<p>ಚಿಕ್ಕಬಳ್ಳಾಪುರ: ಅಕ್ರಮ ಗಣಿಗಾರಿಕೆ ಸೇರಿದಂತೆ ವಿವಿಧ ಹಗರಣಗಳ ಕುರಿತು ಮಾಹಿತಿಯನ್ನು ಹೊಂದಿರುವ ಲೋಕಾಯುಕ್ತ ವರದಿಯನ್ನು ಅನುಷ್ಠಾನಕ್ಕೆ ತರಬೇಕು, ಅದರಲ್ಲಿನ ಶಿಫಾರಸುಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ಸಿಪಿಎಂ ಮುಖಂಡರು ಮತ್ತು ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.<br /> <br /> ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, `ವರದಿಯಲ್ಲಿನ ಅಂಶಗಳನ್ನು ಜಾರಿ ತರುವುದರ ಬದಲು ಸರ್ಕಾರ ವಿನಾಕಾರಣ ಕಾಲಹರಣ ಮಾಡುತ್ತಿದೆ. ವರದಿಯಲ್ಲಿ ಸೂಚಿಸಲಾಗಿರುವ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಹಕರಿಸುವುದರ ಬದಲು ನಿರ್ಲಕ್ಷ್ಯ ತೋರಲಾಗುತ್ತಿದೆ~ ಎಂದು ಆರೋಪಿಸಿದರು.<br /> <br /> ಸಿಪಿಎಂ ಜಿಲ್ಲಾ ಘಟಕದ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ ಮಾತನಾಡಿ, `ಎನ್.ಸಂತೋಷ್ ಹೆಗ್ಡೆಯವರು ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ ವರದಿಯನ್ನು ಸಿದ್ಧಪಡಿಸಿದ್ದಾರೆ. ಅಕ್ರಮ ಗಣಿಗಾರಿಕೆ, ರಾಜಕಾರಣಿಗಳು ಮತ್ತು ಅಧಿಕಾರಿಗಳು ಶಾಮೀಲಾಗಿರುವುದು, ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವುದು ಸೇರಿದಂತೆ ಹಲವು ವಿಷಯಗಳನ್ನು ವರದಿಯು ಒಳಗೊಂಡಿದೆ. ವರದಿಯನ್ನು ಗಂಭೀರವಾಗಿ ಪರಿಗಣಿಸದ ಸರ್ಕಾರ ಅದರತ್ತ ನಿರಾಸಕ್ತಿ ತೋರುತ್ತಿದೆ~ ಎಂದರು.<br /> <br /> `ಅಕ್ರಮ ಗಣಿಗಾರಿಕೆ ಸೇರಿದಂತೆ ಇತರ ಹಗರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರನ್ನು ಬೆದರಿಸುತ್ತಿದ್ದಾರೆ. ಲೋಕಾಯುಕ್ತ ವರದಿಯನ್ನು ಒಪ್ಪಿದ್ದಲ್ಲಿ, ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರಲ್ಲಿ ಭೀತಿ ಮೂಡಿಸುತ್ತಿದ್ದಾರೆ. ಸರ್ಕಾರವು ಯಾವುದೇ ಕಾರಣಕ್ಕೂ ವರದಿಯನ್ನು ಒಪ್ಪದಂತೆ ಸಂಚು ರೂಪಿಸಲಾಗುತ್ತಿದೆ~ ಎಂದು ಹೇಳಿದರು.<br /> <br /> `ಸಚಿವರಾಗಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಈಗಾಗಲೇ ಜೈಲು ಸೇರಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಎಚ್. ಡಿ. ಕುಮಾರಸ್ವಾಮಿಯವರು ಜೈಲುಪಾಲಾಗುವ ಆತಂಕದಲ್ಲಿದ್ದಾರೆ. ಹಗರಣದಲ್ಲಿ ಭಾಗಿಯಾಗಿರುವವರು ಸಹ ಇದೇ ರೀತಿಯ ಆತಂಕದಲ್ಲಿದ್ದಾರೆ. ಈ ಎಲ್ಲದರ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು~ ಎಂದರು.<br /> <br /> `ಲೋಕಾಯುಕ್ತ ವರದಿಯನ್ನು ಸರ್ಕಾರ ಸ್ವೀಕರಿಸುವವರೆಗೆ ಸಿಪಿಎಂ ತನ್ನ ಹೋರಾಟ ಮುಂದುವರೆಸಲಿದೆ. ಎರಡನೇ ಹಂತದ ಹೋರಾಟದ ರೂಪದಲ್ಲಿ ಬಳ್ಳಾರಿಯಲ್ಲಿ ಅಕ್ಟೋಬರ್ 21ರಂದು ಭಾರಿ ಪ್ರತಿಭಟನೆ ನಡೆಸಲಾಗುವುದು. ಅಕ್ರಮ ಗಣಿಗಾರಿಕೆ ಸೇರಿದಂತೆ ಇತರ ಹಗರಣಗಳಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರ ಲಾಗುವುದು~ ಎಂದು ಅವರು ತಿಳಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಬಿ.ಸಾವಿತ್ರಮ್ಮ, ಸಿಪಿಎಂ ಮುಖಂಡ ರಾದ ಎಂ.ಪಿ.