<p><strong>ಬೆಂಗಳೂರು:</strong> ಇದೇ ತಿಂಗಳ 2ರಂದು ನಗರ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ವಕೀಲರ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯ ವಕೀಲರ ಪರಿಷತ್ತಿಗೆ ಆದೇಶಿಸುವಂತೆ ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.</p>.<p>ಚೆನ್ನೈ ಮೂಲದ ವಿಶ್ವನಾಥ ಸ್ವಾಮಿ ಎನ್ನುವವರು ಈ ಅರ್ಜಿ ಸಲ್ಲಿಸಿದ್ದಾರೆ. ತಪ್ಪಿತಸ್ಥ ವಕೀಲರ ವಿರುದ್ಧ ಇದುವರೆಗೆ ಪರಿಷತ್ತು ಯಾವುದೇ ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಈ ಅರ್ಜಿ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.</p>.<p>ಮಾಧ್ಯಮ ಹಾಗೂ ಪೊಲೀಸರ ವಿರುದ್ಧ ವಕೀಲರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಮಹಾಪೂರವನ್ನೇ ಹರಿಸಿರುವ ಬೆನ್ನಲ್ಲೇ ಈಗ ವಕೀಲರ ವಿರುದ್ಧ ಮೊದಲ ಅರ್ಜಿ ಕೋರ್ಟ್ ಬಾಗಿಲಿಗೆ ಬಂದಿದೆ.</p>.<p>ನ್ಯಾಯಾಲಯಗಳಲ್ಲಿ ವಕೀಲರು ಯಾವ ರೀತಿ ನಡೆದುಕೊಳ್ಳಬೇಕು ಎಂಬ ಬಗ್ಗೆ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಅವರು 23 ಪುಟಗಳ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಅದನ್ನು ಪಾಲಿಸುವಂತೆ ವಕೀಲರಿಗೆ ಆದೇಶಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.</p>.<p>ಚೆನ್ನೈನಲ್ಲಿ ಇರುವ ಕನ್ನಡಿಗರಾಗಿರುವ ತಾವು ಕರ್ನಾಟಕದ ವಕೀಲರ ವಿರುದ್ಧ ಅರ್ಜಿ ಸಲ್ಲಿಸಲು ಕಾರಣ ಏನೆಂದು ಉಲ್ಲೇಖಿಸಿರುವ ಅವರು, `ಚೆನ್ನೈನಲ್ಲಿ ಮೂರು ವರ್ಷಗಳ ಹಿಂದೆ ಇದೇ ರೀತಿ ಘಟನೆ ನಡೆದಿತ್ತು. ಪೊಲೀಸರ ಹಾಗೂ ವಕೀಲರ ನಡುವೆ ಜಟಾಪಟಿಯಾಗಿತ್ತು. ಆ ಸಂದರ್ಭದಲ್ಲಿ ನ್ಯಾಯಾಲಯದ ಆವರಣದಲ್ಲಿ ಇದ್ದ ನನ್ನ ಕೈಯನ್ನು ವಕೀಲರು ಮುರಿದಿದ್ದರು. ಇದೇ ಪರಿಸ್ಥಿತಿ ಬೇರೆಯವರಿಗೂ ಆಗಬಹುದು. ಈ ಬಗ್ಗೆ ಸುಪ್ರೀಂಕೋರ್ಟ್ ಗಮನ ಸೆಳೆದಿರುವ ನಾನು ಅಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೇನೆ. ಅದೇ ರೀತಿ ಕರ್ನಾಟಕದಲ್ಲಿ ಘಟನೆ ನಡೆದಿರುವ ಕಾರಣ, ಈ ಅರ್ಜಿ ಸಲ್ಲಿಸಿದ್ದೇನೆ ವಿನಾ ಇದರಲ್ಲಿ ಸ್ವಹಿತಾಸಕ್ತಿ ಏನೂ ಇಲ್ಲ~ ಎಂದಿದ್ದಾರೆ.</p>.<p>ಈ ಅರ್ಜಿಯ ವಿಚಾರಣೆಯನ್ನು ಶೀಘ್ರದಲ್ಲಿ ನಡೆಸುವಂತೆ ಕೋರಿ ಅವರು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ಮನವಿ ಸಲ್ಲಿಸಿದರು. ಅರ್ಜಿಯನ್ನು ಬರುವ ಸೋಮವಾರ (ಮಾರ್ಚ್ 19) ಕೈಗೆತ್ತಿಕೊಳ್ಳುವುದಾಗಿ ನ್ಯಾಯಮೂರ್ತಿಗಳು ತಿಳಿಸಿದರು.</p>.<p><strong>ಖುದ್ದು ವಾದ:</strong> ಈ ಅರ್ಜಿ ವಕೀಲರ ವಿರುದ್ಧವಾಗಿ ಇರುವ ಹಿನ್ನೆಲೆಯಲ್ಲಿ ಅರ್ಜಿದಾರರ ಪರ ವಾದಿಸಲು ಯಾವೊಬ್ಬ ವಕೀಲರೂ ಮುಂದೆ ಬಂದಿಲ್ಲ. ಆದುದರಿಂದ ತಾವೇ ಖುದ್ದಾಗಿ ವಾದ ಮಂಡಿಸುವುದಾಗಿ ವಿಶ್ವನಾಥ್ ತಿಳಿಸಿದ್ದಾರೆ.</p>.<p><strong>ಭಯದ ವಾತಾವರಣ:</strong> ಈ ಮಧ್ಯೆ, ಹೈಕೋರ್ಟ್ನಲ್ಲಿ ಆತಂಕದ ಸ್ಥಿತಿ ಇನ್ನೂ ಮುಂದುವರಿದಿದೆ. ವಕೀಲರು ನ್ಯಾಯಾಂಗ ಕಲಾಪ ಬಹಿಷ್ಕಾರ ಮುಂದುವರಿಸಿರುವ ಹಿನ್ನೆಲೆಯಲ್ಲಿ, ಸಿವಿಲ್ ಕೋರ್ಟ್ನಲ್ಲಿ ಕಲಾಪ ಮಂಗಳವಾರವೂ ನಡೆದಿಲ್ಲ. ಹೈಕೋರ್ಟ್ನಲ್ಲಿ ಕೂಡ ಯಾವುದೇ ಕ್ಷಣದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು ಎಂಬ ಕಾರಣದಿಂದ ವಕೀಲರಿಗಿಂತ ಪೊಲೀಸರೇ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ.</p>.<p>ಸಿವಿಲ್ ಕೋರ್ಟ್ನ ಹಲವು ವಕೀಲರು ಹೈಕೋರ್ಟ್ ಕಲಾಪ ಬಹಿಷ್ಕಾರಕ್ಕೆ ಮಂಗಳವಾರ ಮಧ್ಯಾಹ್ನ ಬರಲಿದ್ದಾರೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಇನ್ನಷ್ಟು ಬಿಗಿಗೊಳಿಸಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ವಕೀಲರು ಹೈಕೋರ್ಟ್ಗೆ ಬರುವುದನ್ನು ರದ್ದುಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇದೇ ತಿಂಗಳ 2ರಂದು ನಗರ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ವಕೀಲರ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯ ವಕೀಲರ ಪರಿಷತ್ತಿಗೆ ಆದೇಶಿಸುವಂತೆ ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.</p>.<p>ಚೆನ್ನೈ ಮೂಲದ ವಿಶ್ವನಾಥ ಸ್ವಾಮಿ ಎನ್ನುವವರು ಈ ಅರ್ಜಿ ಸಲ್ಲಿಸಿದ್ದಾರೆ. ತಪ್ಪಿತಸ್ಥ ವಕೀಲರ ವಿರುದ್ಧ ಇದುವರೆಗೆ ಪರಿಷತ್ತು ಯಾವುದೇ ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಈ ಅರ್ಜಿ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.</p>.<p>ಮಾಧ್ಯಮ ಹಾಗೂ ಪೊಲೀಸರ ವಿರುದ್ಧ ವಕೀಲರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಮಹಾಪೂರವನ್ನೇ ಹರಿಸಿರುವ ಬೆನ್ನಲ್ಲೇ ಈಗ ವಕೀಲರ ವಿರುದ್ಧ ಮೊದಲ ಅರ್ಜಿ ಕೋರ್ಟ್ ಬಾಗಿಲಿಗೆ ಬಂದಿದೆ.</p>.<p>ನ್ಯಾಯಾಲಯಗಳಲ್ಲಿ ವಕೀಲರು ಯಾವ ರೀತಿ ನಡೆದುಕೊಳ್ಳಬೇಕು ಎಂಬ ಬಗ್ಗೆ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಅವರು 23 ಪುಟಗಳ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಅದನ್ನು ಪಾಲಿಸುವಂತೆ ವಕೀಲರಿಗೆ ಆದೇಶಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.