಾಲಿ ಉಳಿದಿದ್ದ ಲೋಕಾಯುಕ್ತ ಹುದ್ದೆಗೆ ಕಳೆದ ಆಗಸ್ಟ್ನಲ್ಲಿ ವಿರೋಧಪಕ್ಷಗಳೊಂದಿಗೆ ಚರ್ಚಿಸಿ ನಿವೃತ್ತ ನ್ಯಾಯಮೂರ್ತಿ ಆರ್.ಎ. ಮೆಹ್ತಾ ಅವರನ್ನು ನೇಮಿಸಿದ್ದರು. ಆದರೆ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದೊಂದಿಗೆ ಚರ್ಚಿಸಿರಲಿಲ್ಲ. ಇದು ಮೋದಿ ಸರ್ಕಾರವನ್ನು ಕೆರಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್ (ಪಿಟಿಐ): </strong>ರಾಜ್ಯಪಾಲರು ಲೋಕಾಯುಕ್ತರನ್ನು ನೇಮಿಸಿದ್ದು ಸರಿಯಾದ ಕ್ರಮ ಎಂದು ಗುಜರಾತ್ ಹೈಕೋರ್ಟ್ ಬುಧವಾರ ಐತಿಹಾಸಿಕ ತೀರ್ಪು ನೀಡಿದ್ದು, ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದೆ. <br /> <br /> ರಾಜ್ಯಪಾಲರು ಸರ್ಕಾರದೊಂದಿಗೆ ಸಮಾಲೋಚಿಸದೆ ಏಕಪಕ್ಷೀಯವಾಗಿ ಲೋಕಾಯುಕ್ತರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ರಾಜ್ಯಸರ್ಕಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಇಬ್ಬರು ನ್ಯಾಯಮೂರ್ತಿಗಳ ನ್ಯಾಯಪೀಠವು ವಿಭಿನ್ನ ತೀರ್ಪು ನೀಡಿತ್ತು. ಇದರಿಂದ ಪ್ರಕರಣದ ವಿಚಾರಣೆಯು ನ್ಯಾಯಮೂರ್ತಿ ವಿ.ಎಂ. ಸಾಯ್ ಅವರ ಹೆಗಲೇರಿತ್ತು.<br /> <br /> ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಎಂ. ಸಾಯ್ ಅವರು ಸರ್ಕಾರವನ್ನು ಸಂಪರ್ಕಿಸದೆ ರಾಜ್ಯಪಾಲರು ಲೋಕಾಯುಕ್ತರನ್ನು ನೇಮಕ ಮಾಡಿದ್ದು ಸರಿ ಎಂದು ತೀರ್ಪು ನೀಡಿದರು. ಇದರಿಂದ ನರೇಂದ್ರ ಮೋದಿ ಸರ್ಕಾರಕ್ಕೆ ಹಿನ್ನಡೆಯಾಗಿದೆ.<br /> <br /> ಈ ತೀರ್ಪನ್ನು ಪರಿಶೀಲಿಸಿ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಆದೇಶದ ವಿರುದ್ಧ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವುದಾಗಿ ಸರ್ಕಾರ ತಿಳಿಸಿದೆ. <br /> <br /> ರಾಜ್ಯಪಾಲೆ ಕಮಲಾ ಬೇನಿವಾಲ್ ಅವರು ಕಳೆದ 7 ವರ್ಷಗಳಿಂದ ಖಾಲಿ ಉಳಿದಿದ್ದ ಲೋಕಾಯುಕ್ತ ಹುದ್ದೆಗೆ ಕಳೆದ ಆಗಸ್ಟ್ನಲ್ಲಿ ವಿರೋಧಪಕ್ಷಗಳೊಂದಿಗೆ ಚರ್ಚಿಸಿ ನಿವೃತ್ತ ನ್ಯಾಯಮೂರ್ತಿ ಆರ್.ಎ. ಮೆಹ್ತಾ ಅವರನ್ನು ನೇಮಿಸಿದ್ದರು. ಆದರೆ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದೊಂದಿಗೆ ಚರ್ಚಿಸಿರಲಿಲ್ಲ. ಇದು ಮೋದಿ ಸರ್ಕಾರವನ್ನು ಕೆರಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>