ಮುನಿ ವೆಂಕಟಪ್ಪ, ಚನ್ನರಾಯಪ್ಪ, ಮಂಜುನಾಥ್ ರೆಡ್ಡಿ, ಗೋಪಿನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಅಕ್ರಮ ಗಣಿಗಾರಿಕೆ ಸೇರಿದಂತೆ ವಿವಿಧ ಹಗರಣಗಳ ಕುರಿತು ಮಾಹಿತಿಯನ್ನು ಹೊಂದಿರುವ ಲೋಕಾಯುಕ್ತ ವರದಿಯನ್ನು ಅನುಷ್ಠಾನಕ್ಕೆ ತರಬೇಕು, ಅದರಲ್ಲಿನ ಶಿಫಾರಸುಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ಸಿಪಿಎಂ ಮುಖಂಡರು ಮತ್ತು ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.<br /> <br /> ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, `ವರದಿಯಲ್ಲಿನ ಅಂಶಗಳನ್ನು ಜಾರಿ ತರುವುದರ ಬದಲು ಸರ್ಕಾರ ವಿನಾಕಾರಣ ಕಾಲಹರಣ ಮಾಡುತ್ತಿದೆ. ವರದಿಯಲ್ಲಿ ಸೂಚಿಸಲಾಗಿರುವ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಹಕರಿಸುವುದರ ಬದಲು ನಿರ್ಲಕ್ಷ್ಯ ತೋರಲಾಗುತ್ತಿದೆ~ ಎಂದು ಆರೋಪಿಸಿದರು.<br /> <br /> ಸಿಪಿಎಂ ಜಿಲ್ಲಾ ಘಟಕದ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ ಮಾತನಾಡಿ, `ಎನ್.ಸಂತೋಷ್ ಹೆಗ್ಡೆಯವರು ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ ವರದಿಯನ್ನು ಸಿದ್ಧಪಡಿಸಿದ್ದಾರೆ. ಅಕ್ರಮ ಗಣಿಗಾರಿಕೆ, ರಾಜಕಾರಣಿಗಳು ಮತ್ತು ಅಧಿಕಾರಿಗಳು ಶಾಮೀಲಾಗಿರುವುದು, ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವುದು ಸೇರಿದಂತೆ ಹಲವು ವಿಷಯಗಳನ್ನು ವರದಿಯು ಒಳಗೊಂಡಿದೆ. ವರದಿಯನ್ನು ಗಂಭೀರವಾಗಿ ಪರಿಗಣಿಸದ ಸರ್ಕಾರ ಅದರತ್ತ ನಿರಾಸಕ್ತಿ ತೋರುತ್ತಿದೆ~ ಎಂದರು.<br /> <br /> `ಅಕ್ರಮ ಗಣಿಗಾರಿಕೆ ಸೇರಿದಂತೆ ಇತರ ಹಗರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರನ್ನು ಬೆದರಿಸುತ್ತಿದ್ದಾರೆ. ಲೋಕಾಯುಕ್ತ ವರದಿಯನ್ನು ಒಪ್ಪಿದ್ದಲ್ಲಿ, ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರಲ್ಲಿ ಭೀತಿ ಮೂಡಿಸುತ್ತಿದ್ದಾರೆ. ಸರ್ಕಾರವು ಯಾವುದೇ ಕಾರಣಕ್ಕೂ ವರದಿಯನ್ನು ಒಪ್ಪದಂತೆ ಸಂಚು ರೂಪಿಸಲಾಗುತ್ತಿದೆ~ ಎಂದು ಹೇಳಿದರು.<br /> <br /> `ಸಚಿವರಾಗಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಈಗಾಗಲೇ ಜೈಲು ಸೇರಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಎಚ್. ಡಿ. ಕುಮಾರಸ್ವಾಮಿಯವರು ಜೈಲುಪಾಲಾಗುವ ಆತಂಕದಲ್ಲಿದ್ದಾರೆ. ಹಗರಣದಲ್ಲಿ ಭಾಗಿಯಾಗಿರುವವರು ಸಹ ಇದೇ ರೀತಿಯ ಆತಂಕದಲ್ಲಿದ್ದಾರೆ. ಈ ಎಲ್ಲದರ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು~ ಎಂದರು.<br /> <br /> `ಲೋಕಾಯುಕ್ತ ವರದಿಯನ್ನು ಸರ್ಕಾರ ಸ್ವೀಕರಿಸುವವರೆಗೆ ಸಿಪಿಎಂ ತನ್ನ ಹೋರಾಟ ಮುಂದುವರೆಸಲಿದೆ. ಎರಡನೇ ಹಂತದ ಹೋರಾಟದ ರೂಪದಲ್ಲಿ ಬಳ್ಳಾರಿಯಲ್ಲಿ ಅಕ್ಟೋಬರ್ 21ರಂದು ಭಾರಿ ಪ್ರತಿಭಟನೆ ನಡೆಸಲಾಗುವುದು. ಅಕ್ರಮ ಗಣಿಗಾರಿಕೆ ಸೇರಿದಂತೆ ಇತರ ಹಗರಣಗಳಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರ ಲಾಗುವುದು~ ಎಂದು ಅವರು ತಿಳಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಬಿ.ಸಾವಿತ್ರಮ್ಮ, ಸಿಪಿಎಂ ಮುಖಂಡ ರಾದ ಎಂ.ಪಿ.ಮುನಿ ವೆಂಕಟಪ್ಪ, ಚನ್ನರಾಯಪ್ಪ, ಮಂಜುನಾಥ್ ರೆಡ್ಡಿ, ಗೋಪಿನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>