<p>ಬೆಂಗಳೂರು: ವಕೀಲಿ ವೃತ್ತಿ ಮೂಲಕ ಜನರಿಗೆ ನ್ಯಾಯ ದೊರಕಿಸಿಕೊಡಬೇಕಾದ ವಕೀಲರೇ ಕಾನೂನು ಉಲ್ಲಂಘಿಸಿ ಪ್ರತಿಭಟನೆಗಿಳಿಯುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು.<br /> <br /> ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಜನತಾದರ್ಶನ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, `ವಕೀಲರು ಕಾನೂನಿಗೆ ವಿರುದ್ಧವಾಗಿ ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ತೊಂದರೆ ನೀಡಿರುವುದು ಸಮರ್ಥನೀಯ ನಡವಳಿಕೆಯಲ್ಲ. ವಕೀಲರಾಗಲೀ, ಪೊಲೀಸರಾಗಲೀ ಕಾನೂನು ಕೈಗೆತಿಕೊಳ್ಳಲು ಯಾರಿಗೂ ಅವಕಾಶವಿಲ್ಲ~ ಎಂದರು.<br /> <br /> `ಪರಿಸ್ಥಿತಿ ಈ ಹಂತಕ್ಕೆ ಹೋಗಬಾರದಿತ್ತು. ವಕೀಲರು ಮತ್ತು ಪೊಲೀಸರ ನಡುವೆ ಉಂಟಾಗಿರುವ ಸಂಘರ್ಷವನ್ನು ಮಾತುಕತೆ ಮೂಲಕ ಪರಿಹರಿಸಲು ಪ್ರಯತ್ನಿಸಲಾಗುವುದು. ಈ ಪ್ರತಿಭಟನೆ ವೇಳೆ ಪೊಲೀಸರು ತಾಳ್ಮೆಯಿಂದ ನಡೆದುಕೊಂಡಿದ್ದಾರೆ. ಸಮಸ್ಯೆ ಇತ್ಯರ್ಥಪಡಿಸುವ ಜವಾಬ್ದಾರಿಯನ್ನು ಸಚಿವರಾದ ಆರ್.ಅಶೋಕ ಮತ್ತು ಎಸ್.ಸುರೇಶ್ಕುಮಾರ್ ಅವರಿಗೆ ವಹಿಸಲಾಗಿದೆ~ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತುಮಕೂರಿನಲ್ಲಿ ಪ್ರವಾಸ ಕೈಗೊಂಡಿರುವ ಕುರಿತು ಕೇಳಿದಾಗ, `ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ನನಗಾಗಿ ಕಾಯುವುದು ಬೇಡ ಎಂದು ಶಾಸಕರಿಗೆ ಮನವಿ ಮಾಡಿದ್ದೇನೆ. ಅದರಂತೆ ಈ ಸಭೆ ನಡೆದಿದೆ. ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಬರಲು ಸಾಧ್ಯವಿಲ್ಲ ಎಂದು ತಿಳಿಸಿದ್ದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವಕೀಲಿ ವೃತ್ತಿ ಮೂಲಕ ಜನರಿಗೆ ನ್ಯಾಯ ದೊರಕಿಸಿಕೊಡಬೇಕಾದ ವಕೀಲರೇ ಕಾನೂನು ಉಲ್ಲಂಘಿಸಿ ಪ್ರತಿಭಟನೆಗಿಳಿಯುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು.<br /> <br /> ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಜನತಾದರ್ಶನ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, `ವಕೀಲರು ಕಾನೂನಿಗೆ ವಿರುದ್ಧವಾಗಿ ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ತೊಂದರೆ ನೀಡಿರುವುದು ಸಮರ್ಥನೀಯ ನಡವಳಿಕೆಯಲ್ಲ. ವಕೀಲರಾಗಲೀ, ಪೊಲೀಸರಾಗಲೀ ಕಾನೂನು ಕೈಗೆತಿಕೊಳ್ಳಲು ಯಾರಿಗೂ ಅವಕಾಶವಿಲ್ಲ~ ಎಂದರು.<br /> <br /> `ಪರಿಸ್ಥಿತಿ ಈ ಹಂತಕ್ಕೆ ಹೋಗಬಾರದಿತ್ತು. ವಕೀಲರು ಮತ್ತು ಪೊಲೀಸರ ನಡುವೆ ಉಂಟಾಗಿರುವ ಸಂಘರ್ಷವನ್ನು ಮಾತುಕತೆ ಮೂಲಕ ಪರಿಹರಿಸಲು ಪ್ರಯತ್ನಿಸಲಾಗುವುದು. ಈ ಪ್ರತಿಭಟನೆ ವೇಳೆ ಪೊಲೀಸರು ತಾಳ್ಮೆಯಿಂದ ನಡೆದುಕೊಂಡಿದ್ದಾರೆ. ಸಮಸ್ಯೆ ಇತ್ಯರ್ಥಪಡಿಸುವ ಜವಾಬ್ದಾರಿಯನ್ನು ಸಚಿವರಾದ ಆರ್.ಅಶೋಕ ಮತ್ತು ಎಸ್.ಸುರೇಶ್ಕುಮಾರ್ ಅವರಿಗೆ ವಹಿಸಲಾಗಿದೆ~ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತುಮಕೂರಿನಲ್ಲಿ ಪ್ರವಾಸ ಕೈಗೊಂಡಿರುವ ಕುರಿತು ಕೇಳಿದಾಗ, `ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ನನಗಾಗಿ ಕಾಯುವುದು ಬೇಡ ಎಂದು ಶಾಸಕರಿಗೆ ಮನವಿ ಮಾಡಿದ್ದೇನೆ. ಅದರಂತೆ ಈ ಸಭೆ ನಡೆದಿದೆ. ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಬರಲು ಸಾಧ್ಯವಿಲ್ಲ ಎಂದು ತಿಳಿಸಿದ್ದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>