<p><strong>ಬೆಂಗಳೂರು:</strong> `ರಾಜ್ಯದಲ್ಲಿ ವಸತಿ ಸಮಸ್ಯೆಯನ್ನು ಪರಿಹರಿಸುವುದು ಕಷ್ಟದ ಕೆಲಸವಲ್ಲ. ಆದರೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಇದು ಸಾಧ್ಯವಾಗುತ್ತಿಲ್ಲ~ ಎಂದು ಬಿಎಂಎಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ದಯಾನಂದ ಪೈ ತಿಳಿಸಿದರು. <br /> <br /> ಶಿಕ್ಷಣ ಸಂಸ್ಥೆಯ ಅಂತರರಾಷ್ಟ್ರೀಯ ಸಹಕಾರ ವಿಭಾಗ, ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಯುಎನ್ ಹ್ಯಾಬಿಟ್ಯಾಟ್, ವಸತಿ ಇಲಾಖೆ, ರಾಜೀವ್ಗಾಂಧಿ ಗ್ರಾಮೀಣ ಗೃಹ ನಿರ್ಮಾಣ ನಿಗಮ, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಸಂಯುಕ್ತವಾಗಿ ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ `ವಿಶ್ವ ವಸತಿ ದಿನ~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> <br /> `ಕಡಿಮೆ ದರದಲ್ಲಿ ಉತ್ತಮ ದರ್ಜೆಯ ಮನೆಗಳನ್ನು ಒದಗಿಸಬಹುದು. ತಂತ್ರಜ್ಞಾನ ಅಭಿವೃದ್ಧಿ ಹೊಂದಿರುವುದರಿಂದ ಪ್ರತಿದಿನ 150ರಿಂದ 200 ಮನೆಗಳನ್ನು ನಿರ್ಮಿಸಬಹುದಾಗಿದೆ. ಆದರೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಹಲವಾರು ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸಿಲ್ಲ~ ಎಂದರು. <br /> <br /> `ಬಿಡಿಎ ಕೇವಲ ಶ್ರೀಮಂತರಿಗಾಗಿ ನಿವೇಶನಗಳನ್ನು ರೂಪಿಸುತ್ತಿದೆ. ಆದರೆ ಅಲ್ಲಿ ಮನೆ ಕಟ್ಟದೆ ಅದನ್ನು ಮಾರುವವರೇ ಹೆಚ್ಚು. ಒಂದು ಎಕರೆಗೆ 10-12 ನಿವೇಶನಗಳನ್ನು ಮಾತ್ರ ರೂಪಿಸಬಹುದು. ನಿವೇಶನ ನೀಡುವ ಬದಲು ಮನೆಗಳನ್ನು ಕಟ್ಟಿಕೊಡಲು ಬಿಡಿಎ ಮುಂದಾಗಬೇಕು. ಆಗ ನಿವೇಶನ ಹಂಚಿಕೆ ನಿಜವಾದ ಸಾರ್ಥಕತೆ ಕಾಣುತ್ತದೆ. ಯೋಜನಾ ಬದ್ಧವಾಗಿ ಮನೆಗಳನ್ನು ಕಟ್ಟುವುದರಿಂದ ಪ್ರತಿ ಎಕರೆಗೆ 30ರಿಂದ 40 ಮನೆಗಳನ್ನು ನಿರ್ಮಿಸಬಹುದಾಗಿದೆ~ ಎಂದು ಅವರು ಅಭಿಪ್ರಾಯಪಟ್ಟರು. <br /> <br /> ರಾಜೀವ್ಗಾಂಧಿ ಗ್ರಾಮೀಣ ಗೃಹ ನಿರ್ಮಾಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎನ್. ಮಹದೇವ ಪ್ರಸಾದ್ ಮಾತನಾಡಿ `ನಿಜವಾದ ಫಲಾನುಭವಿಗಳಿಗೆ ಮನೆಗಳು ದೊರೆಯುವಂತೆ ಮಾಡುವುದು ಸವಾಲಿನ ಕೆಲಸವಾಗಿದೆ. ನಿಗಮದ ವತಿಯಿಂದ ಆನ್ಲೈನ್ ಮೂಲಕ ನೇರವಾಗಿ ಫಲಾನುಭವಿಗಳಿಗೆ ಸಬ್ಸಿಡಿ, ಸಾಲ ಸೌಲಭ್ಯವನ್ನು ತಲುಪಿಸುವ ಯತ್ನ ಮಾಡಲಾಗಿದೆ. ನಿರ್ಮಾಣವಾದ ಮನೆಗಳ ದಾಖಲಾತಿಗೆ ಜಿಪಿಎಸ್ ತಂತ್ರಜ್ಞಾನ ಉಪಯೋಗಿಸಲಾಗುತ್ತಿದೆ~ ಎಂದರು.<br /> <br /> `ಈವರೆಗೆ 21 ಲಕ್ಷ ಮನೆಗಳನ್ನು ನಿರ್ಮಿಸಲು ಪ್ರೋತ್ಸಾಹಧನ ನೀಡಲಾಗಿದೆ. ಇನ್ನೂ 25 ಲಕ್ಷ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಆಸರೆ ಯೋಜನೆಯಡಿ ಕೂಡ ನಿಗಮ ಮನೆಗಳನ್ನು ನಿರ್ಮಿಸುತ್ತಿದೆ~ ಎಂದರು. <br /> <br /> ವಿಭಾಗದ ಕಾರ್ಯನಿರ್ವಾಹಕ ಅಧ್ಯಕ್ಷ ಡಾ. ಎಚ್.ಆರ್. ವಿಶ್ವನಾಥ್ ಮಾತನಾಡಿದರು. ಕೊಳಚೆ ಅಭಿವೃದ್ಧಿ ಮಂಡಳಿಯ ಜಂಟಿ ಆಯುಕ್ತ ಡಾ. ಸಯ್ಯಿದ್ ಅಲಿ ರಜ್ವಿ, ಬಿಎಂಎಸ್ ಕಾಲೇಜಿನ ಉಪ ಪ್ರಾಂಶುಪಾಲ ಡಾ.ಶೇಖರ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ರಾಜ್ಯದಲ್ಲಿ ವಸತಿ ಸಮಸ್ಯೆಯನ್ನು ಪರಿಹರಿಸುವುದು ಕಷ್ಟದ ಕೆಲಸವಲ್ಲ. ಆದರೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಇದು ಸಾಧ್ಯವಾಗುತ್ತಿಲ್ಲ~ ಎಂದು ಬಿಎಂಎಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ದಯಾನಂದ ಪೈ ತಿಳಿಸಿದರು. <br /> <br /> ಶಿಕ್ಷಣ ಸಂಸ್ಥೆಯ ಅಂತರರಾಷ್ಟ್ರೀಯ ಸಹಕಾರ ವಿಭಾಗ, ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಯುಎನ್ ಹ್ಯಾಬಿಟ್ಯಾಟ್, ವಸತಿ ಇಲಾಖೆ, ರಾಜೀವ್ಗಾಂಧಿ ಗ್ರಾಮೀಣ ಗೃಹ ನಿರ್ಮಾಣ ನಿಗಮ, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಸಂಯುಕ್ತವಾಗಿ ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ `ವಿಶ್ವ ವಸತಿ ದಿನ~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> <br /> `ಕಡಿಮೆ ದರದಲ್ಲಿ ಉತ್ತಮ ದರ್ಜೆಯ ಮನೆಗಳನ್ನು ಒದಗಿಸಬಹುದು. ತಂತ್ರಜ್ಞಾನ ಅಭಿವೃದ್ಧಿ ಹೊಂದಿರುವುದರಿಂದ ಪ್ರತಿದಿನ 150ರಿಂದ 200 ಮನೆಗಳನ್ನು ನಿರ್ಮಿಸಬಹುದಾಗಿದೆ. ಆದರೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಹಲವಾರು ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸಿಲ್ಲ~ ಎಂದರು. <br /> <br /> `ಬಿಡಿಎ ಕೇವಲ ಶ್ರೀಮಂತರಿಗಾಗಿ ನಿವೇಶನಗಳನ್ನು ರೂಪಿಸುತ್ತಿದೆ. ಆದರೆ ಅಲ್ಲಿ ಮನೆ ಕಟ್ಟದೆ ಅದನ್ನು ಮಾರುವವರೇ ಹೆಚ್ಚು. ಒಂದು ಎಕರೆಗೆ 10-12 ನಿವೇಶನಗಳನ್ನು ಮಾತ್ರ ರೂಪಿಸಬಹುದು. ನಿವೇಶನ ನೀಡುವ ಬದಲು ಮನೆಗಳನ್ನು ಕಟ್ಟಿಕೊಡಲು ಬಿಡಿಎ ಮುಂದಾಗಬೇಕು. ಆಗ ನಿವೇಶನ ಹಂಚಿಕೆ ನಿಜವಾದ ಸಾರ್ಥಕತೆ ಕಾಣುತ್ತದೆ. ಯೋಜನಾ ಬದ್ಧವಾಗಿ ಮನೆಗಳನ್ನು ಕಟ್ಟುವುದರಿಂದ ಪ್ರತಿ ಎಕರೆಗೆ 30ರಿಂದ 40 ಮನೆಗಳನ್ನು ನಿರ್ಮಿಸಬಹುದಾಗಿದೆ~ ಎಂದು ಅವರು ಅಭಿಪ್ರಾಯಪಟ್ಟರು. <br /> <br /> ರಾಜೀವ್ಗಾಂಧಿ ಗ್ರಾಮೀಣ ಗೃಹ ನಿರ್ಮಾಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎನ್. ಮಹದೇವ ಪ್ರಸಾದ್ ಮಾತನಾಡಿ `ನಿಜವಾದ ಫಲಾನುಭವಿಗಳಿಗೆ ಮನೆಗಳು ದೊರೆಯುವಂತೆ ಮಾಡುವುದು ಸವಾಲಿನ ಕೆಲಸವಾಗಿದೆ. ನಿಗಮದ ವತಿಯಿಂದ ಆನ್ಲೈನ್ ಮೂಲಕ ನೇರವಾಗಿ ಫಲಾನುಭವಿಗಳಿಗೆ ಸಬ್ಸಿಡಿ, ಸಾಲ ಸೌಲಭ್ಯವನ್ನು ತಲುಪಿಸುವ ಯತ್ನ ಮಾಡಲಾಗಿದೆ. ನಿರ್ಮಾಣವಾದ ಮನೆಗಳ ದಾಖಲಾತಿಗೆ ಜಿಪಿಎಸ್ ತಂತ್ರಜ್ಞಾನ ಉಪಯೋಗಿಸಲಾಗುತ್ತಿದೆ~ ಎಂದರು.<br /> <br /> `ಈವರೆಗೆ 21 ಲಕ್ಷ ಮನೆಗಳನ್ನು ನಿರ್ಮಿಸಲು ಪ್ರೋತ್ಸಾಹಧನ ನೀಡಲಾಗಿದೆ. ಇನ್ನೂ 25 ಲಕ್ಷ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಆಸರೆ ಯೋಜನೆಯಡಿ ಕೂಡ ನಿಗಮ ಮನೆಗಳನ್ನು ನಿರ್ಮಿಸುತ್ತಿದೆ~ ಎಂದರು. <br /> <br /> ವಿಭಾಗದ ಕಾರ್ಯನಿರ್ವಾಹಕ ಅಧ್ಯಕ್ಷ ಡಾ. ಎಚ್.ಆರ್. ವಿಶ್ವನಾಥ್ ಮಾತನಾಡಿದರು. ಕೊಳಚೆ ಅಭಿವೃದ್ಧಿ ಮಂಡಳಿಯ ಜಂಟಿ ಆಯುಕ್ತ ಡಾ. ಸಯ್ಯಿದ್ ಅಲಿ ರಜ್ವಿ, ಬಿಎಂಎಸ್ ಕಾಲೇಜಿನ ಉಪ ಪ್ರಾಂಶುಪಾಲ ಡಾ.ಶೇಖರ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>