</p>.<p>ಚೆನ್ನೈನಲ್ಲಿ ಇರುವ ಕನ್ನಡಿಗರಾಗಿರುವ ತಾವು ಕರ್ನಾಟಕದ ವಕೀಲರ ವಿರುದ್ಧ ಅರ್ಜಿ ಸಲ್ಲಿಸಲು ಕಾರಣ ಏನೆಂದು ಉಲ್ಲೇಖಿಸಿರುವ ಅವರು, `ಚೆನ್ನೈನಲ್ಲಿ ಮೂರು ವರ್ಷಗಳ ಹಿಂದೆ ಇದೇ ರೀತಿ ಘಟನೆ ನಡೆದಿತ್ತು. ಪೊಲೀಸರ ಹಾಗೂ ವಕೀಲರ ನಡುವೆ ಜಟಾಪಟಿಯಾಗಿತ್ತು. ಆ ಸಂದರ್ಭದಲ್ಲಿ ನ್ಯಾಯಾಲಯದ ಆವರಣದಲ್ಲಿ ಇದ್ದ ನನ್ನ ಕೈಯನ್ನು ವಕೀಲರು ಮುರಿದಿದ್ದರು. ಇದೇ ಪರಿಸ್ಥಿತಿ ಬೇರೆಯವರಿಗೂ ಆಗಬಹುದು. ಈ ಬಗ್ಗೆ ಸುಪ್ರೀಂಕೋರ್ಟ್ ಗಮನ ಸೆಳೆದಿರುವ ನಾನು ಅಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೇನೆ. ಅದೇ ರೀತಿ ಕರ್ನಾಟಕದಲ್ಲಿ ಘಟನೆ ನಡೆದಿರುವ ಕಾರಣ, ಈ ಅರ್ಜಿ ಸಲ್ಲಿಸಿದ್ದೇನೆ ವಿನಾ ಇದರಲ್ಲಿ ಸ್ವಹಿತಾಸಕ್ತಿ ಏನೂ ಇಲ್ಲ~ ಎಂದಿದ್ದಾರೆ.</p>.<p>ಈ ಅರ್ಜಿಯ ವಿಚಾರಣೆಯನ್ನು ಶೀಘ್ರದಲ್ಲಿ ನಡೆಸುವಂತೆ ಕೋರಿ ಅವರು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ಮನವಿ ಸಲ್ಲಿಸಿದರು. ಅರ್ಜಿಯನ್ನು ಬರುವ ಸೋಮವಾರ (ಮಾರ್ಚ್ 19) ಕೈಗೆತ್ತಿಕೊಳ್ಳುವುದಾಗಿ ನ್ಯಾಯಮೂರ್ತಿಗಳು ತಿಳಿಸಿದರು.</p>.<p><strong>ಖುದ್ದು ವಾದ:</strong> ಈ ಅರ್ಜಿ ವಕೀಲರ ವಿರುದ್ಧವಾಗಿ ಇರುವ ಹಿನ್ನೆಲೆಯಲ್ಲಿ ಅರ್ಜಿದಾರರ ಪರ ವಾದಿಸಲು ಯಾವೊಬ್ಬ ವಕೀಲರೂ ಮುಂದೆ ಬಂದಿಲ್ಲ. ಆದುದರಿಂದ ತಾವೇ ಖುದ್ದಾಗಿ ವಾದ ಮಂಡಿಸುವುದಾಗಿ ವಿಶ್ವನಾಥ್ ತಿಳಿಸಿದ್ದಾರೆ.</p>.<p><strong>ಭಯದ ವಾತಾವರಣ:</strong> ಈ ಮಧ್ಯೆ, ಹೈಕೋರ್ಟ್ನಲ್ಲಿ ಆತಂಕದ ಸ್ಥಿತಿ ಇನ್ನೂ ಮುಂದುವರಿದಿದೆ. ವಕೀಲರು ನ್ಯಾಯಾಂಗ ಕಲಾಪ ಬಹಿಷ್ಕಾರ ಮುಂದುವರಿಸಿರುವ ಹಿನ್ನೆಲೆಯಲ್ಲಿ, ಸಿವಿಲ್ ಕೋರ್ಟ್ನಲ್ಲಿ ಕಲಾಪ ಮಂಗಳವಾರವೂ ನಡೆದಿಲ್ಲ. ಹೈಕೋರ್ಟ್ನಲ್ಲಿ ಕೂಡ ಯಾವುದೇ ಕ್ಷಣದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು ಎಂಬ ಕಾರಣದಿಂದ ವಕೀಲರಿಗಿಂತ ಪೊಲೀಸರೇ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ.</p>.<p>ಸಿವಿಲ್ ಕೋರ್ಟ್ನ ಹಲವು ವಕೀಲರು ಹೈಕೋರ್ಟ್ ಕಲಾಪ ಬಹಿಷ್ಕಾರಕ್ಕೆ ಮಂಗಳವಾರ ಮಧ್ಯಾಹ್ನ ಬರಲಿದ್ದಾರೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಇನ್ನಷ್ಟು ಬಿಗಿಗೊಳಿಸಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ವಕೀಲರು ಹೈಕೋರ್ಟ್ಗೆ ಬರುವುದನ್ನು ರದ್ದುಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>