<p><strong>ಬೆಂಗಳೂರು:</strong> ವರದಕ್ಷಿಣೆ ಕಿರುಕುಳದಿಂದ ಮನನೊಂದ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪುರ ಸಮೀಪದ ದೇವಸಂದ್ರದಲ್ಲಿ ಭಾನುವಾರ ರಾತ್ರಿ ನಡೆದಿದೆ.<br /> ಜ್ಞಾನಭಾರತಿ ಸಮೀಪದ ಮರಿಯಪ್ಪನಪಾಳ್ಯ ನಿವಾಸಿ ಮೋಹನ್ರಾವ್ ಎಂಬುವರ ಪತ್ನಿ ಶೀತಲ್ (27) ಆತ್ಮಹತ್ಯೆ ಮಾಡಿಕೊಂಡವರು. ಅವರ ವಿವಾಹವಾಗಿ ಎರಡು ವರ್ಷಗಳಾಗಿದ್ದವು ಮತ್ತು ಅವರಿಗೆ 11 ತಿಂಗಳ ಹೆಣ್ಣು ಮಗುವಿದೆ.<br /> <br /> ಮನೆಯ ಸಮೀಪವೇ ಹೋಟೆಲ್ ಇಟ್ಟುಕೊಂಡಿದ್ದ ಮೋಹನ್ರಾವ್ ವ್ಯವಹಾರದಲ್ಲಿ ನಷ್ಟ ಅನುಭವಿಸಿ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಸಾಲ ತೀರಿಸುವ ಉದ್ದೇಶಕ್ಕಾಗಿ ಆತ ತವರು ಮನೆಯಿಂದ ಹಣ ತರುವಂತೆ ಪತ್ನಿಗೆ ಪೀಡಿಸುತ್ತಿದ್ದ. <br /> <br /> ಇದರಿಂದ ಬೇಸರಗೊಂಡಿದ್ದ ಶೀತಲ್ ಅವರು ದೇವಸಂದ್ರದಲ್ಲಿರುವ ತವರು ಮನೆಗೆ ಬಂದು ನೆಲೆಸಿದ್ದರು ಎಂದು ಕೆ.ಆರ್.ಪುರ ಪೊಲೀಸರು ಹೇಳಿದ್ದಾರೆ.ಆಗಾಗ್ಗೆ ಪತ್ನಿಯ ತವರು ಮನೆಗೆ ಬರುತ್ತಿದ್ದ ಮೋಹನ್ರಾವ್ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ. ಇದರಿಂದ ಮನನೊಂದಿದ್ದ ಅವರು ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> `ಅಳಿಯ ಹಣಕ್ಕಾಗಿ ಮಗಳಿಗೆ ಕಿರುಕುಳ ನೀಡುತ್ತಿದ್ದ. ಈ ಕಾರಣದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ~ ಎಂದು ಶೀತಲ್ ತಂದೆ ಶ್ಯಾಮ್ಸುಂದರ್ ಅವರು ದೂರು ಕೊಟ್ಟಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಂಡು ಮೋಹನ್ರಾವ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> <strong>ದೂರು ದಾಖಲು:</strong> ಸಂದೀಪ್ (11) ಎಂಬ ಬಾಲಕ ಕುರುಬರಹಳ್ಳಿಯ ಕೆಂಪೇಗೌಡ ಮೈದಾನದ ಬಳಿ ನೀರಿನ ಗುಂಡಿಗೆ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾನವ ಹಕ್ಕುಗಳ ಆಯೋಗವು (ಎಸ್ಎಚ್ಆರ್ಸಿ) ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.<br /> <br /> ಸಂದೀಪ್ ನೀರಿನ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರ ಜತೆ ಮಾತನಾಡಿದ ಎಸ್ಎಚ್ಆರ್ಸಿ ಅಧ್ಯಕ್ಷ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರು, `ಘಟನೆ ಸಂಬಂಧ ದೂರು ದಾಖಲಿಸಿಕೊಳ್ಳಲಾಗಿದೆ~ ಎಂದರು.