<p>ಕುಣಿಗಲ್: ವಿಶ್ವದಲ್ಲಿನ ಸಂದಿಗ್ಧ ಸಮಸ್ಯೆಗಳಿಗೆ ಪರಿಹಾರ ಶರಣರ ವಚನ ಸಾಹಿತ್ಯದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್ ಮಂಗಳವಾರ ತಿಳಿಸಿದರು.<br /> <br /> ಪಟ್ಟಣದ ವೀರಶೈವ ಸಮಾಜ ಸೇವಾ ಸಮಿತಿ ಮತ್ತು ಅಕ್ಕನ ಬಳಗದ ಆಶ್ರಯದಲ್ಲಿ ಜಗಜ್ಯೋತಿ ಬಸವೇಶ್ವರ, ಜಗದ್ಗುರು ರೇಣುಕಾಚಾರ್ಯ ಮತ್ತು ಶರಣೆ ಅಕ್ಕಮಹಾದೇವಿ ಜಯಂತ್ಯುತ್ಸವದಲ್ಲಿ ಮಾತನಾಡಿ, ಬಸವಣ್ಣ ಅವರ ವಚನ ವಿಶ್ವಕ್ಕೆ ದಾರಿ ದೀಪವಾಗಿವೆ ಎಂದು ಬಣ್ಣಿಸಿದರು.<br /> <br /> ಎಡೆಯೂರಿನ ಬಾಳೆಹೊನ್ನೂರು ಖಾಸಾ-ಶಾಖಾ ಮಠದ ರೇಣುಕ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಶಾಸಕ ಬಿ.ಬಿ. ರಾಮಸ್ವಾಮಿಗೌಡ ಅಧ್ಯಕ್ಷತೆ ವಹಿಸಿದ್ದರು. ಹುಲಿಯೂರುದುರ್ಗದ ಸಿದ್ಧಲಿಂಗಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. <br /> <br /> ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್, ತಹಶೀಲ್ದಾರ್ ಡಾ.ರವಿ ಎಂ.ತಿರ್ಲಾಪುರ್, ಸ್ಟಡ್ಫಾರಂ ವ್ಯವಸ್ಥಾಪಕ ಡಾ.ದಿನೇಶ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ವೆಂಕಟೇಗೌಡ, ವೀರಶೈವ ಸಮಾಜದ ಅಧ್ಯಕ್ಷ ಮಹದೇವಯ್ಯ, ಗೌರವಾಧ್ಯಕ್ಷ ಎಸ್.ಆರ್.ಚಂದ್ರಶೇಖರಪ್ಪ, ಹಿರಿಯರಾದ ಬಿ.ಜಿ.ಚಂದ್ರಶೇಖರಯ್ಯ, ಉಪಾಧ್ಯಕ್ಷರಾದ ವಿ.ವಿ.ಆರಾಧ್ಯ, ಟಿ.ಎಂ.ಶಿವಕುಮಾರ್, ಶಿವಶಂಕರ್, ಕಾರ್ಯದರ್ಶಿ ಚಂದ್ರಶೇಖರ್ ಇತರರು ಉಪಸ್ಥಿತರಿದ್ದರು. <br /> <br /> ಬಿ.ಎಸ್. ಸೋಮಶೇಖರ್ ಸ್ವಾಗತಿಸಿ, ಕಿರಣ್ಕುಮಾರ್ ವಂದಿಸಿದರು. ಗುರುನಾಥ್ ಬೂದಿಹಾಳ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಣಿಗಲ್: ವಿಶ್ವದಲ್ಲಿನ ಸಂದಿಗ್ಧ ಸಮಸ್ಯೆಗಳಿಗೆ ಪರಿಹಾರ ಶರಣರ ವಚನ ಸಾಹಿತ್ಯದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್ ಮಂಗಳವಾರ ತಿಳಿಸಿದರು.<br /> <br /> ಪಟ್ಟಣದ ವೀರಶೈವ ಸಮಾಜ ಸೇವಾ ಸಮಿತಿ ಮತ್ತು ಅಕ್ಕನ ಬಳಗದ ಆಶ್ರಯದಲ್ಲಿ ಜಗಜ್ಯೋತಿ ಬಸವೇಶ್ವರ, ಜಗದ್ಗುರು ರೇಣುಕಾಚಾರ್ಯ ಮತ್ತು ಶರಣೆ ಅಕ್ಕಮಹಾದೇವಿ ಜಯಂತ್ಯುತ್ಸವದಲ್ಲಿ ಮಾತನಾಡಿ, ಬಸವಣ್ಣ ಅವರ ವಚನ ವಿಶ್ವಕ್ಕೆ ದಾರಿ ದೀಪವಾಗಿವೆ ಎಂದು ಬಣ್ಣಿಸಿದರು.<br /> <br /> ಎಡೆಯೂರಿನ ಬಾಳೆಹೊನ್ನೂರು ಖಾಸಾ-ಶಾಖಾ ಮಠದ ರೇಣುಕ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಶಾಸಕ ಬಿ.ಬಿ. ರಾಮಸ್ವಾಮಿಗೌಡ ಅಧ್ಯಕ್ಷತೆ ವಹಿಸಿದ್ದರು. ಹುಲಿಯೂರುದುರ್ಗದ ಸಿದ್ಧಲಿಂಗಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. <br /> <br /> ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್, ತಹಶೀಲ್ದಾರ್ ಡಾ.ರವಿ ಎಂ.ತಿರ್ಲಾಪುರ್, ಸ್ಟಡ್ಫಾರಂ ವ್ಯವಸ್ಥಾಪಕ ಡಾ.ದಿನೇಶ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ವೆಂಕಟೇಗೌಡ, ವೀರಶೈವ ಸಮಾಜದ ಅಧ್ಯಕ್ಷ ಮಹದೇವಯ್ಯ, ಗೌರವಾಧ್ಯಕ್ಷ ಎಸ್.ಆರ್.ಚಂದ್ರಶೇಖರಪ್ಪ, ಹಿರಿಯರಾದ ಬಿ.ಜಿ.ಚಂದ್ರಶೇಖರಯ್ಯ, ಉಪಾಧ್ಯಕ್ಷರಾದ ವಿ.ವಿ.ಆರಾಧ್ಯ, ಟಿ.ಎಂ.ಶಿವಕುಮಾರ್, ಶಿವಶಂಕರ್, ಕಾರ್ಯದರ್ಶಿ ಚಂದ್ರಶೇಖರ್ ಇತರರು ಉಪಸ್ಥಿತರಿದ್ದರು. <br /> <br /> ಬಿ.ಎಸ್. ಸೋಮಶೇಖರ್ ಸ್ವಾಗತಿಸಿ, ಕಿರಣ್ಕುಮಾರ್ ವಂದಿಸಿದರು. ಗುರುನಾಥ್ ಬೂದಿಹಾಳ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>