<p><strong>ಬಳ್ಳಾರಿ:</strong> ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಇದೇ 26ರಿಂದ 29ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು ಸ್ವೀಕರಿಸಲಿದ್ದಾರೆ.<br /> <br /> ಜೂನ್ 26ರಂದು ಹೊಸಪೇಟೆ, 27ರಂದು ಸಿರುಗುಪ್ಪ ಹಾಗೂ ಹೂವಿನಹಡಗಲಿ, 28ರಂದು ಸಂಡೂರು ಹಾಗೂ ಕೂಡ್ಲಿಗಿ, 29ರಂದು ಬಳ್ಳಾರಿ ಹಾಗೂ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಸಾರ್ವಜನಿಕ ಕುಂದುಕೊರತೆ ಇತ್ಯರ್ಥಪಡಿಸಲಿದ್ದಾರೆ.<br /> <br /> ಆಯಾ ದಿನಾಂಕಗಳಂದು ಸಂಬಂಧಿಸಿದ ತಾಲ್ಲೂಕಿನ ಪ್ರವಾಸಿ ಮಂದಿರಗಳಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಅಹವಾಲು ಸ್ವೀಕರಿಸಿ, ಸ್ಥಳದಲ್ಲೇ ಪರಿಹರಿಸಲಿದ್ದಾರೆ. <br /> <br /> ಬಳ್ಳಾರಿಯ ಲೋಕಾಯುಕ್ತ ಡಿವೈಎಸ್ಪಿ ಜೆ. ರಮೇಶ್ ನೇತೃತ್ವದಲ್ಲಿ ಸಿರುಗುಪ್ಪ, ಸಂಡೂರು, ಬಳ್ಳಾರಿ ತಾಲ್ಲೂಕು ಹಾಗೂ ಹೊಸಪೇಟೆಯ ಲೋಕಾಯುಕ್ತ ಉಪ ಅಧೀಕ್ಷಕ ಎಂ. ಪಾಷಾ ನೇತೃತ್ವದಲ್ಲಿ ಹೊಸಪೇಟೆ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ತಾಲ್ಲೂಕಿನ ಕುಂದುಕೊರತೆ ಅರ್ಜಿ ಸ್ವೀಕರಿಸಲಾಗುವುದು ಎಂದಿದ್ದಾರೆ.<br /> <br /> ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಜಿ.ಎಸ್. ಹೆಬ್ಬಾಳ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಇದೇ 26ರಿಂದ 29ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು ಸ್ವೀಕರಿಸಲಿದ್ದಾರೆ.<br /> <br /> ಜೂನ್ 26ರಂದು ಹೊಸಪೇಟೆ, 27ರಂದು ಸಿರುಗುಪ್ಪ ಹಾಗೂ ಹೂವಿನಹಡಗಲಿ, 28ರಂದು ಸಂಡೂರು ಹಾಗೂ ಕೂಡ್ಲಿಗಿ, 29ರಂದು ಬಳ್ಳಾರಿ ಹಾಗೂ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಸಾರ್ವಜನಿಕ ಕುಂದುಕೊರತೆ ಇತ್ಯರ್ಥಪಡಿಸಲಿದ್ದಾರೆ.<br /> <br /> ಆಯಾ ದಿನಾಂಕಗಳಂದು ಸಂಬಂಧಿಸಿದ ತಾಲ್ಲೂಕಿನ ಪ್ರವಾಸಿ ಮಂದಿರಗಳಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಅಹವಾಲು ಸ್ವೀಕರಿಸಿ, ಸ್ಥಳದಲ್ಲೇ ಪರಿಹರಿಸಲಿದ್ದಾರೆ. <br /> <br /> ಬಳ್ಳಾರಿಯ ಲೋಕಾಯುಕ್ತ ಡಿವೈಎಸ್ಪಿ ಜೆ. ರಮೇಶ್ ನೇತೃತ್ವದಲ್ಲಿ ಸಿರುಗುಪ್ಪ, ಸಂಡೂರು, ಬಳ್ಳಾರಿ ತಾಲ್ಲೂಕು ಹಾಗೂ ಹೊಸಪೇಟೆಯ ಲೋಕಾಯುಕ್ತ ಉಪ ಅಧೀಕ್ಷಕ ಎಂ. ಪಾಷಾ ನೇತೃತ್ವದಲ್ಲಿ ಹೊಸಪೇಟೆ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ತಾಲ್ಲೂಕಿನ ಕುಂದುಕೊರತೆ ಅರ್ಜಿ ಸ್ವೀಕರಿಸಲಾಗುವುದು ಎಂದಿದ್ದಾರೆ.<br /> <br /> ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಜಿ.ಎಸ್. ಹೆಬ್ಬಾಳ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>