<p><strong>ಬೆಂಗಳೂರು:</strong> ಕೌಟುಂಬಿಕ ಹಿಂಸೆ ಅಥವಾ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಪತ್ನಿಯು ಪತಿಯ ವಿರುದ್ಧ ಸುಳ್ಳು ದೂರು ದಾಖಲಿಸುವ ಪ್ರಕರಣಗಳಲ್ಲಿ ಸತ್ಯಾಸತ್ಯತೆ ಪರಿಶೀಲಿಸಿದ ನಂತರವೇ ಸೂಕ್ತ ನಿರ್ಧಾರಕ್ಕೆ ಬರಬೇಕು. <br /> <br /> ಇಂತಹ ಪ್ರಕರಣಗಳಲ್ಲಿ ಅತ್ತೆ-ಮಾವಂದಿರನ್ನು ಬೀದಿಗೆ ತಳ್ಳಲು ಅವಕಾಶ ನೀಡದೆ ಸರ್ಕಾರ ರಕ್ಷಣೆಗೆ ಬರಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಅತ್ತೆಯರ ಸಂಘವು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವಾದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.<br /> <br /> ನಗರದ ಚೌಡಯ್ಯ ಸ್ಮಾರಕ ಭವನದ ಬಳಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ ಫಲಕಗಳನ್ನು ಹಿಡಿದು ಶಾಂತಿಯುತ ಪ್ರತಿಭಟನೆ ನಡೆಸಿದ ಸಂಘದ ಸದಸ್ಯರು, ಆ ಮೂಲಕ ಸರ್ಕಾರದ ಗಮನಸೆಳೆದರು. ಈ ನಡುವೆ, ಮುಖ್ಯಮಂತ್ರಿಗಳು ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ತಮ್ಮ ನಿವಾಸದಲ್ಲಿ ಭೇಟಿ ಮಾಡಲು ಅವಕಾಶ ನೀಡಿದ್ದಾರೆ ಎಂದು ಸಂಘದ ಕಾರ್ಯದರ್ಶಿ ರಾಣಿ ನಾಗರಾಜ್ ತಿಳಿಸಿದರು.<br /> <br /> `ದುಡ್ಡು ಹಾಗೂ ಆಸ್ತಿಯ ಮೇಲೆ ಕಣ್ಣಿಟ್ಟ ಸೊಸೆಯರು ಇಂದು ವಿನಾಕಾರಣ ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ, ಅತ್ತೆ-ಮಾವಂದಿರು, ಅತ್ತಿಗೆ, ಮೈದುನ ಸೇರಿದಂತೆ ಇಡೀ ಕುಟುಂಬದ ವಿರುದ್ಧ ಕೌಟುಂಬಿಕ ಹಿಂಸೆಯ ದೂರು ನೀಡಿ ಜೈಲಿಗೆ ಕಳಿಸುತ್ತಿದ್ದಾರೆ ಎಂದರು.ಇದರಿಂದ ಇಡೀ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತಿದೆ~ ಎಂದು ಅವರು ತಮ್ಮ ಅಳಲನ್ನು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೌಟುಂಬಿಕ ಹಿಂಸೆ ಅಥವಾ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಪತ್ನಿಯು ಪತಿಯ ವಿರುದ್ಧ ಸುಳ್ಳು ದೂರು ದಾಖಲಿಸುವ ಪ್ರಕರಣಗಳಲ್ಲಿ ಸತ್ಯಾಸತ್ಯತೆ ಪರಿಶೀಲಿಸಿದ ನಂತರವೇ ಸೂಕ್ತ ನಿರ್ಧಾರಕ್ಕೆ ಬರಬೇಕು. <br /> <br /> ಇಂತಹ ಪ್ರಕರಣಗಳಲ್ಲಿ ಅತ್ತೆ-ಮಾವಂದಿರನ್ನು ಬೀದಿಗೆ ತಳ್ಳಲು ಅವಕಾಶ ನೀಡದೆ ಸರ್ಕಾರ ರಕ್ಷಣೆಗೆ ಬರಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಅತ್ತೆಯರ ಸಂಘವು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವಾದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.<br /> <br /> ನಗರದ ಚೌಡಯ್ಯ ಸ್ಮಾರಕ ಭವನದ ಬಳಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ ಫಲಕಗಳನ್ನು ಹಿಡಿದು ಶಾಂತಿಯುತ ಪ್ರತಿಭಟನೆ ನಡೆಸಿದ ಸಂಘದ ಸದಸ್ಯರು, ಆ ಮೂಲಕ ಸರ್ಕಾರದ ಗಮನಸೆಳೆದರು. ಈ ನಡುವೆ, ಮುಖ್ಯಮಂತ್ರಿಗಳು ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ತಮ್ಮ ನಿವಾಸದಲ್ಲಿ ಭೇಟಿ ಮಾಡಲು ಅವಕಾಶ ನೀಡಿದ್ದಾರೆ ಎಂದು ಸಂಘದ ಕಾರ್ಯದರ್ಶಿ ರಾಣಿ ನಾಗರಾಜ್ ತಿಳಿಸಿದರು.<br /> <br /> `ದುಡ್ಡು ಹಾಗೂ ಆಸ್ತಿಯ ಮೇಲೆ ಕಣ್ಣಿಟ್ಟ ಸೊಸೆಯರು ಇಂದು ವಿನಾಕಾರಣ ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ, ಅತ್ತೆ-ಮಾವಂದಿರು, ಅತ್ತಿಗೆ, ಮೈದುನ ಸೇರಿದಂತೆ ಇಡೀ ಕುಟುಂಬದ ವಿರುದ್ಧ ಕೌಟುಂಬಿಕ ಹಿಂಸೆಯ ದೂರು ನೀಡಿ ಜೈಲಿಗೆ ಕಳಿಸುತ್ತಿದ್ದಾರೆ ಎಂದರು.ಇದರಿಂದ ಇಡೀ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತಿದೆ~ ಎಂದು ಅವರು ತಮ್ಮ ಅಳಲನ್ನು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>