<p><strong>ಕೆಂಗೇರಿ: </strong>ಯಲಹಂಕ, ಕೆ.ಆರ್.ಪುರ, ಕೆಂಗೇರಿ ರೈಲ್ವೆ ಮಾರ್ಗಗಳನ್ನು ಜೋಡಿ ಮಾರ್ಗಕ್ಕೆ ಪರಿವರ್ತಿಸಿ ವರ್ತುಲ ರೈಲು ಸಂಪರ್ಕ ವ್ಯವಸ್ಥೆಯಾಗಿ ಅಭಿವೃದ್ಧಿಪಡಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಶೀಘ್ರವೇ ನಗರದ ಶಾಸಕರ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಸಂಸದ ಅನಂತಕುಮಾರ್ ತಿಳಿಸಿದರು.</p>.<p>ನಾಗರಬಾವಿ ವೃತ್ತದಲ್ಲಿ ಬಿಬಿಎಂಪಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> ‘ರೂ 500 ಕೋಟಿ ವೆಚ್ಚದ ವರ್ತುಲ ರೈಲು ಯೋಜನೆ ಮಂಜೂರು ಮಾಡುವಂತೆ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ, ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಒತ್ತಾಯಿಸಲಾಗುವುದು’ ಎಂದು ಅವರು ಹೇಳಿದರು.</p>.<p>‘ಸ್ಥಳೀಯ ವರ್ತುಲ ರೈಲು ಆರಂಭಗೊಂಡರೆ ನಗರದ ಸಂಚಾರ ದಟ್ಟಣೆ ಕಡಿಮೆಯಾಗುತ್ತದೆ’ ಎಂದು ಆಶಿಸಿದ ಅವರು, ‘ಬಿಡದಿ ಬಳಿ 1250 ಮೆಗಾ ವಾಟ್ ಸ್ಥಾವರದ ಅನಿಲ ಆಧಾರಿತ ವಿದ್ಯುತ್ ಘಟಕ ಆರಂಭಿಸಲಾಗುತ್ತಿದೆ. ಅದನ್ನು 5 ಸಾವಿರ ಮೆಗಾವಾಟ್ಗೆ ಹೆಚ್ಚಿಸಿದರೆ ನಗರಕ್ಕೆ ಸಾಕಾಗುವಷ್ಟು ವಿದ್ಯುತ್ ಪೂರೈಕೆಯಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ: </strong>ಯಲಹಂಕ, ಕೆ.ಆರ್.ಪುರ, ಕೆಂಗೇರಿ ರೈಲ್ವೆ ಮಾರ್ಗಗಳನ್ನು ಜೋಡಿ ಮಾರ್ಗಕ್ಕೆ ಪರಿವರ್ತಿಸಿ ವರ್ತುಲ ರೈಲು ಸಂಪರ್ಕ ವ್ಯವಸ್ಥೆಯಾಗಿ ಅಭಿವೃದ್ಧಿಪಡಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಶೀಘ್ರವೇ ನಗರದ ಶಾಸಕರ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಸಂಸದ ಅನಂತಕುಮಾರ್ ತಿಳಿಸಿದರು.</p>.<p>ನಾಗರಬಾವಿ ವೃತ್ತದಲ್ಲಿ ಬಿಬಿಎಂಪಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> ‘ರೂ 500 ಕೋಟಿ ವೆಚ್ಚದ ವರ್ತುಲ ರೈಲು ಯೋಜನೆ ಮಂಜೂರು ಮಾಡುವಂತೆ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ, ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಒತ್ತಾಯಿಸಲಾಗುವುದು’ ಎಂದು ಅವರು ಹೇಳಿದರು.</p>.<p>‘ಸ್ಥಳೀಯ ವರ್ತುಲ ರೈಲು ಆರಂಭಗೊಂಡರೆ ನಗರದ ಸಂಚಾರ ದಟ್ಟಣೆ ಕಡಿಮೆಯಾಗುತ್ತದೆ’ ಎಂದು ಆಶಿಸಿದ ಅವರು, ‘ಬಿಡದಿ ಬಳಿ 1250 ಮೆಗಾ ವಾಟ್ ಸ್ಥಾವರದ ಅನಿಲ ಆಧಾರಿತ ವಿದ್ಯುತ್ ಘಟಕ ಆರಂಭಿಸಲಾಗುತ್ತಿದೆ. ಅದನ್ನು 5 ಸಾವಿರ ಮೆಗಾವಾಟ್ಗೆ ಹೆಚ್ಚಿಸಿದರೆ ನಗರಕ್ಕೆ ಸಾಕಾಗುವಷ್ಟು ವಿದ್ಯುತ್ ಪೂರೈಕೆಯಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>