<br /> <br /> `ಮೈದಾನದಲ್ಲಿ ರಂಗಮಂದಿರ ನಿರ್ಮಾಣ ಕಾಮಗಾರಿಯ ಗುತ್ತಿಗೆ ಪಡೆದಿದ್ದ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ.~ ಎಂದು ನಾಯಕ್ ಹೇಳಿದರು.`ಘಟನೆ ಸಂಬಂಧ ಸ್ಪಷ್ಟನೆ ಕೋರಿ ಬಿಬಿಎಂಪಿ ಆಯುಕ್ತರಿಗೆ ಸದ್ಯದಲ್ಲೇ ನೋಟಿಸ್ ಜಾರಿ ಮಾಡಲಾಗುತ್ತದೆ. ಪ್ರಕರಣದ ತನಿಖೆ ಪೂರ್ಣಗೊಂಡ ಬಳಿಕ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಲಾಗುತ್ತದೆ~ ಎಂದು ತಿಳಿಸಿದರು.<br /> <br /> `ರಂಗಮಂದಿರದ ಪಿಲ್ಲರ್ಗಳ ನಿರ್ಮಾಣಕ್ಕಾಗಿ ಮೈದಾನದಲ್ಲಿ ಬೃಹತ್ ಗುಂಡಿಗಳನ್ನು ತೆಗೆದು ನಾಲ್ಕು ತಿಂಗಳು ಕಳೆದಿದ್ದರೂ ಈವರೆಗೆ ಕಾಮಗಾರಿ ಪೂರ್ಣಗೊಳಿಸಿಲ್ಲ. ಅಲ್ಲದೇ ಗುಂಡಿಗಳ ಸುತ್ತ ತಂತಿ ಬೇಲಿ ಅಳವಡಿಸಿರಲಿಲ್ಲ ಮತ್ತು ಸೂಚನಾ ಫಲಕಗಳನ್ನು ಸಹ ಹಾಕಿರಲಿಲ್ಲ. <br /> <br /> ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ದುರ್ಘಟನೆ ನಡೆದಿದೆ~ ಎಂದರು. ಘಟನೆ ಸಂಬಂಧ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಆಯೋಗದ ಐಜಿಪಿಗೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವರದಕ್ಷಿಣೆ ಕಿರುಕುಳದಿಂದ ಮನನೊಂದ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪುರ ಸಮೀಪದ ದೇವಸಂದ್ರದಲ್ಲಿ ಭಾನುವಾರ ರಾತ್ರಿ ನಡೆದಿದೆ.<br /> ಜ್ಞಾನಭಾರತಿ ಸಮೀಪದ ಮರಿಯಪ್ಪನಪಾಳ್ಯ ನಿವಾಸಿ ಮೋಹನ್ರಾವ್ ಎಂಬುವರ ಪತ್ನಿ ಶೀತಲ್ (27) ಆತ್ಮಹತ್ಯೆ ಮಾಡಿಕೊಂಡವರು. ಅವರ ವಿವಾಹವಾಗಿ ಎರಡು ವರ್ಷಗಳಾಗಿದ್ದವು ಮತ್ತು ಅವರಿಗೆ 11 ತಿಂಗಳ ಹೆಣ್ಣು ಮಗುವಿದೆ.<br /> <br /> ಮನೆಯ ಸಮೀಪವೇ ಹೋಟೆಲ್ ಇಟ್ಟುಕೊಂಡಿದ್ದ ಮೋಹನ್ರಾವ್ ವ್ಯವಹಾರದಲ್ಲಿ ನಷ್ಟ ಅನುಭವಿಸಿ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಸಾಲ ತೀರಿಸುವ ಉದ್ದೇಶಕ್ಕಾಗಿ ಆತ ತವರು ಮನೆಯಿಂದ ಹಣ ತರುವಂತೆ ಪತ್ನಿಗೆ ಪೀಡಿಸುತ್ತಿದ್ದ. <br /> <br /> ಇದರಿಂದ ಬೇಸರಗೊಂಡಿದ್ದ ಶೀತಲ್ ಅವರು ದೇವಸಂದ್ರದಲ್ಲಿರುವ ತವರು ಮನೆಗೆ ಬಂದು ನೆಲೆಸಿದ್ದರು ಎಂದು ಕೆ.ಆರ್.ಪುರ ಪೊಲೀಸರು ಹೇಳಿದ್ದಾರೆ.