<p><strong>ನವದೆಹಲಿ (ಪಿಟಿಐ): </strong>ಸಮಾಜದಲ್ಲಿ ವರದಕ್ಷಿಣೆ ಸಂಸ್ಕೃತಿ ಬೆಳೆಯುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇದೊಂದು ಸಾಮಾಜಿಕ ಪಿಡುಗಾಗಿದ್ದು ಇದನ್ನು ದೃಢವಾಗಿ ನಿಭಾಯಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.<br /> <br /> ಪ್ರಕರಣ ದಾಖಲಿಸುವಾಗ ವಿಳಂಬವಾಗಿದೆ ಎಂಬ ಕಾರಣಕ್ಕೆ ಮಹಿಳೆಯರು ನೀಡುವ ವರದಕ್ಷಿಣೆ ಕಿರುಕುಳದ ದೂರುಗಳನ್ನು ಕೋರ್ಟ್ಗಳು ವಜಾಗೊಳಿಸಬಾರದು ಎಂದು ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ.<br /> <br /> ವರದಕ್ಷಿಣೆ ನಾಚಿಕೆಗೇಡು ಮತ್ತು ಯಾತನಾಮಯವಾದ ವಾಸ್ತವ ಎಂದು ನ್ಯಾಯಮೂರ್ತಿಗಳಾದ ಟಿ.ಎಸ್.ಠಾಕೂರ್ ಮತ್ತು ವಿಕ್ರಮಜಿತ್ ಸೇನ್ ಅವರನ್ನೊಳಗೊಂಡ ಪೀಠ ಹೇಳಿದೆ.<br /> <br /> ವರದಕ್ಷಿಣೆ ಕಿರುಕುಳ ವಿರುದ್ಧದ ಸಜೆ ಅವಕಾಶಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದೂ ಪೀಠ ಹೇಳಿದೆ. ವರದಕ್ಷಿಣೆಯ ನಾಚಿಕೆಗೇಡು ಮತ್ತು ವೇದನಾಮಯ ವಾಸ್ತವದ ಬಗ್ಗೆ ನ್ಯಾಯಾಧೀಶರು ಕುರುಡಾಗಬಾರದು ಎಂದು ಪೀಠ ಸಲಹೆ ನೀಡಿದೆ. ಈ ಪಿಡುಗು ಎಲ್ಲ ಧಾರ್ಮಿಕ ಸಮುದಾಯಗಳಲ್ಲೂ ಹರಡುತ್ತಿರುವ ಬಗ್ಗೆ ಪೀಠ ಕಳವಳ ವ್ಯಕ್ತಪಡಿಸಿದೆ.<br /> <br /> ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಕುಮ್ಮಕ್ಕು ಪ್ರಕರಣವನ್ನು ಕೈಬಿಡುವಂತೆ ಆರೋಪಿ ಮತ್ತು ಆತನ ಕುಟುಂಬ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಪೀಠ ಈ ತೀರ್ಪು ನೀಡಿದೆ. ಅರ್ಜಿಯನ್ನು ವಜಾಗೊಳಿಸಿ ಪ್ರಕರಣದ ತನಿಖೆ ಮುಂದುವರಿಸಲು ಕೋರ್ಟ್ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಸಮಾಜದಲ್ಲಿ ವರದಕ್ಷಿಣೆ ಸಂಸ್ಕೃತಿ ಬೆಳೆಯುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇದೊಂದು ಸಾಮಾಜಿಕ ಪಿಡುಗಾಗಿದ್ದು ಇದನ್ನು ದೃಢವಾಗಿ ನಿಭಾಯಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.<br /> <br /> ಪ್ರಕರಣ ದಾಖಲಿಸುವಾಗ ವಿಳಂಬವಾಗಿದೆ ಎಂಬ ಕಾರಣಕ್ಕೆ ಮಹಿಳೆಯರು ನೀಡುವ ವರದಕ್ಷಿಣೆ ಕಿರುಕುಳದ ದೂರುಗಳನ್ನು ಕೋರ್ಟ್ಗಳು ವಜಾಗೊಳಿಸಬಾರದು ಎಂದು ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ.<br /> <br /> ವರದಕ್ಷಿಣೆ ನಾಚಿಕೆಗೇಡು ಮತ್ತು ಯಾತನಾಮಯವಾದ ವಾಸ್ತವ ಎಂದು ನ್ಯಾಯಮೂರ್ತಿಗಳಾದ ಟಿ.ಎಸ್.ಠಾಕೂರ್ ಮತ್ತು ವಿಕ್ರಮಜಿತ್ ಸೇನ್ ಅವರನ್ನೊಳಗೊಂಡ ಪೀಠ ಹೇಳಿದೆ.<br /> <br /> ವರದಕ್ಷಿಣೆ ಕಿರುಕುಳ ವಿರುದ್ಧದ ಸಜೆ ಅವಕಾಶಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದೂ ಪೀಠ ಹೇಳಿದೆ. ವರದಕ್ಷಿಣೆಯ ನಾಚಿಕೆಗೇಡು ಮತ್ತು ವೇದನಾಮಯ ವಾಸ್ತವದ ಬಗ್ಗೆ ನ್ಯಾಯಾಧೀಶರು ಕುರುಡಾಗಬಾರದು ಎಂದು ಪೀಠ ಸಲಹೆ ನೀಡಿದೆ. ಈ ಪಿಡುಗು ಎಲ್ಲ ಧಾರ್ಮಿಕ ಸಮುದಾಯಗಳಲ್ಲೂ ಹರಡುತ್ತಿರುವ ಬಗ್ಗೆ ಪೀಠ ಕಳವಳ ವ್ಯಕ್ತಪಡಿಸಿದೆ.<br /> <br /> ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಕುಮ್ಮಕ್ಕು ಪ್ರಕರಣವನ್ನು ಕೈಬಿಡುವಂತೆ ಆರೋಪಿ ಮತ್ತು ಆತನ ಕುಟುಂಬ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಪೀಠ ಈ ತೀರ್ಪು ನೀಡಿದೆ. ಅರ್ಜಿಯನ್ನು ವಜಾಗೊಳಿಸಿ ಪ್ರಕರಣದ ತನಿಖೆ ಮುಂದುವರಿಸಲು ಕೋರ್ಟ್ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>