<p>ಕೃಷ್ಣರಾಜಪೇಟೆ: ತಾಲ್ಲೂಕಿನ ನೈಜ ವಸತಿ ರಹಿತರನ್ನು ನಿಷ್ಪಕ್ಷಪಾತದಿಂದ ಗುರುತಿಸಿ ಅಂತಹವರಿಗೆ ವಸತಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಬಿ. ಚಂದ್ರಶೇಖರ್ ತಿಳಿಸಿದರು. <br /> <br /> ಪಟ್ಟಣದ ಶಿಕ್ಷಕರ ಭವನದಲ್ಲಿ ಮಂಗಳವಾರ ತಾಲ್ಲೂಕಿನ ಗ್ರಾ.ಪಂ ಅಧ್ಯಕ್ಷರು, ಕಾರ್ಯದರ್ಶಿಗಳು, ಪುರಸಭಾ ಅಧ್ಯಕ್ಷರು ಮತ್ತು ಸದಸ್ಯರಿ ಗಾಗಿ ಏರ್ಪಡಿಸಿದ್ದ ವಸತಿ ಯೋಜನೆಯ ಸಮರ್ಪಕ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. <br /> <br /> ಸ್ಥಳೀಯ ಪುರಸಭೆಯ ವ್ಯಾಪ್ತಿಗೆ ಬರುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಳೆದ 15 ವರ್ಷಗಳಿಂದಲೂ ನಿವೇಶನ ವಿತರಿಸಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಪಟ್ಟಣದ ಹೊರವಲಯದ ಸಾದುಗೋನಹಳ್ಳಿ ಬಳಿ ಗುರುತಿಸಿರುವ ಭೂಮಿಯ ಒಡೆಯರಿಗೆ ನೀಡಬೇಕಾದ ಪರಿಹಾರದ ಕುರಿತ ಸಮಸ್ಯೆ ಬಗೆಹರಿ ದಿದೆ. ಶೀಘ್ರದಲ್ಲಿ ಈ ಭೂಮಿ ಯನ್ನು ನಿವೇಶನಗಳಾಗಿ ಪರಿವರ್ತಿಸಿ, ಅರ್ಹ ಫಲಾನುಭವಿಗಳಿಗೆ ವಿತರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ರಾಜೀವ್ಗಾಂಧಿ ವಸತಿ ಯೋಜನೆಯ ಪ್ರಧಾನ ವ್ಯವಸ್ಥಾಪಕ ನಿರ್ದೇಶಕ ಮಹದೇವಪ್ರಸಾದ್ ಮಾತನಾಡಿ, ಸರ್ಕಾರದ ವತಿಯಿಂದ ನವಗ್ರಾಮ ಯೋಜನೆ, ಬಸವ, ಇಂದಿರಾ ಆವಾಸ್ ಯೋಜನೆಗಳ ಅಡಿಯಲ್ಲಿ ಅರ್ಹ ಬಡವರಿಗೆ ಸೂರು ಒದಗಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಆದರೆ ಈ ಯೋಜನೆಯ ಸೌಲಭ್ಯ ಈಗಾಗಲೇ ಮನೆಯುಳ್ಳವರ ಹಾಗೂ ಸ್ಥಿತಿವಂತರ ಪಾಲಾಗುತ್ತಿವೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇಂತಹ ಪ್ರಕರಣಗಳು ವರದಿ ಯಾಗದಂತೆ ಗ್ರಾ.ಪಂ ಕಾರ್ಯದರ್ಶಿ ಗಳು ಎಚ್ಚರಿಕೆ ವಹಿಸಬೇಕು ಎಂದರು. <br /> <br /> ವಸತಿ ಯೋಜನೆ ವಿಶೇಷಾಧಿಕಾರಿ ಉಸ್ತಾನ್ ಪಾಷ, ತಾ.ಪಂ. ಉಪಾಧ್ಯಕ್ಷ ಮಹದೇವೇಗೌಡ, ವಿಪಕ್ಷ ಮುಖಂಡ ರವೀಂದ್ರಬಾಬು, ಕಾರ್ಯನಿರ್ವಹ ಣಾಧಿಕಾರಿ ರಾಮಕೃಷ್ಣ, ಪುರಸಭೆ ಅಧ್ಯಕ್ಷ ಕೆ.ಎಚ್.