<p><strong>ಚಿತ್ರದುರ್ಗ: </strong>ಹಿರಿಯೂರು ತಾಲ್ಲೂಕು ಮಸ್ಕಲ್ ಗ್ರಾಮದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗಂಗಾಧರ ನಾಯ್ಕ ಗುರುವಾರ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.ಹಿರಿಯೂರು ಪಟ್ಟಣದ ಪ್ರವಾಸಿ ಮಂದಿರ ವೃತ್ತದ ಹತ್ತಿರ ರೂ 4 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದಾಗ ದಾಳಿ ನಡೆಸಲಾಯಿತು ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎ.ಎಂ. ನದಾಫ್ ತಿಳಿಸಿದ್ದಾರೆ.<br /> <br /> ಮಸ್ಕಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಭೀಮನಬಂಡೆ ಗ್ರಾಮದ ಬಿ. ಶಿವಮೂರ್ತಿ ಅವರು ತಮ್ಮ ಜಮೀನಿನಲ್ಲಿ ನೀರಾವರಿ ಸೌಲಭ್ಯಕ್ಕಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ ನೀರಿನ ತೊಟ್ಟಿಯನ್ನು ನಿರ್ಮಿಸಿದ್ದರು.<br /> <br /> ತೊಟ್ಟಿಯ ಸಾಮಗ್ರಿಗಳಿಗಾಗಿ ರೂ 14,083 ಬಿಲ್ ಅನ್ನು ಗ್ರಾಮ ಪಂಚಾಯ್ತಿಯಿಂದ ನೀಡಬೇಕಾಗಿತ್ತು. ಈ ಹಣ ನೀಡಲು ರೂ 4 ಸಾವಿರ ಲಂಚ ಕೇಳ್ದ್ದಿದರು. ಈ ಬಗ್ಗೆ ಲೋಕಾಯುಕ್ತ ಠಾಣೆಯಲ್ಲಿ ದೂರು ಸಲ್ಲಿಸಲಾಗಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಹಿರಿಯೂರು ತಾಲ್ಲೂಕು ಮಸ್ಕಲ್ ಗ್ರಾಮದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗಂಗಾಧರ ನಾಯ್ಕ ಗುರುವಾರ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.ಹಿರಿಯೂರು ಪಟ್ಟಣದ ಪ್ರವಾಸಿ ಮಂದಿರ ವೃತ್ತದ ಹತ್ತಿರ ರೂ 4 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದಾಗ ದಾಳಿ ನಡೆಸಲಾಯಿತು ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎ.ಎಂ. ನದಾಫ್ ತಿಳಿಸಿದ್ದಾರೆ.<br /> <br /> ಮಸ್ಕಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಭೀಮನಬಂಡೆ ಗ್ರಾಮದ ಬಿ. ಶಿವಮೂರ್ತಿ ಅವರು ತಮ್ಮ ಜಮೀನಿನಲ್ಲಿ ನೀರಾವರಿ ಸೌಲಭ್ಯಕ್ಕಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ ನೀರಿನ ತೊಟ್ಟಿಯನ್ನು ನಿರ್ಮಿಸಿದ್ದರು.<br /> <br /> ತೊಟ್ಟಿಯ ಸಾಮಗ್ರಿಗಳಿಗಾಗಿ ರೂ 14,083 ಬಿಲ್ ಅನ್ನು ಗ್ರಾಮ ಪಂಚಾಯ್ತಿಯಿಂದ ನೀಡಬೇಕಾಗಿತ್ತು. ಈ ಹಣ ನೀಡಲು ರೂ 4 ಸಾವಿರ ಲಂಚ ಕೇಳ್ದ್ದಿದರು. ಈ ಬಗ್ಗೆ ಲೋಕಾಯುಕ್ತ ಠಾಣೆಯಲ್ಲಿ ದೂರು ಸಲ್ಲಿಸಲಾಗಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>