<p><strong>ಶಿವಮೊಗ್ಗ:</strong> ಭದ್ರಾವತಿಯ ಬಿ.ಎಚ್.ರಸ್ತೆಯ ಕಡದಕಟ್ಟೆಯ ಮೊರಾರ್ಜಿ ವಸತಿ ಶಾಲೆ ಕಟ್ಟಡ ದುಃಸ್ಥಿತಿಯಲ್ಲಿದ್ದು, ಇದನ್ನು ಸರಿಪಡಿಸಿ, ಶಾಶ್ವತ ಕಟ್ಟಡ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.<br /> <br /> ಕಳೆದ ಐದು ವರ್ಷಗಳಿಂದ ರೈಸ್ಮಿಲ್ ಗೋದಾಮಿನಲ್ಲಿ ವಸತಿ ಶಾಲೆ ನಡೆಸಲಾಗುತ್ತಿದೆ. ಈ ಶಾಲೆಯಲ್ಲಿ 250 ವಿದ್ಯಾರ್ಥಿಗಳು ಅಭ್ಯಾಸ ಮಾಡು ತ್ತಿದ್ದಾರೆ. ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಆತಂಕದಲ್ಲಿ ವಿದ್ಯಾಭ್ಯಾಸ ನಡೆಸುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.<br /> <br /> ಇಂತಹ ಕಟ್ಟಡಕ್ಕೆ ರೂ.25 ಸಾವಿರ ಹಾಗೂ ಹೆಚ್ಚುವರಿ ಕಟ್ಟಡಕ್ಕೆ ರೂ. 20ಸಾವಿರ ಸೇರಿದಂತೆ ಒಟ್ಟು ರೂ. 45 ಸಾವಿರ ತಿಂಗಳಿಗೆ ಬಾಡಿಗೆ ನೀಡಲಾ ಗುತ್ತಿದ್ದು, ಇದು ಅತ್ಯಧಿಕ ಎಂದು ಪ್ರತಿಭಟನಾಕಾರರು ಆರೋಪಿಸಿದರು.<br /> ಈ ಗೋದಾಮು ಸುತ್ತ ಸೂಕ್ತ ರಕ್ಷಣಾ ಬೇಲಿ ಇಲ್ಲ. ಶಾಲೆಯ ಸಮೀಪವೇ ಬಿ.ಎಚ್.ರಸ್ತೆ ಹಾದು ಹೋಗಿದ್ದು, ಮಕ್ಕಳ ಓಡಾಟಕ್ಕೆ ಅಪಾಯಕಾರಿ ಯಾಗಿದೆ ಎಂದು ದೂರಿದರು.<br /> <br /> ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಬೇಕು. ಉತ್ತಮ ಕಟ್ಟಡಕ್ಕೆ ಶಾಲೆ ಸ್ಥಳಾಂತರಿ ಸಬೇಕು. ಕಾರೇಹಳ್ಳಿಯಲ್ಲಿ ಗುರುತಿಸಿದ ಭೂಮಿಯಲ್ಲಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.<br /> <br /> ಪ್ರತಿಭಟನೆಯ ನೇತೃತ್ವವನ್ನು ನವ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯ ಅಧ್ಯಕ್ಷ ಗೋ.ರಮೇಶ್ಗೌಡ, ಮಹಿಳಾ ಘಟಕದ ಅಧ್ಯಕ್ಷೆ ಆರ್.ಶಾಂತಮ್ಮ, ಉಪಾಧ್ಯಕ್ಷೆ ಎಲ್.ರೀಟಮ್ಮ, ಪದಾಧಿಕಾರಿಗಳಾದ ನರಸಿಂಹ, ಮಂಜುನಾಥ್, ಮುಮ್ತಾಜ್ಬೇಗಂ, ಸತೀಶ್, ಕಿಶೋರ್, ರಾಜುನಾಯ್ಕ ಮತ್ತಿತರರು ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಭದ್ರಾವತಿಯ ಬಿ.ಎಚ್.ರಸ್ತೆಯ ಕಡದಕಟ್ಟೆಯ ಮೊರಾರ್ಜಿ ವಸತಿ ಶಾಲೆ ಕಟ್ಟಡ ದುಃಸ್ಥಿತಿಯಲ್ಲಿದ್ದು, ಇದನ್ನು ಸರಿಪಡಿಸಿ, ಶಾಶ್ವತ ಕಟ್ಟಡ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.<br /> <br /> ಕಳೆದ ಐದು ವರ್ಷಗಳಿಂದ ರೈಸ್ಮಿಲ್ ಗೋದಾಮಿನಲ್ಲಿ ವಸತಿ ಶಾಲೆ ನಡೆಸಲಾಗುತ್ತಿದೆ. ಈ ಶಾಲೆಯಲ್ಲಿ 250 ವಿದ್ಯಾರ್ಥಿಗಳು ಅಭ್ಯಾಸ ಮಾಡು ತ್ತಿದ್ದಾರೆ. ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಆತಂಕದಲ್ಲಿ ವಿದ್ಯಾಭ್ಯಾಸ ನಡೆಸುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.<br /> <br /> ಇಂತಹ ಕಟ್ಟಡಕ್ಕೆ ರೂ.25 ಸಾವಿರ ಹಾಗೂ ಹೆಚ್ಚುವರಿ ಕಟ್ಟಡಕ್ಕೆ ರೂ. 20ಸಾವಿರ ಸೇರಿದಂತೆ ಒಟ್ಟು ರೂ. 45 ಸಾವಿರ ತಿಂಗಳಿಗೆ ಬಾಡಿಗೆ ನೀಡಲಾ ಗುತ್ತಿದ್ದು, ಇದು ಅತ್ಯಧಿಕ ಎಂದು ಪ್ರತಿಭಟನಾಕಾರರು ಆರೋಪಿಸಿದರು.<br /> ಈ ಗೋದಾಮು ಸುತ್ತ ಸೂಕ್ತ ರಕ್ಷಣಾ ಬೇಲಿ ಇಲ್ಲ. ಶಾಲೆಯ ಸಮೀಪವೇ ಬಿ.ಎಚ್.ರಸ್ತೆ ಹಾದು ಹೋಗಿದ್ದು, ಮಕ್ಕಳ ಓಡಾಟಕ್ಕೆ ಅಪಾಯಕಾರಿ ಯಾಗಿದೆ ಎಂದು ದೂರಿದರು.<br /> <br /> ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಬೇಕು. ಉತ್ತಮ ಕಟ್ಟಡಕ್ಕೆ ಶಾಲೆ ಸ್ಥಳಾಂತರಿ ಸಬೇಕು. ಕಾರೇಹಳ್ಳಿಯಲ್ಲಿ ಗುರುತಿಸಿದ ಭೂಮಿಯಲ್ಲಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.<br /> <br /> ಪ್ರತಿಭಟನೆಯ ನೇತೃತ್ವವನ್ನು ನವ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯ ಅಧ್ಯಕ್ಷ ಗೋ.ರಮೇಶ್ಗೌಡ, ಮಹಿಳಾ ಘಟಕದ ಅಧ್ಯಕ್ಷೆ ಆರ್.ಶಾಂತಮ್ಮ, ಉಪಾಧ್ಯಕ್ಷೆ ಎಲ್.ರೀಟಮ್ಮ, ಪದಾಧಿಕಾರಿಗಳಾದ ನರಸಿಂಹ, ಮಂಜುನಾಥ್, ಮುಮ್ತಾಜ್ಬೇಗಂ, ಸತೀಶ್, ಕಿಶೋರ್, ರಾಜುನಾಯ್ಕ ಮತ್ತಿತರರು ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>