ರಾಮಕೃಷ್ಣ, ಉಪಾ ಧ್ಯಕ್ಷೆ ಚಂದ್ರಕಲಾ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರೇಂಕುಮಾರ್, ಮುಖ್ಯಾಧಿ ಕಾರಿ ಯೋಗಾನಂದ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೃಷ್ಣರಾಜಪೇಟೆ: ತಾಲ್ಲೂಕಿನ ನೈಜ ವಸತಿ ರಹಿತರನ್ನು ನಿಷ್ಪಕ್ಷಪಾತದಿಂದ ಗುರುತಿಸಿ ಅಂತಹವರಿಗೆ ವಸತಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಬಿ. ಚಂದ್ರಶೇಖರ್ ತಿಳಿಸಿದರು. <br /> <br /> ಪಟ್ಟಣದ ಶಿಕ್ಷಕರ ಭವನದಲ್ಲಿ ಮಂಗಳವಾರ ತಾಲ್ಲೂಕಿನ ಗ್ರಾ.ಪಂ ಅಧ್ಯಕ್ಷರು, ಕಾರ್ಯದರ್ಶಿಗಳು, ಪುರಸಭಾ ಅಧ್ಯಕ್ಷರು ಮತ್ತು ಸದಸ್ಯರಿ ಗಾಗಿ ಏರ್ಪಡಿಸಿದ್ದ ವಸತಿ ಯೋಜನೆಯ ಸಮರ್ಪಕ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. <br /> <br /> ಸ್ಥಳೀಯ ಪುರಸಭೆಯ ವ್ಯಾಪ್ತಿಗೆ ಬರುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಳೆದ 15 ವರ್ಷಗಳಿಂದಲೂ ನಿವೇಶನ ವಿತರಿಸಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಪಟ್ಟಣದ ಹೊರವಲಯದ ಸಾದುಗೋನಹಳ್ಳಿ ಬಳಿ ಗುರುತಿಸಿರುವ ಭೂಮಿಯ ಒಡೆಯರಿಗೆ ನೀಡಬೇಕಾದ ಪರಿಹಾರದ ಕುರಿತ ಸಮಸ್ಯೆ ಬಗೆಹರಿ ದಿದೆ. ಶೀಘ್ರದಲ್ಲಿ ಈ ಭೂಮಿ ಯನ್ನು ನಿವೇಶನಗಳಾಗಿ ಪರಿವರ್ತಿಸಿ, ಅರ್ಹ ಫಲಾನುಭವಿಗಳಿಗೆ ವಿತರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ರಾಜೀವ್ಗಾಂಧಿ ವಸತಿ ಯೋಜನೆಯ ಪ್ರಧಾನ ವ್ಯವಸ್ಥಾಪಕ ನಿರ್ದೇಶಕ ಮಹದೇವಪ್ರಸಾದ್ ಮಾತನಾಡಿ, ಸರ್ಕಾರದ ವತಿಯಿಂದ ನವಗ್ರಾಮ ಯೋಜನೆ, ಬಸವ, ಇಂದಿರಾ ಆವಾಸ್ ಯೋಜನೆಗಳ ಅಡಿಯಲ್ಲಿ ಅರ್ಹ ಬಡವರಿಗೆ ಸೂರು ಒದಗಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಆದರೆ ಈ ಯೋಜನೆಯ ಸೌಲಭ್ಯ ಈಗಾಗಲೇ ಮನೆಯುಳ್ಳವರ ಹಾಗೂ ಸ್ಥಿತಿವಂತರ ಪಾಲಾಗುತ್ತಿವೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇಂತಹ ಪ್ರಕರಣಗಳು ವರದಿ ಯಾಗದಂತೆ ಗ್ರಾ.ಪಂ ಕಾರ್ಯದರ್ಶಿ ಗಳು ಎಚ್ಚರಿಕೆ ವಹಿಸಬೇಕು ಎಂದರು. <br /> <br /> ವಸತಿ ಯೋಜನೆ ವಿಶೇಷಾಧಿಕಾರಿ ಉಸ್ತಾನ್ ಪಾಷ, ತಾ.ಪಂ. ಉಪಾಧ್ಯಕ್ಷ ಮಹದೇವೇಗೌಡ, ವಿಪಕ್ಷ ಮುಖಂಡ ರವೀಂದ್ರಬಾಬು, ಕಾರ್ಯನಿರ್ವಹ ಣಾಧಿಕಾರಿ ರಾಮಕೃಷ್ಣ, ಪುರಸಭೆ ಅಧ್ಯಕ್ಷ ಕೆ.ಎಚ್.ರಾಮಕೃಷ್ಣ, ಉಪಾ ಧ್ಯಕ್ಷೆ ಚಂದ್ರಕಲಾ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರೇಂಕುಮಾರ್, ಮುಖ್ಯಾಧಿ ಕಾರಿ ಯೋಗಾನಂದ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>