<p><strong>ಚಿತ್ರದುರ್ಗ: </strong>ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಗುರುವಾರ ವಕೀಲರ ಕ್ಷಮೆಯಾಚಿಸಿ ಬಿಕ್ಕಟ್ಟನ್ನು ಶಮನಗೊಳಿಸಿದರು.<br /> <br /> ಬುಧವಾರ ಜಿಲ್ಲಾಧಿಕಾರಿ ನ್ಯಾಯಾಲಯದ ಕಲಾಪ ಸಂದರ್ಭದಲ್ಲಿ ವಕೀಲ ಇ. ತಿಪ್ಪೇಸ್ವಾಮಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ವಕೀಲರು ದಿಢೀರ್ ಪ್ರತಿಭಟನೆ ನಡೆಸಿ ಕ್ಷಮೆಯಾಚನೆಗೆ ಆಗ್ರಹಿಸಿದ್ದರು. <br /> <br /> ಗುರುವಾರ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿದ ವಕೀಲರು, ವಕೀಲರ ಭವನದಲ್ಲಿ ಸಭೆ ನಡೆಸಿ ಜಿಲ್ಲಾಧಿಕಾರಿ ಕ್ಷಮೆಯಾಚಿಸುವವರೆಗೂ ಕಲಾಪಕ್ಕೆ ಹಾಜರಾಗಬಾರದು ಎಂದು ನಿರ್ಣಯ ಕೈಗೊಂಡರು. <br /> <br /> ಬೆಳಿಗ್ಗೆ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ನಾಗರಾಜ್ ಅವರು, ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಶ್ರೀನಿವಾಸ್ ಹರೀಶ್ಕುಮಾರ್ ಅವರನ್ನು ಭೇಟಿಯಾಗಿ ಘಟನೆಯ ವಿವರಗಳನ್ನು ನೀಡಿ ಸಮಾಲೋಚನೆ ನಡೆಸಿದರು.<br /> <br /> ನಂತರ ವಕೀಲರ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಶ್ರೀನಿವಾಸ್ ಹರೀಶಕುಮಾರ್, ವಕೀಲರಿಗೆ ವಾದ ಮಂಡಿಸುವ ಹಕ್ಕು ಇದೆ. ವಕೀಲರಿಗೆ ಹೊರಗೆ ಹೋಗಿ ಎಂದು ಹೇಳಿದ್ದು ತಪ್ಪು. ಕಲಾಪದ ಸಮಯದಲ್ಲಿ ಹೊರಗೆ ಹಾಕುವುದು ತಪ್ಪು. ನಿಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ. <br /> <br /> ಜಿಲ್ಲಾಧಿಕಾರಿ ನಮ್ಮ ಬಳಿ ಕ್ಷಮೆ ಕೋರಿದ್ದರು. ಆದರೆ, ಪದಾಧಿಕಾರಿಗಳು ಒತ್ತಾಯಿಸಿದ್ದರಿಂದ ಇಲ್ಲಿಗೆ ಆಗಮಿಸಿದ್ದಾರೆ. ವಕೀಲರು ಸಹ ಎಲ್ಲ ಸಿದ್ಧತೆಗಳೊಂದಿಗೆ ನ್ಯಾಯಾಲಯದ ಕಲಾಪಗಳಿಗೆ ಆಗಮಿಸಿದರೆ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸಲು ಸಾಧ್ಯವಾಗುತ್ತದೆ ಎಂದು ನುಡಿದರು.<br /> <br /> ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಮಾತನಾಡಿ, ಬಾಕಿ ಇರುವ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸಲು ಸಹಕಾರ ನೀಡಬೇಕು. ಅನೇಕ ವರ್ಷಗಳಿಂದ ಪ್ರಕರಣಗಳು ಬಾಕಿ ಉಳಿದಿದ್ದು, ನ್ಯಾಯಾಲಯಕ್ಕೆ ಅಲೆದಾಡುವುದರಿಂದ ಜನ ಸಾಮಾನ್ಯರಿಗೆ ಕಷ್ಟವಾಗುತ್ತದೆ. ಯಾವದೇ ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು ಎಂದು ನುಡಿದರು. ಈ ಮಾತುಗಳಿಂದ ಅಸಮಾಧಾನಗೊಂಡ ವಕೀಲರು, ನಿಮ್ಮ ತಪ್ಪಿಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.<br /> <br /> ವಕೀಲರಿಗೆ ಹೊರಗೆ ಹೋಗಿ ಎಂದು ಹೇಳಿದ್ದು ತಪ್ಪು. ಅದು ತಮಗೆ ಅರಿವಾಗಿದೆ. ಮುಂದೆ ಈ ರೀತಿಯ ಘಟನೆಗಳು ನಡೆಯುವುದಿಲ್ಲ. ಎಲ್ಲರೂ ಒಟ್ಟಾಗಿ ಹೋಗೋಣ ಎಂದು ನುಡಿದು ಪ್ರಕರಣವನ್ನು ಅಂತ್ಯಗೊಳಿಸಿದರು.<br /> <br /> ವಕೀಲರ ಸಂಘದ ಅಧ್ಯಕ್ಷ ಬಿ.