<p><strong>ಬೀದರ್:</strong> ವಕೀಲರೊಬ್ಬರನ್ನು ಸ್ನೇಹಿತರೇ ಕೊಲೆ ಮಾಡಿದ್ದಾರೆ ಎನ್ನಲಾಗಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ನಗರದ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಲ್ಲಾಲಿಂಗ ಕಾಲೋನಿಯ ಸಂಗಮೇಶ್ವರ ಮಸ್ಕಲೆ (32) ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟವರು.<br /> <br /> `ಮದುವೆ ನಿಮಿತ್ತ ಸಂಗಮೇಶ್ವರ ಸ್ನೇಹಿತರೊಂದಿಗೆ ಶುಕ್ರವಾರ ತಾಲ್ಲೂಕಿನ ದದ್ದಾಪುರ ಗ್ರಾಮಕ್ಕೆ ತೆರಳಿದ್ದರು. ರಾತ್ರಿ ಏಕಾಏಕಿ ಅವರ ಜೊತೆಗಿದ್ದ ಸ್ನೇಹಿತರು ಕರೆ ಮಾಡಿ ಸಂಗಮೇಶ್ವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಪ್ರಯಾವಿ ಆಸ್ಪತ್ರೆಗೆ ಬರುವಂತೆ ತಿಳಿಸಿದ್ದರು. ಆಸ್ಪತ್ರೆಗೆ ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದರು~ ಎಂದು ಮೃತರ ಸಹೋದರ ವಿಜಯಕುಮಾರ ಮಸ್ಕಲೆ ದೂರಿನಲ್ಲಿ ವಿವರಿಸಿದ್ದಾರೆ. <br /> <br /> ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶನಿವಾರ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಮೃತರ ಸಂಬಂಧಿಕರ ಅಕ್ರಂದನ ಕರುಳು ಹಿಚುಕುವಂತಿತ್ತು. ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಗಂಗಾಧರ ಬಿ.ಎಂ., ನ್ಯೂಟೌನ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಪಿಲ್ದೇವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ವಕೀಲರೊಬ್ಬರನ್ನು ಸ್ನೇಹಿತರೇ ಕೊಲೆ ಮಾಡಿದ್ದಾರೆ ಎನ್ನಲಾಗಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ನಗರದ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಲ್ಲಾಲಿಂಗ ಕಾಲೋನಿಯ ಸಂಗಮೇಶ್ವರ ಮಸ್ಕಲೆ (32) ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟವರು.<br /> <br /> `ಮದುವೆ ನಿಮಿತ್ತ ಸಂಗಮೇಶ್ವರ ಸ್ನೇಹಿತರೊಂದಿಗೆ ಶುಕ್ರವಾರ ತಾಲ್ಲೂಕಿನ ದದ್ದಾಪುರ ಗ್ರಾಮಕ್ಕೆ ತೆರಳಿದ್ದರು. ರಾತ್ರಿ ಏಕಾಏಕಿ ಅವರ ಜೊತೆಗಿದ್ದ ಸ್ನೇಹಿತರು ಕರೆ ಮಾಡಿ ಸಂಗಮೇಶ್ವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಪ್ರಯಾವಿ ಆಸ್ಪತ್ರೆಗೆ ಬರುವಂತೆ ತಿಳಿಸಿದ್ದರು. ಆಸ್ಪತ್ರೆಗೆ ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದರು~ ಎಂದು ಮೃತರ ಸಹೋದರ ವಿಜಯಕುಮಾರ ಮಸ್ಕಲೆ ದೂರಿನಲ್ಲಿ ವಿವರಿಸಿದ್ದಾರೆ. <br /> <br /> ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶನಿವಾರ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಮೃತರ ಸಂಬಂಧಿಕರ ಅಕ್ರಂದನ ಕರುಳು ಹಿಚುಕುವಂತಿತ್ತು. ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಗಂಗಾಧರ ಬಿ.ಎಂ., ನ್ಯೂಟೌನ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಪಿಲ್ದೇವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>