<p><strong>ಹುಬ್ಬಳ್ಳಿ: </strong>ನಗರದ ಹೊರವಲಯದ ವರೂರು ನವಗ್ರಹ ತೀರ್ಥದಲ್ಲಿರುವ ಆಚಾರ್ಯ ಗುಣಧರನಂದಿ ಮಹಾರಾಜ (ಎಜಿಎಂ) ಎಂಜಿನಿಯರಿಂಗ್ ಕಾಲೇಜು ತನ್ನ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸಿಕೊಡಲು 300ಕ್ಕೂ ಅಧಿಕ ಕಂಪೆನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ.<br /> <br /> ವಿದ್ಯಾರ್ಥಿಗಳಿಗೆ ಒದಗಿಸಲಾದ ಸೌಲಭ್ಯಗಳಿಗೆ ಸಂಬಂಧಿಸಿದಂತೆ `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಕಾಲೇಜಿನ ಸಂಸ್ಥಾಪಕ ಗುಣಧರನಂದಿ ಸ್ವಾಮೀಜಿ ಈ ಮಾಹಿತಿ ನೀಡಿದರು. <br /> <br /> `ಗ್ರಾಮೀಣ ಭಾಗದ ತಾಂತ್ರಿಕ ಸಂಸ್ಥೆಗಳಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕಾಲೇಜು ಎನ್ನುವ ಹಿರಿಮೆ ನಮ್ಮದಾಗಿದ್ದು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಆಯೋಗ (ಎಐಸಿಟಿಇ) ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮಾನ್ಯತೆಯನ್ನೂ ಪಡೆದಿದೆ~ ಎಂದು ವಿವರಿಸಿದರು.<br /> <br /> `ಕಾಲೇಜಿನಲ್ಲಿ ಅಧ್ಯಯನಕ್ಕೆ ಲಭ್ಯವಿರುವ ಐದೂ ಕೋರ್ಸ್ಗಳಿಗೆ (ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ಸ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್, ಸಿವಿಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್) ಪ್ರತ್ಯೇಕ ಕಟ್ಟಡಗಳನ್ನು ಒದಗಿಸಲಾಗಿದ್ದು, ಪ್ರಯೋಗಾಲಯಗಳಿಗೆ ನವದೆಹಲಿಯಿಂದ ಅತ್ಯಾಧುನಿಕ ಉಪಕರಣಗಳನ್ನು ತರಿಸಲಾಗಿದೆ~ ಎಂದು ಅವರು ಹೇಳಿದರು.<br /> <br /> `ಪ್ರಪಂಚದ ಶ್ರೇಷ್ಠ ತಂತ್ರಜ್ಞರಿಂದ ಆನ್ಲೈನ್ ಮೂಲಕ ಉಪನ್ಯಾಸ ಕೊಡಿಸಲು ಆನ್ಲೈನ್ ವ್ಯವಸ್ಥೆ ಮಾಡಲಾಗಿದೆ. ಇ-ಲೈಬ್ರರಿ ಸೌಲಭ್ಯವನ್ನೂ ಕಲ್ಪಿಸಲಾಗಿದೆ~ ಎಂದರು.</p>.<p><br /> `ಎಂಜಿನಿಯರಿಂಗ್ ಶಿಕ್ಷಣದಲ್ಲಿ ಈಚೆಗೆ ಕೊರತೆಯಾಗಿ ಕಾಣುತ್ತಿರುವ ನೈತಿಕ ಶಿಕ್ಷಣವನ್ನು ಈ ಕಾಲೇಜಿನಲ್ಲಿ ಕೊಡಲಾಗುತ್ತದೆ. ರಾಷ್ಟ್ರಭಕ್ತಿಯನ್ನೂ ಬೆಳೆಸಲಾಗುತ್ತದೆ. ಆಡಳಿತ ಮಂಡಳಿ ಕೋಟಾದಲ್ಲಿ ಹತ್ತು ಬಡ ವಿದ್ಯಾರ್ಥಿಗಳಿಗೆ ರಿಯಾಯ್ತಿ ದರದಲ್ಲಿ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ~ ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನಗರದ ಹೊರವಲಯದ ವರೂರು ನವಗ್ರಹ ತೀರ್ಥದಲ್ಲಿರುವ ಆಚಾರ್ಯ ಗುಣಧರನಂದಿ ಮಹಾರಾಜ (ಎಜಿಎಂ) ಎಂಜಿನಿಯರಿಂಗ್ ಕಾಲೇಜು ತನ್ನ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸಿಕೊಡಲು 300ಕ್ಕೂ ಅಧಿಕ ಕಂಪೆನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ.<br /> <br /> ವಿದ್ಯಾರ್ಥಿಗಳಿಗೆ ಒದಗಿಸಲಾದ ಸೌಲಭ್ಯಗಳಿಗೆ ಸಂಬಂಧಿಸಿದಂತೆ `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಕಾಲೇಜಿನ ಸಂಸ್ಥಾಪಕ ಗುಣಧರನಂದಿ ಸ್ವಾಮೀಜಿ ಈ ಮಾಹಿತಿ ನೀಡಿದರು. <br /> <br /> `ಗ್ರಾಮೀಣ ಭಾಗದ ತಾಂತ್ರಿಕ ಸಂಸ್ಥೆಗಳಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕಾಲೇಜು ಎನ್ನುವ ಹಿರಿಮೆ ನಮ್ಮದಾಗಿದ್ದು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಆಯೋಗ (ಎಐಸಿಟಿಇ) ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮಾನ್ಯತೆಯನ್ನೂ ಪಡೆದಿದೆ~ ಎಂದು ವಿವರಿಸಿದರು.<br /> <br /> `ಕಾಲೇಜಿನಲ್ಲಿ ಅಧ್ಯಯನಕ್ಕೆ ಲಭ್ಯವಿರುವ ಐದೂ ಕೋರ್ಸ್ಗಳಿಗೆ (ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ಸ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್, ಸಿವಿಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್) ಪ್ರತ್ಯೇಕ ಕಟ್ಟಡಗಳನ್ನು ಒದಗಿಸಲಾಗಿದ್ದು, ಪ್ರಯೋಗಾಲಯಗಳಿಗೆ ನವದೆಹಲಿಯಿಂದ ಅತ್ಯಾಧುನಿಕ ಉಪಕರಣಗಳನ್ನು ತರಿಸಲಾಗಿದೆ~ ಎಂದು ಅವರು ಹೇಳಿದರು.<br /> <br /> `ಪ್ರಪಂಚದ ಶ್ರೇಷ್ಠ ತಂತ್ರಜ್ಞರಿಂದ ಆನ್ಲೈನ್ ಮೂಲಕ ಉಪನ್ಯಾಸ ಕೊಡಿಸಲು ಆನ್ಲೈನ್ ವ್ಯವಸ್ಥೆ ಮಾಡಲಾಗಿದೆ. ಇ-ಲೈಬ್ರರಿ ಸೌಲಭ್ಯವನ್ನೂ ಕಲ್ಪಿಸಲಾಗಿದೆ~ ಎಂದರು.</p>.<p><br /> `ಎಂಜಿನಿಯರಿಂಗ್ ಶಿಕ್ಷಣದಲ್ಲಿ ಈಚೆಗೆ ಕೊರತೆಯಾಗಿ ಕಾಣುತ್ತಿರುವ ನೈತಿಕ ಶಿಕ್ಷಣವನ್ನು ಈ ಕಾಲೇಜಿನಲ್ಲಿ ಕೊಡಲಾಗುತ್ತದೆ. ರಾಷ್ಟ್ರಭಕ್ತಿಯನ್ನೂ ಬೆಳೆಸಲಾಗುತ್ತದೆ. ಆಡಳಿತ ಮಂಡಳಿ ಕೋಟಾದಲ್ಲಿ ಹತ್ತು ಬಡ ವಿದ್ಯಾರ್ಥಿಗಳಿಗೆ ರಿಯಾಯ್ತಿ ದರದಲ್ಲಿ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ~ ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>