<p><strong>ಚಿತ್ರದುರ್ಗ:</strong> `ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ ವಕೀಲರ ಪ್ರತಿಭಟನೆ ಅತ್ಯಂತ ಖಂಡನೀಯ ಮತ್ತು ವಿಷಾದನೀಯವಾಗಿದ್ದು, ವೃತ್ತಿ ಧರ್ಮಕ್ಕೆ ಕಪ್ಪುಚುಕ್ಕೆಯಾಗಿದೆ~ ಎಂದು ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಚಿತ್ರದುರ್ಗ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ವಿ. ಜಗನ್ನಾಥನ್ ಅಭಿಪ್ರಾಯಪಟ್ಟರು. <br /> <br /> ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ಶನಿವಾರ ಜಿಲ್ಲಾ ವಕೀಲರ ಕಚೇರಿಗಳ ಸಮನ್ವಯ ಕಟ್ಟಡದ ಶಿಲಾನ್ಯಾಸ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> `ವಕೀಲರು ದಾರಿದೀಪವಾಗಬೇಕು. ಸಾರ್ವಜನಿಕರ ಹಕ್ಕುಗಳನ್ನು ರಕ್ಷಿಸುವಲ್ಲಿ ವಕೀಲರ ಪಾತ್ರ ಮಹತ್ವದ್ದು. ಆದರೆ, ಇತ್ತೀಚೆಗೆ ಬೆಂಗಳೂರು ಮತ್ತು ಇತರೆಡೆಗಳಲ್ಲಿ ವಕೀಲರು ಪ್ರತಿಭಟನೆ ನಡೆಸಿ ಕಲಾಪ ಬಹಿಷ್ಕರಿಸಿದರು. <br /> <br /> ನ್ಯಾಯಾಂಗ ವ್ಯವಸ್ಥೆಯಲ್ಲಿ ಇದೊಂದು ಕಪ್ಪುಚುಕ್ಕೆ ನಡೆದು ಹೋಗಿದೆ. ಈ ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಹಿರಿಯ ವಕೀಲರೊಬ್ಬರು ತಮಗೆ ಈ ವೃತ್ತಿಯೇ ಬೇಡವೆನಿಸುತ್ತಿದೆ ಎಂದು ನೊಂದು ನುಡಿದರು. ಆದ್ದರಿಂದ ಈ ರೀತಿಯ ಘಟನೆಗಳು ಮರುಕಳಿಸಬಾರದು~ ಎಂದರು.<br /> <br /> 2011ರಲ್ಲಿ ಸುಪ್ರೀಂಕೋರ್ಟ್ ವಕೀಲ ವೃತ್ತಿಯ ಬಗ್ಗೆ ಅತ್ಯುತ್ತಮವಾದ ಹೇಳಿಕೆ ನೀಡಿದೆ. `ಕಾನೂನು ಎತ್ತಿ ಹಿಡಿಯುವ ಜವಾಬ್ದಾರಿ ವಕೀಲರಿಗಿದೆ. ವಕೀಲರು ಕಾನೂನು ಉಲ್ಲಂಘಿಸಿದರೆ ದುರದೃಷ್ಟಕರ~ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಆದ್ದರಿಂದ ವಕೀಲ ವೃತ್ತಿಯ ಗೌರವ, ಘನತೆ ಕಾಪಾಡಬೇಕು ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> `ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ ವಕೀಲರ ಪ್ರತಿಭಟನೆ ಅತ್ಯಂತ ಖಂಡನೀಯ ಮತ್ತು ವಿಷಾದನೀಯವಾಗಿದ್ದು, ವೃತ್ತಿ ಧರ್ಮಕ್ಕೆ ಕಪ್ಪುಚುಕ್ಕೆಯಾಗಿದೆ~ ಎಂದು ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಚಿತ್ರದುರ್ಗ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ವಿ. ಜಗನ್ನಾಥನ್ ಅಭಿಪ್ರಾಯಪಟ್ಟರು. <br /> <br /> ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ಶನಿವಾರ ಜಿಲ್ಲಾ ವಕೀಲರ ಕಚೇರಿಗಳ ಸಮನ್ವಯ ಕಟ್ಟಡದ ಶಿಲಾನ್ಯಾಸ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> `ವಕೀಲರು ದಾರಿದೀಪವಾಗಬೇಕು. ಸಾರ್ವಜನಿಕರ ಹಕ್ಕುಗಳನ್ನು ರಕ್ಷಿಸುವಲ್ಲಿ ವಕೀಲರ ಪಾತ್ರ ಮಹತ್ವದ್ದು. ಆದರೆ, ಇತ್ತೀಚೆಗೆ ಬೆಂಗಳೂರು ಮತ್ತು ಇತರೆಡೆಗಳಲ್ಲಿ ವಕೀಲರು ಪ್ರತಿಭಟನೆ ನಡೆಸಿ ಕಲಾಪ ಬಹಿಷ್ಕರಿಸಿದರು. <br /> <br /> ನ್ಯಾಯಾಂಗ ವ್ಯವಸ್ಥೆಯಲ್ಲಿ ಇದೊಂದು ಕಪ್ಪುಚುಕ್ಕೆ ನಡೆದು ಹೋಗಿದೆ. ಈ ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಹಿರಿಯ ವಕೀಲರೊಬ್ಬರು ತಮಗೆ ಈ ವೃತ್ತಿಯೇ ಬೇಡವೆನಿಸುತ್ತಿದೆ ಎಂದು ನೊಂದು ನುಡಿದರು. ಆದ್ದರಿಂದ ಈ ರೀತಿಯ ಘಟನೆಗಳು ಮರುಕಳಿಸಬಾರದು~ ಎಂದರು.<br /> <br /> 2011ರಲ್ಲಿ ಸುಪ್ರೀಂಕೋರ್ಟ್ ವಕೀಲ ವೃತ್ತಿಯ ಬಗ್ಗೆ ಅತ್ಯುತ್ತಮವಾದ ಹೇಳಿಕೆ ನೀಡಿದೆ. `ಕಾನೂನು ಎತ್ತಿ ಹಿಡಿಯುವ ಜವಾಬ್ದಾರಿ ವಕೀಲರಿಗಿದೆ. ವಕೀಲರು ಕಾನೂನು ಉಲ್ಲಂಘಿಸಿದರೆ ದುರದೃಷ್ಟಕರ~ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಆದ್ದರಿಂದ ವಕೀಲ ವೃತ್ತಿಯ ಗೌರವ, ಘನತೆ ಕಾಪಾಡಬೇಕು ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>