ಆಗಾಗ್ಗೆ ಪತ್ನಿಯ ತವರು ಮನೆಗೆ ಬರುತ್ತಿದ್ದ ಮೋಹನ್ರಾವ್ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ. ಇದರಿಂದ ಮನನೊಂದಿದ್ದ ಅವರು ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> `ಅಳಿಯ ಹಣಕ್ಕಾಗಿ ಮಗಳಿಗೆ ಕಿರುಕುಳ ನೀಡುತ್ತಿದ್ದ. ಈ ಕಾರಣದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ~ ಎಂದು ಶೀತಲ್ ತಂದೆ ಶ್ಯಾಮ್ಸುಂದರ್ ಅವರು ದೂರು ಕೊಟ್ಟಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಂಡು ಮೋಹನ್ರಾವ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> <strong>ದೂರು ದಾಖಲು:</strong> ಸಂದೀಪ್ (11) ಎಂಬ ಬಾಲಕ ಕುರುಬರಹಳ್ಳಿಯ ಕೆಂಪೇಗೌಡ ಮೈದಾನದ ಬಳಿ ನೀರಿನ ಗುಂಡಿಗೆ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾನವ ಹಕ್ಕುಗಳ ಆಯೋಗವು (ಎಸ್ಎಚ್ಆರ್ಸಿ) ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.<br /> <br /> ಸಂದೀಪ್ ನೀರಿನ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರ ಜತೆ ಮಾತನಾಡಿದ ಎಸ್ಎಚ್ಆರ್ಸಿ ಅಧ್ಯಕ್ಷ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರು, `ಘಟನೆ ಸಂಬಂಧ ದೂರು ದಾಖಲಿಸಿಕೊಳ್ಳಲಾಗಿದೆ~ ಎಂದರು.<br /> <br /> `ಮೈದಾನದಲ್ಲಿ ರಂಗಮಂದಿರ ನಿರ್ಮಾಣ ಕಾಮಗಾರಿಯ ಗುತ್ತಿಗೆ ಪಡೆದಿದ್ದ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ.~ ಎಂದು ನಾಯಕ್ ಹೇಳಿದರು.`ಘಟನೆ ಸಂಬಂಧ ಸ್ಪಷ್ಟನೆ ಕೋರಿ ಬಿಬಿಎಂಪಿ ಆಯುಕ್ತರಿಗೆ ಸದ್ಯದಲ್ಲೇ ನೋಟಿಸ್ ಜಾರಿ ಮಾಡಲಾಗುತ್ತದೆ. ಪ್ರಕರಣದ ತನಿಖೆ ಪೂರ್ಣಗೊಂಡ ಬಳಿಕ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಲಾಗುತ್ತದೆ~ ಎಂದು ತಿಳಿಸಿದರು.<br /> <br /> `ರಂಗಮಂದಿರದ ಪಿಲ್ಲರ್ಗಳ ನಿರ್ಮಾಣಕ್ಕಾಗಿ ಮೈದಾನದಲ್ಲಿ ಬೃಹತ್ ಗುಂಡಿಗಳನ್ನು ತೆಗೆದು ನಾಲ್ಕು ತಿಂಗಳು ಕಳೆದಿದ್ದರೂ ಈವರೆಗೆ ಕಾಮಗಾರಿ ಪೂರ್ಣಗೊಳಿಸಿಲ್ಲ. ಅಲ್ಲದೇ ಗುಂಡಿಗಳ ಸುತ್ತ ತಂತಿ ಬೇಲಿ ಅಳವಡಿಸಿರಲಿಲ್ಲ ಮತ್ತು ಸೂಚನಾ ಫಲಕಗಳನ್ನು ಸಹ ಹಾಕಿರಲಿಲ್ಲ. <br /> <br /> ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ದುರ್ಘಟನೆ ನಡೆದಿದೆ~ ಎಂದರು. ಘಟನೆ ಸಂಬಂಧ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಆಯೋಗದ ಐಜಿಪಿಗೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>