ಕೆ. ರಹಮತ್ವುಲ್ಲಾ, ಪ್ರಧಾನ ಕಾರ್ಯದರ್ಶಿ ಶಿವು ಯಾದವ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಗುರುವಾರ ವಕೀಲರ ಕ್ಷಮೆಯಾಚಿಸಿ ಬಿಕ್ಕಟ್ಟನ್ನು ಶಮನಗೊಳಿಸಿದರು.<br /> <br /> ಬುಧವಾರ ಜಿಲ್ಲಾಧಿಕಾರಿ ನ್ಯಾಯಾಲಯದ ಕಲಾಪ ಸಂದರ್ಭದಲ್ಲಿ ವಕೀಲ ಇ. ತಿಪ್ಪೇಸ್ವಾಮಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ವಕೀಲರು ದಿಢೀರ್ ಪ್ರತಿಭಟನೆ ನಡೆಸಿ ಕ್ಷಮೆಯಾಚನೆಗೆ ಆಗ್ರಹಿಸಿದ್ದರು. <br /> <br /> ಗುರುವಾರ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿದ ವಕೀಲರು, ವಕೀಲರ ಭವನದಲ್ಲಿ ಸಭೆ ನಡೆಸಿ ಜಿಲ್ಲಾಧಿಕಾರಿ ಕ್ಷಮೆಯಾಚಿಸುವವರೆಗೂ ಕಲಾಪಕ್ಕೆ ಹಾಜರಾಗಬಾರದು ಎಂದು ನಿರ್ಣಯ ಕೈಗೊಂಡರು. <br /> <br /> ಬೆಳಿಗ್ಗೆ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ನಾಗರಾಜ್ ಅವರು, ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಶ್ರೀನಿವಾಸ್ ಹರೀಶ್ಕುಮಾರ್ ಅವರನ್ನು ಭೇಟಿಯಾಗಿ ಘಟನೆಯ ವಿವರಗಳನ್ನು ನೀಡಿ ಸಮಾಲೋಚನೆ ನಡೆಸಿದರು.<br /> <br /> ನಂತರ ವಕೀಲರ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಶ್ರೀನಿವಾಸ್ ಹರೀಶಕುಮಾರ್, ವಕೀಲರಿಗೆ ವಾದ ಮಂಡಿಸುವ ಹಕ್ಕು ಇದೆ. ವಕೀಲರಿಗೆ ಹೊರಗೆ ಹೋಗಿ ಎಂದು ಹೇಳಿದ್ದು ತಪ್ಪು. ಕಲಾಪದ ಸಮಯದಲ್ಲಿ ಹೊರಗೆ ಹಾಕುವುದು ತಪ್ಪು. ನಿಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ. <br /> <br /> ಜಿಲ್ಲಾಧಿಕಾರಿ ನಮ್ಮ ಬಳಿ ಕ್ಷಮೆ ಕೋರಿದ್ದರು. ಆದರೆ, ಪದಾಧಿಕಾರಿಗಳು ಒತ್ತಾಯಿಸಿದ್ದರಿಂದ ಇಲ್ಲಿಗೆ ಆಗಮಿಸಿದ್ದಾರೆ. ವಕೀಲರು ಸಹ ಎಲ್ಲ ಸಿದ್ಧತೆಗಳೊಂದಿಗೆ ನ್ಯಾಯಾಲಯದ ಕಲಾಪಗಳಿಗೆ ಆಗಮಿಸಿದರೆ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸಲು ಸಾಧ್ಯವಾಗುತ್ತದೆ ಎಂದು ನುಡಿದರು.<br /> <br /> ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಮಾತನಾಡಿ, ಬಾಕಿ ಇರುವ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸಲು ಸಹಕಾರ ನೀಡಬೇಕು. ಅನೇಕ ವರ್ಷಗಳಿಂದ ಪ್ರಕರಣಗಳು ಬಾಕಿ ಉಳಿದಿದ್ದು, ನ್ಯಾಯಾಲಯಕ್ಕೆ ಅಲೆದಾಡುವುದರಿಂದ ಜನ ಸಾಮಾನ್ಯರಿಗೆ ಕಷ್ಟವಾಗುತ್ತದೆ. ಯಾವದೇ ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು ಎಂದು ನುಡಿದರು. ಈ ಮಾತುಗಳಿಂದ ಅಸಮಾಧಾನಗೊಂಡ ವಕೀಲರು, ನಿಮ್ಮ ತಪ್ಪಿಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.<br /> <br /> ವಕೀಲರಿಗೆ ಹೊರಗೆ ಹೋಗಿ ಎಂದು ಹೇಳಿದ್ದು ತಪ್ಪು. ಅದು ತಮಗೆ ಅರಿವಾಗಿದೆ. ಮುಂದೆ ಈ ರೀತಿಯ ಘಟನೆಗಳು ನಡೆಯುವುದಿಲ್ಲ. ಎಲ್ಲರೂ ಒಟ್ಟಾಗಿ ಹೋಗೋಣ ಎಂದು ನುಡಿದು ಪ್ರಕರಣವನ್ನು ಅಂತ್ಯಗೊಳಿಸಿದರು.<br /> <br /> ವಕೀಲರ ಸಂಘದ ಅಧ್ಯಕ್ಷ ಬಿ.ಕೆ. ರಹಮತ್ವುಲ್ಲಾ, ಪ್ರಧಾನ ಕಾರ್ಯದರ್ಶಿ ಶಿವು ಯಾದವ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>