<p><strong>ಬಾಗಲಕೋಟೆ: </strong>ಕಾಂಗ್ರೆಸ್ ಪಕ್ಷವು ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿಯ ಜಾರಿಗೆ ಆಗ್ರಹಿಸಿ ಕೊಪ್ಪಳ ವಿಧಾನಸಭಾ ಉಪ ಚುನಾವಣೆಯ ಬಳಿಕ ಕಾನೂನು ಮತ್ತು ರಾಜಕೀಯ ಹೋರಾಟ ನಡೆಸಲಿದೆ ಎಂದು ಮಾಜಿ ಸಚಿವ ಎಚ್. ಕೆ. ಪಾಟೀಲತಿಳಿಸಿದರು.<br /> <br /> ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಯನ್ನು ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ಮಹತ್ವದ ವರದಿಯನ್ನು ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಸದಾನಂದಗೌಡ ಅವರು ಮೌನ ವಹಿಸುವ ಮೂಲಕ ಪಾರಾಗಲು ಪ್ರಯತ್ನಿಸುವುದು ಸಲ್ಲದು ಎಂದರು. <br /> <br /> <strong>ನೈತಿಕ ಹಕ್ಕಿಲ್ಲ: </strong>ಭ್ರಷ್ಟಾಚಾರದ ವಿರುದ್ಧ ರಥಯಾತ್ರೆ ನಡೆಸಲು ಬಿಜೆಪಿ ಮುಖಂಡ ಎಲ್.ಕೆ. ಅಡ್ವಾಣಿ ಅವರಿಗೆ ನೈತಿಕ ಹಕ್ಕಿಲ್ಲ. ಅಂತರರಾಷ್ಟ್ರೀಯ ಅಧ್ಯಯನ ಸಂಸ್ಥೆಯೊಂದರ ವರದಿ ಪ್ರಕಾರ ಕರ್ನಾಟಕ ಭ್ರಷ್ಟಾಚಾರದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಗುಜರಾತ್ ಎರಡನೇ ಸ್ಥಾನದಲ್ಲಿದೆ ಎಂದರು.<br /> <br /> <strong>ಅವಕಾಶ ನೀಡುವುದಿಲ್ಲ:</strong> ಭೂ ಬ್ಯಾಂಕ್ ಹೆಸರಲ್ಲಿ ರಾಜ್ಯದ ರೈತರ ಫಲವತ್ತಾದ 2 ಲಕ್ಷಕ್ಕೂ ಅಧಿಕ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾರೆಂದರೆ ಅವರಿಗೆ ಮನಸೋ ಇಚ್ಛೆ ಬಳಸಲು ಕಾಂಗ್ರೆಸ್ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಕಾಂಗ್ರೆಸ್ ಪಕ್ಷವು ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿಯ ಜಾರಿಗೆ ಆಗ್ರಹಿಸಿ ಕೊಪ್ಪಳ ವಿಧಾನಸಭಾ ಉಪ ಚುನಾವಣೆಯ ಬಳಿಕ ಕಾನೂನು ಮತ್ತು ರಾಜಕೀಯ ಹೋರಾಟ ನಡೆಸಲಿದೆ ಎಂದು ಮಾಜಿ ಸಚಿವ ಎಚ್. ಕೆ. ಪಾಟೀಲತಿಳಿಸಿದರು.<br /> <br /> ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಯನ್ನು ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ಮಹತ್ವದ ವರದಿಯನ್ನು ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಸದಾನಂದಗೌಡ ಅವರು ಮೌನ ವಹಿಸುವ ಮೂಲಕ ಪಾರಾಗಲು ಪ್ರಯತ್ನಿಸುವುದು ಸಲ್ಲದು ಎಂದರು. <br /> <br /> <strong>ನೈತಿಕ ಹಕ್ಕಿಲ್ಲ: </strong>ಭ್ರಷ್ಟಾಚಾರದ ವಿರುದ್ಧ ರಥಯಾತ್ರೆ ನಡೆಸಲು ಬಿಜೆಪಿ ಮುಖಂಡ ಎಲ್.ಕೆ. ಅಡ್ವಾಣಿ ಅವರಿಗೆ ನೈತಿಕ ಹಕ್ಕಿಲ್ಲ. ಅಂತರರಾಷ್ಟ್ರೀಯ ಅಧ್ಯಯನ ಸಂಸ್ಥೆಯೊಂದರ ವರದಿ ಪ್ರಕಾರ ಕರ್ನಾಟಕ ಭ್ರಷ್ಟಾಚಾರದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಗುಜರಾತ್ ಎರಡನೇ ಸ್ಥಾನದಲ್ಲಿದೆ ಎಂದರು.<br /> <br /> <strong>ಅವಕಾಶ ನೀಡುವುದಿಲ್ಲ:</strong> ಭೂ ಬ್ಯಾಂಕ್ ಹೆಸರಲ್ಲಿ ರಾಜ್ಯದ ರೈತರ ಫಲವತ್ತಾದ 2 ಲಕ್ಷಕ್ಕೂ ಅಧಿಕ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾರೆಂದರೆ ಅವರಿಗೆ ಮನಸೋ ಇಚ್ಛೆ ಬಳಸಲು ಕಾಂಗ್ರೆಸ್ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>