<p>ವಸಂತರತ್ನ ಕಲಾ ಪ್ರತಿಷ್ಠಾನ ಕಳೆದ ವರ್ಷದಂತೆ ಈ ಸಲವೂ ಸಿನರ್ಜಿ ಪ್ರಾಪರ್ಟಿ ಡೆವಲೆಪ್ಮೆಂಟ್ ಸಹಯೋಗದಲ್ಲಿ ಹುತಾತ್ಮ ಯೋಧರ 6 ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಮತ್ತು ವಿಕಲಾಂಗ ಮಕ್ಕಳ ಏಳಿಗೆಯಲ್ಲಿ ತೊಡಗಿಸಿಕೊಂಡ ಆಶಾ ಶಾಲೆಗೆ ದೇಣಿಗೆ ಚೆಕ್ ನೀಡಿತು.</p>.<p>ಕಾಮರಾಜ ರಸ್ತೆಯ ಸೇನಾ ಶಾಲೆಯಲ್ಲಿ ಈ ಸಂಬಂಧ ನಡೆದ ಸಮಾರಂಭದಲ್ಲಿ ಕರ್ನಾಟಕ ಮತ್ತು ಕೇರಳ ಸಬ್ ಏರಿಯಾ ಮುಖ್ಯಸ್ಥ ಲೆ.ಜನರಲ್ ಪ್ರಧಾನ್, ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್, ಸಿನರ್ಜಿ ಮುಖ್ಯಸ್ಥ ಸಾಂಖೆ ಪ್ರಸಾದ್ ಇತರರು ಭಾಗವಹಿಸಿದ್ದರು. </p>.<p>ಕಳೆದ ವರ್ಷ 21 ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಗಿತ್ತು. ಈ ಸಲ 21 ಮಕ್ಕಳನ್ನು ಗುರುತಿಸಲಾಗಿದೆ. ಕಾರ್ಗಿಲ್ ಸಮರದ ನಂತರದ ಕಾರ್ಯಾಚರಣೆಗಳಲ್ಲಿ ಮಡಿದ ಯೋಧರ 8 ರಿಂದ 15 ವಯೋಮಾನದ ಮಕ್ಕಳಿಗೆಲ್ಲ ಶಿಕ್ಷಣ ಮುಂದುವರಿಸಲು ನೆರವಾಗುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಪ್ರತಿಷ್ಠಾನ ದ ಸಂಸ್ಥಾಪಕಿ, ನೃತ್ಯ ಕಲಾವಿದೆ ಸುಭಾಷಿಣಿ ವಸಂತ್ ವಿವರಿಸಿದರು. ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರ ರಕ್ಷಣೆ ಕರ್ತವ್ಯ ನಿರ್ವಹಿಸುವಾಗ ಹುತಾತ್ಮರಾದ ಪತಿ ಕರ್ನಲ್ ವಸಂತ್ ಅವರ ನೆನಪಿನಲ್ಲಿ ಸುಭಾಷಿಣಿ 2007ರಲ್ಲಿ ಈ ಪ್ರತಿಷ್ಠಾನ ಸ್ಥಾಪಿಸಿದ್ದಾರೆ. ಇದು ಹುತಾತ್ಮ ಯೋಧರ ಕುಟುಂಬಕ್ಕೆ ಆರ್ಥಿಕ, ಸಾಮಾಜಿಕ ಮತ್ತು ಕಾನೂನು ನೆರವು ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. </p>.<p>ವಿವರಗಳಿಗೆಗೆ:www.vasantharatna.org, 2346 2063.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಸಂತರತ್ನ ಕಲಾ ಪ್ರತಿಷ್ಠಾನ ಕಳೆದ ವರ್ಷದಂತೆ ಈ ಸಲವೂ ಸಿನರ್ಜಿ ಪ್ರಾಪರ್ಟಿ ಡೆವಲೆಪ್ಮೆಂಟ್ ಸಹಯೋಗದಲ್ಲಿ ಹುತಾತ್ಮ ಯೋಧರ 6 ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಮತ್ತು ವಿಕಲಾಂಗ ಮಕ್ಕಳ ಏಳಿಗೆಯಲ್ಲಿ ತೊಡಗಿಸಿಕೊಂಡ ಆಶಾ ಶಾಲೆಗೆ ದೇಣಿಗೆ ಚೆಕ್ ನೀಡಿತು.</p>.<p>ಕಾಮರಾಜ ರಸ್ತೆಯ ಸೇನಾ ಶಾಲೆಯಲ್ಲಿ ಈ ಸಂಬಂಧ ನಡೆದ ಸಮಾರಂಭದಲ್ಲಿ ಕರ್ನಾಟಕ ಮತ್ತು ಕೇರಳ ಸಬ್ ಏರಿಯಾ ಮುಖ್ಯಸ್ಥ ಲೆ.ಜನರಲ್ ಪ್ರಧಾನ್, ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್, ಸಿನರ್ಜಿ ಮುಖ್ಯಸ್ಥ ಸಾಂಖೆ ಪ್ರಸಾದ್ ಇತರರು ಭಾಗವಹಿಸಿದ್ದರು. </p>.<p>ಕಳೆದ ವರ್ಷ 21 ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಗಿತ್ತು. ಈ ಸಲ 21 ಮಕ್ಕಳನ್ನು ಗುರುತಿಸಲಾಗಿದೆ. ಕಾರ್ಗಿಲ್ ಸಮರದ ನಂತರದ ಕಾರ್ಯಾಚರಣೆಗಳಲ್ಲಿ ಮಡಿದ ಯೋಧರ 8 ರಿಂದ 15 ವಯೋಮಾನದ ಮಕ್ಕಳಿಗೆಲ್ಲ ಶಿಕ್ಷಣ ಮುಂದುವರಿಸಲು ನೆರವಾಗುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಪ್ರತಿಷ್ಠಾನ ದ ಸಂಸ್ಥಾಪಕಿ, ನೃತ್ಯ ಕಲಾವಿದೆ ಸುಭಾಷಿಣಿ ವಸಂತ್ ವಿವರಿಸಿದರು. ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರ ರಕ್ಷಣೆ ಕರ್ತವ್ಯ ನಿರ್ವಹಿಸುವಾಗ ಹುತಾತ್ಮರಾದ ಪತಿ ಕರ್ನಲ್ ವಸಂತ್ ಅವರ ನೆನಪಿನಲ್ಲಿ ಸುಭಾಷಿಣಿ 2007ರಲ್ಲಿ ಈ ಪ್ರತಿಷ್ಠಾನ ಸ್ಥಾಪಿಸಿದ್ದಾರೆ. ಇದು ಹುತಾತ್ಮ ಯೋಧರ ಕುಟುಂಬಕ್ಕೆ ಆರ್ಥಿಕ, ಸಾಮಾಜಿಕ ಮತ್ತು ಕಾನೂನು ನೆರವು ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. </p>.<p>ವಿವರಗಳಿಗೆಗೆ:www.vasantharatna.org, 2346 2063.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>