<p><strong>ಬೆಂಗಳೂರು: </strong>ಅಪಾರ್ಟ್ಮೆಂಟ್ ಜಾಗದ ಸಮೀಕ್ಷೆ ನಡೆಸಲು ₨ 22 ಲಕ್ಷ ಲಂಚ ಕೇಳಿದ ಸರ್ವೇಯರ್ ವಾಸು ಎಂಬುವವರು ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅನ್ವಯ ಇವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.<br /> <br /> ನಗರದ ಬಿ.ಕೆ. ರಾಜೇಂದ್ರನ್ ಎಂಬುವವರು ವಿಠೋಲಾ ಎಂಬ ಹೆಸರಿನಲ್ಲಿ ಅಪಾರ್ಟ್ಮೆಂಟ್ ನಿರ್ಮಿಸಿದ್ದರು. ಇದರ ಸುತ್ತಲಿನ ಆವರಣ ಗೋಡೆಯನ್ನು ಕಂದಾಯ ಇಲಾಖೆ ಅಧಿಕಾರಿಗಳು ಒಡೆದುಹಾಕಿದ್ದರು. ಅಪಾರ್ಟ್ಮೆಂಟ್ ಜಾಗದ ಸಮೀಕ್ಷೆ ಮಾಡಿಕೊಡಲು ಸರ್ವೇಯರ್ ವಾಸು ಅವರು ಲಂಚಕ್ಕೆ ಬೇಡಿಕೆ ಇಟ್ಟರು.<br /> <br /> ಲಂಚ ಕೊಡಲು ಮನಸ್ಸು ಬಾರದ ಕಾರಣ ರಾಜೇಂದ್ರನ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ವಾಸು ಅವರ ಬಂಧನಕ್ಕೆ ಲೋಕಾಯುಕ್ತ ಪೊಲೀಸರು ಬೀಸಿದ ಬಲೆ ಯಶಸ್ವಿಯಾಗಿದ್ದು, ಅವರು ಮಂಗಳವಾರ ₨ 5 ಲಕ್ಷ ಮುಂಗಡ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ವಿಶೇಷ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದ ತನಿಖೆ ಜಾರಿಯಲ್ಲಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಪಾರ್ಟ್ಮೆಂಟ್ ಜಾಗದ ಸಮೀಕ್ಷೆ ನಡೆಸಲು ₨ 22 ಲಕ್ಷ ಲಂಚ ಕೇಳಿದ ಸರ್ವೇಯರ್ ವಾಸು ಎಂಬುವವರು ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅನ್ವಯ ಇವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.<br /> <br /> ನಗರದ ಬಿ.ಕೆ. ರಾಜೇಂದ್ರನ್ ಎಂಬುವವರು ವಿಠೋಲಾ ಎಂಬ ಹೆಸರಿನಲ್ಲಿ ಅಪಾರ್ಟ್ಮೆಂಟ್ ನಿರ್ಮಿಸಿದ್ದರು. ಇದರ ಸುತ್ತಲಿನ ಆವರಣ ಗೋಡೆಯನ್ನು ಕಂದಾಯ ಇಲಾಖೆ ಅಧಿಕಾರಿಗಳು ಒಡೆದುಹಾಕಿದ್ದರು. ಅಪಾರ್ಟ್ಮೆಂಟ್ ಜಾಗದ ಸಮೀಕ್ಷೆ ಮಾಡಿಕೊಡಲು ಸರ್ವೇಯರ್ ವಾಸು ಅವರು ಲಂಚಕ್ಕೆ ಬೇಡಿಕೆ ಇಟ್ಟರು.<br /> <br /> ಲಂಚ ಕೊಡಲು ಮನಸ್ಸು ಬಾರದ ಕಾರಣ ರಾಜೇಂದ್ರನ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ವಾಸು ಅವರ ಬಂಧನಕ್ಕೆ ಲೋಕಾಯುಕ್ತ ಪೊಲೀಸರು ಬೀಸಿದ ಬಲೆ ಯಶಸ್ವಿಯಾಗಿದ್ದು, ಅವರು ಮಂಗಳವಾರ ₨ 5 ಲಕ್ಷ ಮುಂಗಡ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ವಿಶೇಷ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದ ತನಿಖೆ ಜಾರಿಯಲ್ಲಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>