<p>ಬೆಂಗಳೂರು: `ಮಾಧ್ಯಮ ಪ್ರತಿನಿಧಿಗಳ ಮೇಲೆ ವಕೀಲರು ನಡೆಸಿದ ಹಲ್ಲೆ ಪ್ರಕರಣದಲ್ಲಿ ವಕೀಲರ ಮೇಲೂ ಪೊಲೀಸ್ರಿಂದ ದೈಹಿಕ ದೌರ್ಜನ್ಯಗಳು ನಡೆದಿದ್ದು. ಈ ಬಗ್ಗೆಯು ಮಾಧ್ಯಮಗಳು ಬೆಳಕು ಚೆಲ್ಲಿ, ಸಾರ್ವಜನಿಕರಿಗೆ ತಿಳಿಯಪಡಿಸಬೇಕು~ ಎಂದು ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಮನವಿ ಮಾಡಿದರು.<br /> <br /> `ವಕೀಲರ ಮೇಲೆ ನಡೆದ ಹಲ್ಲೆಯನ್ನು ಒಳಗೊಂಡ ಸಿ.ಡಿಯನ್ನು ಮಾಧ್ಯಮ ಪ್ರತಿನಿಧಿಗಳಿಗೆ ಪ್ರದರ್ಶಿಸುತ್ತಾ. ಈ ಪ್ರಕರಣದಲ್ಲಿ ಮಹಿಳಾ ವಕೀಲರು ಸೇರಿದಂತೆ ಇತರೆ ವಕೀಲರ ಮೇಲೆ ಹಲ್ಲೆ ನಡೆದಿದ್ದು, ಈ ಬಗ್ಗೆಯು ಮಾಧ್ಯಮಗಳು ಪ್ರಚಾರ ನಡೆಸಬೇಕು~ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. <br /> <br /> `ಮಾಧ್ಯಮ ಮತ್ತು ವಕೀಲರ ನಡುವೆ ಸಂಘರ್ಷ ಮುಂದುವರಿಯುವುದು ಬೇಡ. ಪ್ರಸ್ತುತ ಸಂದರ್ಭದಲ್ಲಿ ಸಂಧಾನದ ಅಗತ್ಯವಿದ್ದು, ಈ ಸಮಸ್ಯೆಯನ್ನು ಇಲ್ಲೇ ಇರ್ತಥ್ಯಪಡಿಸಿಕೊಳ್ಳುವ ನಿಟ್ಟಿನಲ್ಲಿ ಎರಡು ವೃತ್ತಿಯಲ್ಲಿರುವ ಹಿರಿಯರು ಚಿಂತನೆ ನಡೆಸಬೇಕು~ ಎಂದು ಹೇಳಿದರು.<br /> <br /> `ಕೋಟ್ ಆವರಣದಲ್ಲಿ ಕರ್ತವ್ಯ ನಿರ್ವಹಿಸುವ ಮಾಧ್ಯಮ ಪ್ರತಿನಿಧಿಗಳಿಗೆ ಸೂಕ್ತ ಭದ್ರತೆ ಒದಗಿಸಲು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ವಕೀಲರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಮಾಧ್ಯಮಗಳಲ್ಲಿ ವಕೀಲರ ಕುರಿತು ಪ್ರಸಾರವಾಗುತ್ತಿರುವ ಅವಹೇಳನಕಾರಿ ಪದ ಪ್ರಯೋಗವನ್ನು ಕೂಡಲೇ ನಿಲ್ಲಿಸಬೇಕು~ ಎಂದು ಅವರು ಒತ್ತಾಯಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಮಾಧ್ಯಮ ಪ್ರತಿನಿಧಿಗಳ ಮೇಲೆ ವಕೀಲರು ನಡೆಸಿದ ಹಲ್ಲೆ ಪ್ರಕರಣದಲ್ಲಿ ವಕೀಲರ ಮೇಲೂ ಪೊಲೀಸ್ರಿಂದ ದೈಹಿಕ ದೌರ್ಜನ್ಯಗಳು ನಡೆದಿದ್ದು. ಈ ಬಗ್ಗೆಯು ಮಾಧ್ಯಮಗಳು ಬೆಳಕು ಚೆಲ್ಲಿ, ಸಾರ್ವಜನಿಕರಿಗೆ ತಿಳಿಯಪಡಿಸಬೇಕು~ ಎಂದು ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಮನವಿ ಮಾಡಿದರು.<br /> <br /> `ವಕೀಲರ ಮೇಲೆ ನಡೆದ ಹಲ್ಲೆಯನ್ನು ಒಳಗೊಂಡ ಸಿ.ಡಿಯನ್ನು ಮಾಧ್ಯಮ ಪ್ರತಿನಿಧಿಗಳಿಗೆ ಪ್ರದರ್ಶಿಸುತ್ತಾ. ಈ ಪ್ರಕರಣದಲ್ಲಿ ಮಹಿಳಾ ವಕೀಲರು ಸೇರಿದಂತೆ ಇತರೆ ವಕೀಲರ ಮೇಲೆ ಹಲ್ಲೆ ನಡೆದಿದ್ದು, ಈ ಬಗ್ಗೆಯು ಮಾಧ್ಯಮಗಳು ಪ್ರಚಾರ ನಡೆಸಬೇಕು~ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. <br /> <br /> `ಮಾಧ್ಯಮ ಮತ್ತು ವಕೀಲರ ನಡುವೆ ಸಂಘರ್ಷ ಮುಂದುವರಿಯುವುದು ಬೇಡ. ಪ್ರಸ್ತುತ ಸಂದರ್ಭದಲ್ಲಿ ಸಂಧಾನದ ಅಗತ್ಯವಿದ್ದು, ಈ ಸಮಸ್ಯೆಯನ್ನು ಇಲ್ಲೇ ಇರ್ತಥ್ಯಪಡಿಸಿಕೊಳ್ಳುವ ನಿಟ್ಟಿನಲ್ಲಿ ಎರಡು ವೃತ್ತಿಯಲ್ಲಿರುವ ಹಿರಿಯರು ಚಿಂತನೆ ನಡೆಸಬೇಕು~ ಎಂದು ಹೇಳಿದರು.<br /> <br /> `ಕೋಟ್ ಆವರಣದಲ್ಲಿ ಕರ್ತವ್ಯ ನಿರ್ವಹಿಸುವ ಮಾಧ್ಯಮ ಪ್ರತಿನಿಧಿಗಳಿಗೆ ಸೂಕ್ತ ಭದ್ರತೆ ಒದಗಿಸಲು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ವಕೀಲರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಮಾಧ್ಯಮಗಳಲ್ಲಿ ವಕೀಲರ ಕುರಿತು ಪ್ರಸಾರವಾಗುತ್ತಿರುವ ಅವಹೇಳನಕಾರಿ ಪದ ಪ್ರಯೋಗವನ್ನು ಕೂಡಲೇ ನಿಲ್ಲಿಸಬೇಕು~ ಎಂದು ಅವರು ಒತ್ತಾಯಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>